News Karnataka Kannada
Friday, April 26 2024
ಮೈಸೂರು

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟು: 84 ಅಡಿಗೆ ಇಳಿದ ನೀರಿನ ಮಟ್ಟ

Mandya: KRS Dam: Water level down to 84 feet
Photo Credit :

ಮಂಡ್ಯ: ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ 84 ಅಡಿಗೆ ಕುಸಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಲಾಶಯದ ನೀರಿನ ಮಟ್ಟ 18 ಅಡಿ ಕಡಿಮೆಯಾಗಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಇದ್ದು, ಭಾನುವಾರ 84.80 ಅಡಿ ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನ ಡ್ಯಾಂನಲ್ಲಿ 102.80 ಅಡಿ ನೀರು ಸಂಗ್ರಹವಾಗಿತ್ತು. ಸದ್ಯ ಜಲಾಶಯಕ್ಕೆ 508 ಕ್ಯೂಸೆಕ್ ಒಳಹರಿವಿದ್ದು ಜಲಾಶಯದಿಂದ 3726 ಕ್ಯೂಸೆಕ್ ನೀರು ಬಿಡಲಾಗುತ್ತಿದೆ.

ಕಳೆದ ವರ್ಷ ಇದೇ ದಿನ ಜಲಾಶಯದ ಒಳಹರಿವು 16814 ಕ್ಯೂಸೆಕ್ ಇದ್ದರೆ, 6242 ಕ್ಯೂಸೆಕ್ ನೀರು ಬಿಡಲಾಗಿತ್ತು. ಕಳೆದ ವರ್ಷ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿತ್ತು. ಇದರಿಂದ ಬೇಸಿಗೆ ಕಾಲದಲ್ಲಿಯೇ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳವಾಗಿತ್ತು. ಈ ಬಾರಿ ಮಳೆ ಕೊರತೆಯಿಂದ ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಕಡಿಮೆಯಾಗತೊಡಗಿದೆ. ಪ್ರಸ್ತುತ ಜಲಾಶಯದಲ್ಲಿ ಸಂಗ್ರಹವಾಗಿರುವ ಕುಡಿಯಲು ನೀರಿಗೆ ಸಾಕಾಗುಷ್ಟು ಸಂಗ್ರಹವಿದೆ. ಬೇಸಿಗೆ ಮುಗಿಯುವವರೆಗೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವುದಿಲ್ಲ. ನಿರೀಕ್ಷೆಯಂತೆ ಮುಂಗಾರು ಮಳೆ ಬಂದರೆ ರೈತರಿಗೆ ನಿರಾಳವಾಗಲಿದೆ. ಕೃಷಿ ಚಟುವಟಿಕೆ ಆರಂಭಿಸಲು ಮುಂದಾಗಿರುವ ರೈತರು ಇದೀಗ ಮುಂಗಾರು ಮಳೆಯತ್ತ ಮುಖ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು