News Kannada
Wednesday, March 22 2023

ಮಂಡ್ಯ

ರಾಜ್ಯದಲ್ಲೇ ಅಪ್ಪಟ ಕನ್ನಡ ಮಾತನಾಡುವ ಜಿಲ್ಲೆ ಎಂದಾದರೆ ಅದು ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ

Photo Credit :

ಮಂಡ್ಯ: ರಾಜ್ಯದಲ್ಲೇ ಅಪ್ಪಟ ಕನ್ನಡ ಮಾತನಾಡುವ ಜಿಲ್ಲೆ ಎಂದಾದರೆ ಅದು ಮಂಡ್ಯ ಮಾತ್ರಘಿ. ಮಂಡ್ಯ ಜಿಲ್ಲೆಯಲ್ಲಿ ಎಲ್ಲರೂ ಕನ್ನಡವನ್ನೇ ಮಾತನಾಡುವ ಮೂಲಕ ಕನ್ನಡಕ್ಕೆ ದೊಡ್ಡ ಕೊಡುಗೆಯನ್ನೇ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಬಣ್ಣಿಸಿದರು.

ನಗರದ ಸರ್ ಎಂ.ವಿ. ಕ್ರೀಡಾಂಗಣದಲ್ಲಿ ನಡೆದ ರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಕ್ಕರೆ ನಾಡು ಮಂಡ್ಯ ಜಿಲ್ಲೆಗೆ ನಮ್ಮ ಸರ್ಕಾರ ಸಾವಿರಾರು ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಿದ್ದು, ಕಾಮಗಾರಿ ತೀವ್ರಗತಿಯಲ್ಲಿ ಸಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 2,63,433 ರೈತ ಲಾನುಭವಿಗಳಿಗೆ ಒಟ್ಟು ರೂ. 394 ಕೋಟಿ ಸಹಾಯಧನ ಪಾವತಿಸಲಾಗಿದೆ. ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 19,511 ರೈತರಿಗೆ ವಿವಿಧ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ ಎಂದು ಹೇಳಿದರು.

ಮಂಡ್ಯ ಜಿಲ್ಲೆಯ 1204 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಯೋಜನೆ ಜಲಧಾರೆ ಯೋಜನೆ’ಗೆ ರೂ.1791 ಕೋಟಿ ಮೊತ್ತದ ಕಾಮಗಾರಿ ಮಂಜೂರು ಮಾಡಲಾಗಿದ್ದು 2024 ರೊಳಗೆ ಕಾಮಗಾರಿ ಪೂರ್ಣಗೊಳಿಸುವ ವಿಶ್ವಾಸವಿದೆ. ಜಿಲ್ಲೆಯ ರೈತರ ಆರ್ಥಿಕ ಜೀವನಾಡಿಯಾಗಿರುವ ಮೈ ಷುರ್ಗ ಸಕ್ಕರೆ ಕಾರ್ಖಾನೆಯನ್ನು ಸರ್ಕಾರವೇ ನಡೆಸಲು ಸಾಧ್ಯವಿರುವ ಎಲ್ಲಾ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಡಾ. ನಾರಾಯಣಗೌಡ ಅವರು ಹೇಳಿದರು.

ಅಲ್ಲದೇ, ಮುಖ್ಯಮಂತ್ರಿಗಳು ಘೋಷಿಸಿದ ಅಮೃತ ಮಹೋತ್ಸವ ಯೋಜನೆಯಡಿ ಜಿಲ್ಲೆಯ 27 ಗ್ರಾಮ ಪಂಚಾಯ್ತಿ, 27 ಗ್ರಾಮೀಣ ವಸತಿ ಯೋಜನೆ, 25 ಶಾಲಾ ಸೌಲಭ್ಯ ಯೋಜನೆ, 25 ಆರೋಗ್ಯ ಮೂಲ ಸೌಕರ್ಯ ಉನ್ನತ್ತೀಕರಣ, 25 ಅಂಗನವಾಡಿ ಕೇಂದ್ರಗಳು ಹಾಗೂ 325 ಸ್ವ ಸಹಾಯ ಕಿರು ಉದ್ದಿಮೆಗಳನ್ನು ಆಯ್ಕೆ ಮಾಡಲಾಗಿದೆ.

ಜನರ ಆರ್ಶಿವಾದದಿಂದ ಆಡಳಿತಕ್ಕೆ ಬಂದ ನಮ್ಮ ಸರ್ಕಾರ ಹಲವಾರು ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ಹೇಳಿದರು. ನಮ್ಮ ಸರ್ಕಾರ ಕನ್ನಡದ ನೆಲ, ಜಲ, ಭಾಷೆಗೆ ಎಲ್ಲ ರೀತಿಯಲ್ಲು ಹೆಗಲು ಕೊಟ್ಟಿದೆ. ಮುಂದೆಯೂ ಕೊಡುತ್ತದೆ. ಕನ್ನಡ ನಮ್ಮ ಬದುಕು ಹಾಗೂ ಉಸಿರು. ಇದನ್ನು ಉಳಿಸೋಣ ಬೆಳೆಸೋಣ ಎಂದು ಸಚಿವ ಡಾ.ನಾರಾಯಣಗೌಡ ಅವರು ಕರೆ ನೀಡಿದರು.

ಇದೆ ವೇಳೆ ಕನ್ನಡ ರಾಜ್ಯೋತ್ಸವದ ರಾಜ್ಯ ಪ್ರಶಸ್ತಿಗೆ ಭಾಜನರಾದ ಮಂಡ್ಯ ಜಿಲ್ಲೆಯ ಡಾ. ರಾಮಕೃಷ್ಣೆಗೌಡ ಅವರಿಗೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದಿಸಿ, ಸನ್ಮಾನಿಸಿದರು. ಮಂಡ್ಯ ಶಾಸಕ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ, ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ, ನಗರಸಭೆ ಅಧ್ಯಕ್ಷ ಮಂಜು, ಜಿಲ್ಲಾಧಿಕಾರಿ ಅಶ್ವಥಿ ಸೇರಿದಂತೆ ಹಲವರು ಉಪಸ್ಥಿತರಿದ್ದರು .

See also  ನಾಲೆಯಲ್ಲಿ ಈಜಲು ಹೋಗಿ ಮೂವರು ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು