News Kannada
Saturday, March 25 2023

ಮಂಡ್ಯ

30 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಡ್ಯ ಕ್ರೀಡಾಂಗಣಗಳ ಅಭಿವೃದ್ಧಿ : ಸಚಿವ ಡಾ. ನಾರಾಯಣಗೌಡ

Photo Credit :

ಮಂಡ್ಯ: 30 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಡ್ಯ ಕ್ರೀಡಾಂಗಣಗಳ ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅವರು ಹೇಳಿದರು.

ಮಂಡ್ಯದ ಜಿಲ್ಲಾ ಕ್ರೀಡಾಂಗಣದ ಬಳಿ ಎರಡು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಬಾಲಕಿಯರ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಶಂಕುಸ್ಥಾಪನೆ ಹಾಗೂ ಎರಡು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸಚಿವ ಡಾ.ನಾರಾಯಣಗೌಡ ಅವರು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಜಿಲ್ಲೆಯ ಹೆಣ್ಣುಮಕ್ಕಳಿಗೆ ಅನುಕೂಲವಾಗಲಿ ಎಂದು ಕೋಟಿ ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯವನ್ನು ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಬಾಲಕಿಯರು ಕ್ರೀಡೆಯಲ್ಲಿ ಹೆಚ್ಚಿನ ಸಾಧನೆ ಮಾಡಲು ಅನುಕೂಲ ಆಗಲಿದೆ ಎಂದು ಸಚಿವ ಡಾ. ನಾರಾಯಣಗೌಡ ಅವರು ತಿಳಿಸಿದರು.

ಕ್ರೀಡಾ ವಿಜ್ಞಾನ ಕೇಂದ್ರ ಬೆಂಗಳೂರಿನಲ್ಲಿ ಮಾತ್ರ ಇತ್ತು. ರಾಜ್ಯದಲ್ಲಿಯೇ ಎರಡನೆಯದಾಗಿ ಮಂಡ್ಯ ಜಿಲ್ಲೆಯಲ್ಲಿ ಆರಂಭ ಮಾಡಲಾಗಿದೆ. ಇದು ಮಂಡ್ಯ ಜಿಲ್ಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಶಕ್ತಿ ತುಂಬಲು ಸಹಕಾರಿಯಾಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಕ್ರೀಡಾ ಇಲಾಖೆ ವತಿಯಿಂದ ಮಂಡ್ಯ ಜಿಲ್ಲೆಯಲ್ಲಿ 30 ಕೋಟಿ ವೆಚ್ಚದಲ್ಲಿ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮಂಡ್ಯ ಕ್ರೀಡಾಂಗಣಕ್ಕೆ 10 ಕೋಟಿ ಮಂಜೂರಾಗಿದೆ. ಕೆರ್ಆ ಪೇಟೆ ತಾಲ್ಲೂಕು ಕ್ರೀಡಾಂಗಣ ಅಭಿವೃದ್ದಿಗೆ 15 ಕೋಟಿ ರೂ. ಮಂಜೂರಾಗಿದ್ದು, ಟೆಂಡರ್ ಆಹ್ವಾನಿಸಲಾಗಿದೆ ಎಂದು ಸಚಿವ ಡಾ ನಾರಾಯಣಗೌಡ ಅವರು ಹೇಳಿದರು.

ಮಂಡ್ಯ ನಗರದಲ್ಲಿ 24 ಲಕ್ಷ ವೆಚ್ಚದಲ್ಲಿ ಹೊರಾಂಗಣ ಜಿಮ್ ನಿರ್ಮಿಸಲು ಅನುಮೋದನೆ ನೀಡಲಾಗಿದೆ. ಮಂಡ್ಯ ತಾಲೂಕಿನ ಕಾರಸವಾಡಿ ಹಾಗೂ ಶ್ರೀರಂಗಪಟ್ಟಣದ ಮೇಳಾಪುರದಲ್ಲಿ ತಲಾ 10 ಲಕ್ಷ ವೆಚ್ಚದಲ್ಲಿ ಗರಡಿ ಮನೆ ನಿರ್ಮಿಸಲು ಮಂಜೂರು ಮಾಡಲಾಗಿದೆ. ಜಿಲ್ಲೆಯಲ್ಲಿ 175 ಕ್ರೀಡಾ ಪ್ರತಿಭೆಗಳನ್ನು ಗುರುತಿಸಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಯಲ್ಲಿ ಭಾಗವಹಿಸಬೇಕು. ದೇಶದಲ್ಲೇ ನಂಬರ್ ಒನ್ ಸ್ಥಾನಕ್ಕೆ ತೆಗೆದುಕೊಂಡು ಹೋಗಲು ಕೆಲಸ ಮಾಡಲಾಗುತ್ತಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು. ಕಾರ್ಯಕ್ರಮದಲ್ಲಿ ಶಾಸಕ ಶ್ರೀನಿವಾಸ್, ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ, ಅಪ್ಪಾಜಿಗೌಡ, ಜಿಲ್ಲಾಧಿಕಾರಿ ಅಶ್ವಥಿ ಸೇರಿದಂತೆ ಹಲವರು ಉಪಸ್ಥಿತರಿದ್ದರು .

See also  ಪಾಂಡವಪುರ: ಸಾಲಬಾಧೆ ತಾಳಲಾರದೇ ತಾಯಿ-ಮಗಳು ಬಾವಿಗೆ ಹಾರಿ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು