News Kannada
Saturday, April 01 2023

ಮಂಡ್ಯ

ಶೀಘ್ರವೇ 15 ಸಾವಿರ ಶಿಕ್ಷಕರ ನೇಮಕ; ಸಚಿವ ಬಿ.ಸಿ ನಾಗೇಶ್‌

Photo Credit :

ಮಂಡ್ಯ : ಶಿಕ್ಷಕ ಹುದ್ದೆಯ ನಿರೀಕ್ಷಿತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಶೀಘ್ರವೇ 15 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳುವುದಾಗಿ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ತಿಳಿಸಿದ್ದಾರೆ.

ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಶಾಲೆಯಲ್ಲಿ ಮೊಟ್ಟೆ ನೀಡುವ ವಿವಾದ ಬಗ್ಗೆ ಪ್ರತಿಕ್ರಿಯಿಸಿದರು. ಅಪೌಷ್ಟಿಕತೆಯಿಂದ ಮಕ್ಕಳು ತುಂಬಾ ಒದ್ದಾಡುತ್ತಿವೆ. ಹಾಗಾಗಿ ಮಕ್ಕಳಿಗೆ ಪ್ರೋಟೀನ್‌ಗಾಗಿ ಮೊಟ್ಟೆ ನೀಡಲಾಗುತ್ತಿದೆ. ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ತಿನ್ನಲು ಒತ್ತಡ ಹೇರಿಲ್ಲ. ಮಕ್ಕಳಿಗೆ ಮೊಟ್ಟೆ ಜತೆ ಬಾಳೆ ಹಣ್ಣು ಕೂಡ ಕೊಡುತ್ತಿದ್ದೇವೆ. ಈ ಬಗ್ಗೆ ತಜ್ಞರು ಸಹ ಸಲಹೆ ನೀಡಿದ್ದಾರೆ. ಇನ್ನು ಪ್ರೋಟೀನ್‌ ಯುಕ್ತ ಪದಾರ್ಥ ಆಯ್ಕೆ ಮಾಡುತ್ತಿದ್ದೇವೆ. ತಜ್ಞರು ಒಪ್ಪಿದರೆ ಮುಂದಿನ ದಿನಗಳಲ್ಲಿ ಜಾರಿ ಮಾಡುತ್ತೇವೆ’ ಎಂದರು.

ಇನ್ನು ‘ಕೊರೊನಾ ಕಾರಣದಿಂದ ಯಾವುದೇ ಕಾರಣಕ್ಕೂ ಶಾಲಾ-ಕಾಲೇಜುಗಳನ್ನ ಮುಚ್ಚುವುದಿಲ್ಲ. 1.2 ಕೋಟಿ ಮಕ್ಕಳ ಪೈಕಿ 102 ಮಕ್ಕಳಿಗೆ ಮಾತ್ರ ಕೊರೊನಾ ಸೋಂಕು ದೃಢಪಟ್ಟಿದೆ. ವಸತಿ ಶಾಲೆಗಳಲ್ಲಿ ಮಾತ್ರ ಕೊರೊನಾ ಸೋಂಕು ಪತ್ತೆಯಾಗಿದೆ. ಇನ್ನು ವಸತಿ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ಸೋಂಕು ಕಂಡುಬಂದಿಲ್ಲ. ಹೆಚ್ಚಿನ ಮುನ್ನೆಚ್ಚರಿಕೆ ಕ್ರಮ ಕೂಗೊಂಡು ಶಾಲೆಗಳನ್ನ ನಡೆಸ್ತೇವೆ. ಆದ್ರೆ, ಯಾವುದೇ ಕಾರಣಕ್ಕೂ ಶಾಲಾ ಕಾಲೇಜುಗಳು ಮುಚ್ಚಲ್ಲ. ಇನ್ನು ಶೀಘ್ರವೇ 15 ಸಾವಿರ ಶಿಕ್ಷಕರ ನೇಮಕಕ್ಕೆ ಆದೇಶ ಪ್ರಕಟಿಸ್ತೇವೆ’ ಎಂದರು.

See also  ಅನುಕಂಪ ಗಿಟ್ಟಿಸುವ ತಂತ್ರಗಳು ಯಾವಾಗಲೂ ಫಲ ಕೊಡುವುದಿಲ್ಲ; ನಿಖಿಲ್ ಕುಮಾರಸ್ವಾಮಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು