News Kannada
Wednesday, October 04 2023
ಮಂಡ್ಯ

ಮಂಡ್ಯ: ಸೆ.10ಕ್ಕೆ ಶುಭಶ್ರೀಡಿವರ ಮೂರು ಪುಸ್ತಕಗಳು ಲೋಕಾರ್ಪಣೆ

Mandya: Three books of Subhashree Devi will be released on Sept. 10.
Photo Credit : By Author

ಮಂಡ್ಯ: ಐಡಿಯಲ್ ಪಬ್ಲಿಕೇಶನ್ಸ್ ವತಿಯಿಂದ ಲೇಖಕಿ ಡಾ.ಶುಭಶ್ರೀ ಪ್ರಸಾದ್ ಅವರ ಮೂರು ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಇದೇ ಸೆಪ್ಟಂಬರ್ 10ರಂದು ಶನಿವಾರ ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ನಗರದ ಕರ್ನಾಟಕ ಸಂಘದಲ್ಲಿ ನಡೆಯಲಿರುವ ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಪ್ರಖ್ಯಾತ ಹಾಸ್ಯ ಲೇಖಕಿ ಮತ್ತು ನಿವೃತ್ತ ಪ್ರಾಧ್ಯಾಪಕರಾದ ಮಂಗಳೂರಿನ ಭುವನೇಶ್ವರಿ ಹೆಗಡೆ ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದಾರೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ತೈಲೂರು ವೆಂಕಟಕೃಷ್ಣ ವಹಿಸಲಿದ್ದು, ಬೆಂಗಳೂರಿನ ಮನೋವಿಜ್ಞಾನಿ ಹಾಗೂ ಲೇಖಕಿ ಕಪಿಲಾ ಶ್ರೀಧರ್ ಪುಸ್ತಕಗಳ ಕುರಿತು ಮಾತನಾಡಲಿದ್ದಾರೆ.

ಸಮಾರಂಭದಲ್ಲಿ ಶುಭಶ್ರೀ ಪ್ರಸಾದ್ ಅವರ ಮಂಜಿನ ಮಧುಪಾತ್ರೆ, ಹೂ ದಂಡೆಯ ಬೇಲಿ, ಕಲ್ಲು ಹಾಸಿನ ಮೇಲೆ ತಕಧಿಮಿ ಕೃತಿಗಳು ಬಿಡುಗಡೆಯಾಗಲಿವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಿಯಾಗಿರುವ ಲೇಖಕಿ ಶುಭಶ್ರೀ ಪ್ರಸಾದ್ ಬಹುಮುಖ ವ್ಯಕ್ತಿತ್ವದ ಪ್ರತಿಭೆ. ಲೇಖಕಿಯಾಗಿ ‘ಹಣತೆಬೆಳಕು’ ಕವನ ಸಂಕಲನ, ‘ಒಡಲ ಕರೆಗೆ ಓಗೊಟ್ಟು’ ಕಥಾಸಂಕಲನ ‘ಒಳಮನ’ ಪ್ರಬಂಧಗಳ ಸಂಕಲನ ಮುಂತಾದ ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ. ಮೈಸೂರು ವಿ.ವಿ. ಯಿಂದ ‘ಕನ್ನಡ ಸಾಹಿತ್ಯದಲ್ಲಿ ದೇಗುಲ ಪರಿಕಲ್ಪನೆ’ ಕುರಿತು ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ. ಇವರು ಕವಿಯಾಗಿ, ನಿರೂಪಕಿಯಾಗಿ, ಭಾಷಣಕಾರರಾಗಿ ಹಲವಾರು ಸಭೆ-ಸಮಾರಂಭಗಳಲ್ಲಿ ಭಾಗವಹಿಸಿರುತ್ತಾರೆ. ದೃಶ್ಯಮಾಧ್ಯಮದಲ್ಲಿ ವಾರ್ತಾವಾಚಕಿಯಾಗಿ ಕೆಲಸ ಮಾಡಿದ್ದಾರೆ.

See also  ಮಂಡ್ಯ: ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು