News Kannada
Monday, March 27 2023

ಮಂಡ್ಯ

ಭಾರತೀನಗರ: ರಾಷ್ಟ್ರಮಟ್ಟದ ವಸ್ತು ಪ್ರದರ್ಶನಕ್ಕೆ ಎಚ್.ಎಂ.ಹೃತಿಕಾ ಆಯ್ಕೆ

Bharathinagar: H.M. Hritika selected for national-level exhibition
Photo Credit : By Author

ಭಾರತೀನಗರ: ನವದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಇನ್ಸ್‌ಸ್ಪೈರ್ ಅವಾರ್ಡ್ ವಸ್ತು ಪ್ರದರ್ಶನದಲ್ಲಿ ಮಾನಕ್ ಪ್ರಶಸ್ತಿಯ ರಾಷ್ಟ್ರ ಹಂತದ ವಸ್ತು ಪ್ರದರ್ಶನ ಹಾಗೂ ಮಾದರಿ ಸ್ಪರ್ಧೆಯಲ್ಲಿ ಅನಿಕೇತನ ಶಾಲೆಯ ವಿದ್ಯಾರ್ಥಿನಿ ಎಚ್.ಎಂ.ಹೃತಿಕಾ ಆಯ್ಕೆಯಾಗಿದ್ದಾರೆ.

ಹುಲಿಗೆರೆ ಪುರ ಗೇಟ್‌ನಲ್ಲಿರುವ ಅನಿಕೇತನ ಎಜುಕೇಷನ್ ಟ್ರಸ್ಟ್‌ನಲ್ಲಿ ವ್ಯಾಸಂಗ ಮಾಡುತ್ತಿರುವ 7ನೇ ತರಗತಿ ವಿದ್ಯಾರ್ಥಿನಿ ಎಚ್.ಎಂ.ಹೃತಿಕಾ ನ್ಯಾಷನಲ್ ಇನ್ನೋವೇಷನ್ ಪೌಂಡೇಷನ್ (ಕೇಂದ್ರ ಯುವ ವಿಜ್ಞಾನ ಸಂಶೋಧನಾ ಸಂಸ್ಥೆ)ಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು. ಹೀಗಾಗಿ ಅವರು,ಈ ಹಿನ್ನೆಲೆಯಲ್ಲಿ ಸೆ.14 ರಿಂದ 16 ರವರೆಗೆ ನವದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಇನ್ಸ್‌ಸ್ಪೈರ್ ಅವಾರ್ಡ್ ವಸ್ತು ಪ್ರದರ್ಶನದಲ್ಲಿ ಮಾನಕ್ ಪ್ರಶಸ್ತಿಯ ರಾಷ್ಟ್ರ ಹಂತದ ವಸ್ತು ಪ್ರದರ್ಶನ ಹಾಗೂ ಮಾದರಿ ಸ್ಪರ್ಧೆಯಲ್ಲಿ ಭಾಗವಹಿಸಲು ನವದೆಹಲಿಗೆ ತೆರಳುತ್ತಿದ್ದಾರೆ.

ಜಿಲ್ಲೆಯ ಹೆಸರನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ ಹೃತಿಕಾಗ ಸಂಸದೆ ಸುಮಲತಾಅಂಬರೀಶ್, ಮದ್ದೂರು ಕ್ಷೇತ್ರದ ಶಾಸಕ ಡಿ.ಸಿ.ತಮ್ಮಣ್ಣ, ಕ್ಷೇತ್ರದ ಶಿಕ್ಷಣಾಧಿಕಾರಿ ಕಾಳೀರಯ್ಯ, ಅನಿಕೇತನ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದದವರು ಶುಭಹಾರೈಸಿದ್ದಾರೆ.

See also  ಮಳಲಿ ಮಸೀದಿಯ ಹೆಸರು ನಮೂದಿಗೆ ತಡೆಯಾಜ್ಞೆ ನೀಡಿದ ಎಸಿ ಕೋರ್ಟ್‌!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು