News Kannada
Thursday, March 23 2023

ಮಂಡ್ಯ

ಮಂಡ್ಯ: ಶ್ರೀಗಂಧ ಬೆಳೆ ಬೆಳೆದು ಶ್ರೀಮಂತರಾಗಿ- ಅಮರನಾರಾಯಣ್

Mandya: Grow sandalwood crop and become rich: Amaranarayan
Photo Credit : By Author

ಮಂಡ್ಯ: ಮಂಡ್ಯದ ರೈತರು ಭತ್ತ ಕಬ್ಬು ಬೆಳೆದು ಶ್ರೀಮಂತರಾಗಿರೋದು ಬಹಳ ಕಡಿಮೆ. ಆದ್ದರಿಂದ ಶ್ರೀಗಂಧ ಬೆಳೆ ಬೆಳೆದು ಶ್ರೀಮಂತರಾಗಿ ಎಂದು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳೆಗಾರರ ಸಂಘದ ಅಧ್ಯಕ್ಷರಾದ ಅಮರನಾರಾಯಣ್ ರೈತರಿಗೆ ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳಗಾರರ ಸಂಘ, ಬೆಂಗಳೂರು ಮತ್ತು OISCA ಇಂಟರ್ ನ್ಯಾಷನಲ್ ಕರ್ನಾಟಕ ವಲಯ ಇವರ ಸಂಯುಕ್ತಾಶ್ರಯದಲ್ಲಿ 2022-23 ನೇ ಸಾಲಿನ ಆತ್ಮ ಯೋಜನೆಯಡಿ ಶ್ರೀಗಂಧ, ವನಕೃಷಿ ಮತ್ತು ಸಮಗ್ರ ಕೃಷಿ ಪದ್ದತಿ ಕುರಿತು ತರಬೇತಿ ಹಾಗೂ ವಿಚಾರ ಸಂಕೀರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಂಡ್ಯದಲ್ಲಿ 51 ಭಾಗ ನೀರಾವರಿ ಜಮೀನು ಇದೆ. 42 ಸಾವಿರ ಹೆಕ್ಟೇರ್ ಖುಷ್ಕಿ ಭೂಮಿ ಇದೆ. ರೈತರು ನೀರಾವರಿ ಇಲ್ಲದ ಕೃಷಿ ಭೂಮಿಯಲ್ಲಿ ಶ್ರೀಗಂಧ ಬೆಳೆ ಬೆಳೆದು ಆರ್ಥಿಕವಾಗಿ ಲಾಭ ಪಡೆದುಕೊಳ್ಳಬಹುದು. ಅಂದಿನ ಮೈಸೂರಿನ ಮಹಾರಾಜರು ಹೆಚ್ಚಾಗಿ ಸಿಗುತ್ತಿದ್ದ ಶ್ರೀಗಂಧ ಬೆಳೆಯನ್ನು ಕಂಡು ಮೈಸೂರು ಸ್ಯಾಂಡಲ್ ಸೋಪ್, ಗಂಧದ ಎಣ್ಣೆ ಕಾರ್ಖಾನೆಗೆ ಬುನಾದಿ ಹಾಕಿದರು. ಅದರ ಪರಿಣಾಮ ಇಂದು ದೇಶ ವಿದೇಶಗಳಲೆಲ್ಲಾ ಶ್ರೀಗಂಧದ ಬೆಳೆ ಶ್ರೀಮಂತವಾಗಿದೆ. ಇಡೀ ಭಾರತದಲ್ಲೇ ಕರ್ನಾಟಕ ಶೇ.71ರಷ್ಟು ಶ್ರೀಗಂಧ ಪೂರೈಸುತ್ತಿದೆ. ಈ ನಿಟ್ಟಿನಲ್ಲಿ ರೈತರು ಶ್ರೀಗಂಧದ ಬೆಳೆಯ ಬಗ್ಗೆ ತಿಳಿದುಕೊಂಡು ಶ್ರೀಗಂಧ ಬೆಳೆಯಬೇಕಿದೆ.

ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳಗಾರರ ಸಂಘವು ಕಳೆದ ಒಂದು ವರ್ಷದಿಂದ ರಾಜ್ಯಾದ್ಯಂತ ಸಂಚರಿಸಿ ಶ್ರೀಗಂಧ ಬೆಳೆಯ ಬಗ್ಗೆ ರೈತರಲ್ಲಿ ಅರಿವು ಮೂಡಿಸಲಾಗುತ್ತಿದೆ. ಸರ್ಕಾರ ಶ್ರೀಗಂಧ ಬೆಳೆಯನ್ನು ತೋಟಗಾರಿಕೆ ಬೆಳೆ ಎಂದು ಪರಿಗಣಿಸಿ, ಇದನ್ನು ಪರಿಣಾಮಕಾರಿವಾಗಿ ತೋಟಗಾರಿಕೆ ಇಲಾಖೆಯಿಂದ ಸಾಲ, ಸೌಲಭ್ಯ ಹಾಗೂ ವಿಮೆ ಇನ್ನಿತರ ಸೌಲಭ್ಯ ಸಿಗುವಂತಾಗಬೇಕು. ಶ್ರೀ ಗಂಧದ ಕೃಷಿಯಲ್ಲಿ ಅತಿಥಿ ಸಸ್ಯ ಉಪಯೋಗಿಸುವ ಗೊಬ್ಬರ, ಗಿಡಗಳ ನಡುವೆ ಅಂತರ, ರೋಗ ನಿಗ್ರಹ ಕುರಿತಂತೆ ರೈತರಿಗೆ ಮಾಹಿತಿ ಕೈಪಿಡಿ ಒದಗಿಸಬೇಕು ಎಂದರು.

See also  ಮಂಗಳೂರು: ಟೋಲ್ ಹೋರಾಟ, ಬೈಕ್ ರ‍್ಯಾಲಿ ತಡೆದು ಡಿವೈಎಫ್ಐ ಕಾರ್ಯಕರ್ತರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು