News Kannada
ಮಂಡ್ಯ

ಕರ್ನಾಟಕ ಸಂಘದ ನೂತನ ರಂಗಮಂದಿರಕ್ಕೆ ಭೂಮಿ ಪೂಜೆ

Bhoomi Pujan for Karnataka Sangha's new theatre
Photo Credit : By Author

ಮಂಡ್ಯ: ಕರ್ನಾಟಕ ಸಂಘದ ಆವರಣದಲ್ಲಿ ಸುಮಾರು 5ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ರಂಗಮಂದಿರಕ್ಕೆ ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದ ಮಹಾಸ್ವಾಮೀಜಿ ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಡಾ.ನಿರ್ಮಲಾನಂದ ಮಹಾಸ್ವಾಮೀಜಿ ಕರ್ನಾಟಕ ಸಂಘ ಹಲವಾರು ವರ್ಷಗಳಿಂದ ಬೇರೆ ಬೇರೆ ರೀತಿಯ ಕಾರ್ಯಕ್ರಮಗಳ ಮೂಲಕ ವ್ಯಕ್ತಿಯ ಬದುಕನ್ನು ಸಾಂಸ್ಕೃತಿಕಾಗಿ ಶೈಕ್ಷಣಿಕವಾಗಿ ಹಾಗೂ ಧಾರ್ಮಿಕವಾಗಿ ಬದುಕು ಕಟ್ಟುವ ಕೆಲಸವನ್ನ ಮಾಡುತ್ತಿದೆ. ಇದಕ್ಕೆ ಪೂರಕವಾಗಿ ಇನ್ನೊಂದು ಹೆಜ್ಜೆ ಮುಂದಿಟ್ಟು ರಂಗಮಂದಿರ ಕಟ್ಟುವ ಕೆಲಸಕ್ಕೆ ಮುಂದಾಗಿರುವುದು ಸಂತೋಷ ತಂದಿದೆ ಎಂದರು.

ಕರ್ನಾಟಕ ಸಂಘ ಹೊಸ ಆಯಾಮವನ್ನು ತಂದುಕೊಟ್ಟಿದೆ. ವರ್ಷಪೂರ್ತಿ ಕನ್ನಡ ಪರವಾದ ಕಾರ್ಯಕ್ರಮಗಳು ಮಾಡುತ್ತಿದೆ. ಜಯಪ್ರಕಾಶ್‌ಗೌಡ ಕರ್ನಾಟಕ ಸಂಘಕ್ಕೆ ಅಧ್ಯಕ್ಷರಾಗಿ ಅತ್ಯುತ್ತಮ ವಾದ ಕೆಲಸ ಮಾಡುತ್ತಿದ್ದಾರೆ. ಈ ಸಂಘ ಇನ್ನು ಮುಂದೆಯೂ ಸಹ ಸಾಂಸ್ಕೃತಿಕ ಸೌರಭ ತರುವಂತ ಕೆಲಸ ಮಾಡಲಿ ಎಂದರು.

ಕರ್ನಾಟಕ ಸಂಘದ ಅಧ್ಯಕ್ಷರಾದ ಪ್ರೊ. ಜಯಪ್ರಕಾಶ್ ಗೌಡ, ಶಾಸಕ ಎಂ.ಶ್ರೀನಿವಾಸ್, ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ, ಮಾಜಿ ವಿಧಾನ ಪರಿಷತ್ ಸದಸ್ಯ ಬಿ.ರಾಮಕೃಷ್ಣ, ನಿವೃತ್ತ ಉಪನ್ಯಾಸಕ ಡಾ. ಮುದ್ದೇಗೌಡ, ಟಿ.ಎಂ.ರಾಜಕುಮಾರ್ ಪಾಲ್ಗೊಂಡಿದ್ದರು.

See also  ಉಳ್ಳಾಲದಲ್ಲಿ ಓರ್ವ ವ್ಯಕ್ತಿ ಮೇಲೆ ದಾಳಿ ಆಗಿದೆ ಎಂಬ ಸುದ್ದಿಗೆ ಸ್ಪಷ್ಟನೆ ನೀಡಿದ ಎನ್. ಶಶಿಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು