News Karnataka Kannada
Thursday, April 25 2024
ಮಂಡ್ಯ

ಮಂಡ್ಯ: ಕಾಂಗ್ರೆಸ್ ಸರ್ಕಾರ ಐದು ವರ್ಷಪೂರ್ಣಗೊಳಿಸಲಿದೆ- ಕೋಡಿಶ್ರೀ

Congress govt will complete five years in office: Kodisree
Photo Credit : By Author

ಮಂಡ್ಯ: ರಾಜ್ಯದಲ್ಲಿ ಬಹುಮತದ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದಿದ್ದ ಅರಸೀಕೆರೆಯ ಹಾರನಹಳ್ಳಿ ಕೋಡಿಮಠದ ಪೀಠಾಧಿಪತಿಗಳಾದ ಡಾ.ಶ್ರೀ ಸದಾಶಿವ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿಗಳು ಇದೀಗ ಸರ್ಕಾರ ಐದು ವರ್ಷವನ್ನು ಪೂರ್ಣಗೊಳಿಸಲಿದೆ ಎಂದು ಹೇಳಿದ್ದಾರೆ.

ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಂದರ್ಭ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವು ಜನತೆಯ ಭಾವನೆಗಳಿಗೆ ಪೂರಕವಾಗಿ ಸ್ಪಂದಿಸಿ ಕೆಲಸ ಮಾಡುವ ಮೂಲಕ ಜನಾದೇಶದ ತೀರ್ಪಿಗೆ ಅನುಗುಣವಾಗಿ ಐದು ವರ್ಷಗಳನ್ನು ಸಂಪೂರ್ಣಗೊಳಿಸಲಿದೆ ಎಂದು ಹೇಳಿದ್ದಾರೆ.

ಉಪಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಮುಖ್ಯಮಂತ್ರಿಯಾಗುವ ಯೋಗವಿದೆ. ರಾಜ್ಯದಲ್ಲಿ ಕಾಂಗ್ರೆಸ್ ಬಹುಮತ ಪಡೆಯಲು ಡಿ.ಕೆ.ಶಿವಕುಮಾರ್ ಅವರ ಕೊಡುಗೆಯೂ ಇದೆ. ಮಂತ್ರಿ ಮಂಡಲ ವಿಸ್ತರಣೆಯಲ್ಲಿ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡದೇ ಪ್ರಾದೇಶಿಕವಾರು ಜಿಲ್ಲಾವಾರು ಸೂಕ್ತ ಪ್ರಾತಿನಿಧ್ಯ ನೀಡಿ ಸಂಪುಟ ವಿಸ್ತರಣೆ ಮಾಡಬೇಕು ಎಂದರು.

ಅರಸೀಕರೆಗೆ ಪ್ರಚಾರಕ್ಕೆ ಆಗಮಿಸಿದ್ದ ಸಿದ್ಧರಾಮಯ್ಯ ಅವರಿಗೆ ನಿಮಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಯೋಗವಿದೆ ಎಂದು ಹೇಳಿದ್ದೆ ಅದು ನಿಜವಾಗಿದೆಯಲ್ಲದೇ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಯಾರದೇ ಹಂಗಿಲ್ಲದೇ ಸ್ವತಂತ್ರವಾಗಿ ಅಧಿಕಾರ ಹಿಡಿಯಲಿದೆ ಎಂದು ನುಡಿದಿದ್ದೆ. ಸದ್ಯಕ್ಕೆ ರಾಜ್ಯ ಸರ್ಕಾರಕ್ಕೆ ಯಾವುದೇ ಕಂಟಕವಿಲ್ಲ, ಲೋಕಸಭಾ ಚುನಾವಣೆಯ ನಂತರ ಸಣ್ಣ ಕಂಟಕ ಉಂಟಾಗಲಿದೆ ಅದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ಎನ್.ಆರ್.ರವಿಶಂಕರ್, ಮಾಜಿಶಾಸಕ ಬಿ.ಪ್ರಕಾಶ್, ವಕೀಲರಾದ ಗಂಜಿಗೆರೆ ಲೋಕೇಶ್, ಬಂಡಿಹೊಳೆ ಗಣೇಶ್, ಮುಖಂಡರಾದ ಚಂದ್ರಶೇಖರ್, ಶ್ರೀಧರ ಸಿರಿವಂತ್, ಮನು-ಶರತ್, ಬಳ್ಳೇಕೆರೆ ವರದರಾಜೇಗೌಡ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು