News Karnataka Kannada
Tuesday, April 23 2024
Cricket
ಮೈಸೂರು

ಮೈಸೂರು: ಇಲವಾದಲ್ಲಿ ಕಾಂಗ್ರೆಸ್ ನಾಯಕರ ವಿಜಯೋತ್ಸವ

Victory celebrations of Congress leaders in Illawala
Photo Credit : By Author

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಇಲವಾದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯರವರು, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ರವರು ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಕೆ.ಪಿ.ಸಿ.ಸಿ. ಸದಸ್ಯ ಕೆ. ಮರೀಗೌಡ ನೇತೃತ್ವದಲ್ಲಿ ಗಣಪತಿ ದೇವಸ್ಥಾನದಲ್ಲಿ ಪೂಜೆಸಲ್ಲಿಸಿ, ಸಿಹಿ ಹಂಚಿ, ಪಟಾಕಿ ಸಿಡಿಸಿ, ಮೆರವಣಿಗೆ ನಡೆಸಿ ವಿಜಯೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕೆ.ಮರೀಗೌಡ ಮಾತನಾಡಿ, ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಹಗರಣ, ಬೆಲೆ ಏರಿಕೆಯಿಂದ ಬೇಸತ್ತಿದ್ದ ಜನರು ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಕಾರ್ಯಕ್ರಮಗಳನ್ನು ನಂಬಿ ಬೆಂಬಲಿಸಿದ್ದಾರೆ. ಈ 5 ಗ್ಯಾರಂಟಿಗಳನ್ನು ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರ ಖಂಡಿತ ಜಾರಿಗೊಳಿಸುತ್ತದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಮಗೆ ಹಿನ್ನೆಡೆಯಾಗಿರಬಹುದು ಆದರೆ 80 ಸಾವಿರ ಮತಗಳನ್ನು ನಮ್ಮ ಪಕ್ಷಕ್ಕೆ ಜನರು ನೀಡಿದ್ದಾರೆ. ಆ ಜನರ ಹಿತವನ್ನು ನಮ್ಮ ಪಕ್ಷ ಕಾಪಾಡುತ್ತದೆ ಎಂದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ 5 ವರ್ಷ ಪೂರ್ಣಗೊಳಿಸಲಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಯುವ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲಿದೆ ಎಂದರು.

ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ಕೂರ್ಗಳ್ಳಿ ಮಹಾದೇವ, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಶಿವಣ್ಣ, ಜಿ.ಪಂ. ಮಾಜಿ ಸದಸ್ಯ ಅರುಣ್‌ಕುಮಾರ್, ಗ್ರಾ.ಪಂ. ಅಧ್ಯಕ್ಷ ನಾಗವಾಲ ನರೇಂದ್ರ, ಮುಖಂಡರಾದ ಡಾ. ಪ್ರಕಾಶ್, ಹಳೆಕಾಮನಕೊಪ್ಪಲು ಕರೀಗೌಡ, ವೈ.ಸಿ.ಸ್ವಾಮಿ, ರಾಜೇಶ್, ಕರಕನಹಳ್ಳಿ ಮಂಜು, ಸೆಂಟ್ರಿಂಗ್ ರವಿಕುಮಾರ್, ಮೆಹಬೂಬ್ ಪಾಷ, ರಘು, ರಟ್ನಳ್ಳಿ ಮಹಾದೇವ, ಕುಮಾರ್, ಬಿ.ರವಿ, ರಮೇಶ್, ರಾಣಿಶಿವಣ್ಣ, ಮಂಜುಳ, ರಾಮು, ಓಲೆ ಸಿದ್ದು, ಗೀತಾಪುಟ್ಟೇಗೌಡ, ಮಹಾದೇವ ಹಾಜರಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು