News Karnataka Kannada
Thursday, March 28 2024
Cricket
ಮೈಸೂರು

ಅಕ್ರಮ ಬಯಲಿಗೆಳೆಯಲು ಕ್ರಮ:ಸಂಸದೆ ಸುಮಲತಾ

Photo Credit :

ಕೆ.ಆರ್.ನಗರ: ಪುರಸಭೆಯಲ್ಲಿ ನಡೆದಿರುವ ಅಕ್ರಮಗಳನ್ನು ಬಯಲಿಗೆಳೆದು ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲು ಕ್ರಮ ವಹಿಸುವುದಾಗಿ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.

ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ನಡೆದ ಅಧ್ಯಕ್ಷ ಸ್ಥಾನದ ಚುನಾವಣಾ ಸಭೆಯಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು ನನಗೆ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬೆಂಬಲ ನೀಡಿದವರಿಗೆ ಅನುಕೂಲ ಮಾಡಿಕೊಡುವ ಕೆಲಸ ಮಾಡುತ್ತಿದ್ದು ಕೋಳಿಪ್ರಕಾಶ್ ಅವರಿಗೂ ಮತದಾನ ಮಾಡಲು ಆಗಮಿಸಿದ್ದೇನೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್ ಪಕ್ಷದ 14 ಮಂದಿ ಸದಸ್ಯರಿದ್ದು ಕೋಳಿಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈವರೆಗೆ ಅಧ್ಯಕ್ಷರಾಗಿ ಕೆ.ಜಿ.ಸುಬ್ರಮಣ್ಯ ಅವರು ಉತ್ತಮ ಆಡಳಿತ ನೀಡಿದ್ದು ಈ ಹಿಂದೆ ನಡೆದಂತಹಾ ಅಕ್ರಮಗಳನ್ನು ಬಯಲಿಗೆ ತಂದು ತಪ್ಪಿಸ್ಥರನ್ನು ಜೈಲಿಗೆ ಕಳುಹಿಸಲು ನನ್ನ ಸಹಕಾರವಿದೆ ಎಂದು ತಿಳಿಸಿದ ಅವರು ಪಟ್ಟಣದ ವ್ಯಾಪ್ತಿಯಲ್ಲಿ ಕೈಗೊಳ್ಳುವ ಅಭಿವೃದ್ದಿ ಕಾರ್ಯಗಳಿಗೆ ನನ್ನ ಸಹಕಾರ ಇರುತ್ತದೆ ಎಂದು ಭರವಸೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು