ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿ ಸಾಮೂಹಿಕ ಅತ್ಯಾಚಾರದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಇತ್ತೀಚೆಗೆ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಹಾಡು – ಹಗಲಿನಲ್ಲೇ ಕಿರುಕುಳಕ್ಕೊಳಗಾದ ಘಟನೆ ಎನ್ ಆರ್ ಪೊಲೀಸ್ ಠಾಣೆ ವ್ಯಾಪ್ತಿಯ ಆರ್ ಎಸ್ ನಾಯ್ಡು ನಗರದಲ್ಲಿ ಈ ಘಟನೆ ನಡೆದಿದೆ.
ನರ್ಸಿಂಗ್ ವಿದ್ಯಾರ್ಥಿನಿಯು ಸ್ಟಡಿ ರೂಮ್ ನಲ್ಲಿ ಒಬ್ಬಳೆ ಇರುವಾಗ ದುಷ್ಕರ್ಮಿಗಳಿಂದ ಕಿರುಕುಳಕ್ಕೊಳಗಾಗಿದ್ದಾಳೆ. ದೂರಿನ ಪ್ರಕಾರ ದುಷ್ಕರ್ಮಿ ಆಕೆಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಡಿಸಿಪಿ ಪ್ರದೀಪ್ ಗುಂಟಿ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳನ್ನು ಹಿಡಿಯಲು ಪೊಲೀಸ್ ತಂಡವನ್ನು ರಚಿಸಿದ್ದಾರೆ. ಸಿಸಿ ಟಿವಿ ಫೂಟೇಜ್ಗಳನ್ನು ಪರಿಶೀಲಿಸುತ್ತಿರುವ ಪೊಲೀಸರು ಮತ್ತು ಶ್ವಾನದಳವನ್ನು ಒತ್ತುವರಿ ಮಾಡಿ ಸೇವೆಗೆ ಸೇರಿಸಿದ್ದಾರೆ. ಎನ್ ಆರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.