News Karnataka Kannada
Thursday, April 25 2024
Cricket
ಮೈಸೂರು

ಪಿರಿಯಾಪಟ್ಟಣದಲ್ಲಿ ಸಾಲಬಾಧೆಗೆ ರೈತ ಬಲಿ

Mysore
Photo Credit :

ಮೈಸೂರು: ರೈತರ ಆತ್ಮಹತ್ಯೆ ಪ್ರಕರಣಗಳು ಮರುಕಳಿಸಿದ್ದು ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಪ್ರಕರಣಗಳು ಅಲ್ಲೊಂದು ಇಲ್ಲೊಂದು ನಡೆಯುತ್ತಿವೆ. ಇದೀಗ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕೂರಗಲ್ಲು ಗ್ರಾಮದಲ್ಲಿ  ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೂರಗಲ್ಲು ಗ್ರಾಮದ ರೈತ ಮಂಜು (40) ಆತ್ಮಹತ್ಯೆ ಮಾಡಿಕೊಂಡವರು. ತಮ್ಮ  ಜಮೀನಿನಲ್ಲಿ ಶುಂಠಿ ಮತ್ತು ಹೊಗೆಸೊಪ್ಪಿನ ವ್ಯವಸಾಯ ಮಾಡುತ್ತಿದ್ದರು. ಕೃಷಿ ಮಾಡುವ ಸಲುವಾಗಿ ಇವರು ಬಾರಸೆ  ಸಹಕಾರ ಬ್ಯಾಂಕಿನಲ್ಲಿ 75 ಸಾವಿರ ಹಾಗೂ ವಿವಿಧ ಸ್ವಸಹಾಯ ಸಂಘಗಳಲ್ಲಿ 2 ಲಕ್ಷ ರೂ ಸಾಲ ಮಾಡಿದ್ದರು, ಕಳೆದ 2 ವರ್ಷಗಳಿಂದ ವ್ಯವಸಾಯದಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಸಾಲ ತೀರಿಸಲಾಗದೆ ಸಂಕಷ್ಟ ಅನುಭವಿಸಿದ್ದರು.

ಸಾಲಗಾರರ ಒತ್ತಡ ಹೆಚ್ಚಾದ ಹಿನ್ನಲೆಯಲ್ಲಿ ಮತ್ತು ಸಾಲ ತೀರಿಸಲು ಯಾವುದೇ ಆದಾಯದ ಮೂಲವೂ ಇಲ್ಲದ ಕಾರಣ ತಮ್ಮ ಜಮೀನಿನ ಬಳಿ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷಯ ತಿಳಿದು ಮನೆಯವರು ಕೂಡಲೇ ಅವರನ್ನು ಚಿಕಿತ್ಸೆಗೆಂದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ತೀವ್ರ ಅಸ್ವಸ್ಥಗೊಂಡ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

 ಈ ಸಂಬಂಧ ಮೃತ ರೈತನ ಬಾಮೈದ ಮಹದೇವ್ ಎಂಬುವರು ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಬ್ ಇನ್ಸ್ ಪೆಕ್ಟರ್ ಪ್ರಕಾಶ್ ಎಂ ಎತ್ತಿನಮನಿ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು