News Kannada
Saturday, April 01 2023

ಮೈಸೂರು

ಸಾಂಸ್ಕೃತಿಕ ನಗರಿಯಲ್ಲಿ ಮತ್ತೊಂದು ಕೊಲೆ

Photo Credit :

ಮೈಸೂರು: ನಗರದಲ್ಲಿ ಭಾವನನ್ನೇ ಭಾಮೈದುನ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದ ಬೆನ್ನಲ್ಲೇ, ಸೋಮವಾರ ಮತ್ತೊಂದು ಕೊಲೆಯಾಗಿದೆ. ಮೃತರನ್ನು ಗೌಸಿಯಾನಗರದ ನಿವಾಸಿ ಇಬ್ರಾಹಿಂ ಎಂದು ಗುರುತಿಸಲಾಗಿದೆ.
ಉದಯಗಿರಿ ಠಾಣಾ ವ್ಯಾಪ್ತಿಯ ಗೌಸಿಯಾನಗರದಲ್ಲಿ ತನ್ನ ಮನೆಯ ಮುಂದೆ ನಿಂತಿದ್ದ ಇಬ್ರಾಹಿಂ ಎಂಬಾತನನ್ನು ಮೂವರ ಗುಂಪೊಂದು ಹಾಡಹಗಲೇ ಹೊಟ್ಟೆಗೆ ಮಾರಕಾಸ್ತ್ರದಿಂದ ತಿವಿದು ಕೊಲೆಗೈದು ಪರಾರಿಯಾಗಿದ್ದಾರೆ.
ಕೊಲೆಗೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಉದಯಗಿರಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರವಿಕುಮಾರ್, ಸಬ್ ಇನ್‌ಸ್ಪೆಕ್ಟರ್ ಸುನಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

 

See also  ಬ್ರಹ್ಮಾವರದ ಅಪಾರ್ಟ್​​ಮೆಂಟ್​​ನಲ್ಲಿ ಮಹಿಳೆಯ ಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು