News Kannada
Friday, March 24 2023

ಮೈಸೂರು

ವಿಶ್ವನಾಥ್‌ ಅವ್ರು ಟೀಕೆ ಮಾಡದ ವ್ಯಕ್ತಿಗಳೇ ಇಲ್ಲ… ಟ್ರಂಪ್‌, ಬೈಡೆನ್‌ರನ್ನೂ ಬಿಟ್ಟಿಲ್ಲ: ತಿರುಗೇಟು ನೀಡಿದ ಪ್ರತಾಪಸಿಂಹ

Photo Credit :

ಮೈಸೂರು: ವಿಶ್ವನಾಥ್‌ ಅವರು ಟೀಕೆ ಮಾಡದ ವ್ಯಕ್ತಿಗಳೇ ಇಲ್ಲ. ಟ್ರಂಪ್‌, ಬೈಡೆನ್‌ ಅವರನ್ನೂ ಬಿಟ್ಟಿಲ್ಲ ಎಂದು ಸಂಸದ ಪ್ರತಾಪಸಿಂಹ ತಿರುಗೇಟು ನೀಡಿದ್ದಾರೆ.
ಬೆಂಗಳೂರು-ಮೈಸೂರು ದಶಪಥ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಎಚ್‌.ವಿಶ್ವನಾಥ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರತಾಪಸಿಂಹ, ದೇವೇಗೌಡರು, ಯಡಿಯೂರಪ್ಪ, ವಿಜಯೇಂದ್ರ, ಎಸ್.ಟಿ.ಸೋಮಶೇಖರ್ ಎಲ್ಲರನ್ನೂ ವಿಶ್ವನಾಥ್ ಬೈಯ್ದಿದ್ದು ಆಯ್ತು. ಸಿಎಂ ಬಸವರಾಜ್ ಬೊಮ್ಮಾಯಿ ಬಗ್ಗೆ ಮಾತನಾಡುವುದಕ್ಕೆ ಏನು ಸಿಕ್ಕಿಲ್ಲ. ಅದಕ್ಕಾಗಿ ಈ ಗ್ಯಾಪ್​ನಲ್ಲಿ ನನ್ನ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಕುಟುಕಿದ್ದಾರೆ.ಮೋದಿ ಅವರ ಸರ್ಕಾರ ಈ ಯೋಜನೆಗೆ ಹಣ ಬಿಡುಗಡೆ ಮಾಡಿ, ಕಾಮಗಾರಿಗೆ ಚಾಲನೆ ನೀಡಲಾಗಿತ್ತು. 8,666 ಕೋಟಿ ರೂ. ಪ್ರಾಜೆಕ್ಟ್​ನಲ್ಲಿ 8 ಪೈಸೆನಾದರೂ ವಿಶ್ವನಾಥ್ ಅವರು ಬಿಡುಗಡೆ ಮಾಡಿಸಿದ್ರಾ? ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ರಾ ಎಂದು ಪ್ರಶ್ನಿಸಿದ್ದಾರೆ.
ನಿತಿನ್ ಗಡ್ಕರಿ ನಮ್ಮ ಕೇಂದ್ರ ಸರ್ಕಾರದ ಮಂತ್ರಿ. ಮೋದಿ ಅವರ ಆಡಳಿತದಲ್ಲಿ ಶುರುವಾಗುವ ಪ್ರಾಜೆಕ್ಟ್​ಗಳು ಮೋದಿ ಸರ್ಕಾರಕ್ಕೆ ಸಲ್ಲಬೇಕು. ವಿಶ್ವನಾಥ್ ಅವರು ತಾವೇ ಈ ಯೋಜನೆ ತಂದಿದ್ದರೆ, ತಮ್ಮ ಚುನಾವಣೆ ವೇಳೆ ಯಾಕೆ ಹೇಳಿಲ್ಲ ಎಂದು ಕೇಳಿದ್ದಾರೆ.ವಿಶ್ವನಾಥ್ ಅವರೇ, ಮಾಧ್ಯಮದ ಮುಂದೆ ಚರ್ಚೆ ಮಾಡೋಣ ಬನ್ನಿ. ಹಳೆ ಉಂಡುವಾಡಿ ಕುಡಿಯುವ ನೀರು ಯೋಜನೆಗೂ ವಿಶ್ವನಾಥ್ ಐದು ಪೈಸೆ ಕೊಡಿಸಿಲ್ಲ. ನೀವು ಸತ್ಯಸಂಧರ ರೀತಿ ಮಾತಾಡಬೇಡಿ ಎಂದು ವಾಗ್ದಾಳಿ ನಡೆಸಿದ್ದಾರೆ.ಮಾಜಿ ಸಚಿವ ಮಹದೇವಪ್ಪ ಅವರೇ, ನಿಮ್ಮ ಅವಧಿಯಲ್ಲಿ ಮಾಡಿದ ಒಂದು ರಸ್ತೆ ನೆಟ್ಟಗಿದಿಯಾ? ನಿಮಗೆ ದಶಪಥ ರಸ್ತೆಯ ಕ್ರೆಡಿಟ್ ಬೇಕಾ? ನೀವು ಹಿರಿಯರು, ಮಾರ್ಗದರ್ಶನ ಮಾಡಿ ಸರ್ ಬೀದಿ ಜಗಳಕ್ಕೆ ಇಳಿಯಬೇಡಿ ಎಂದು ತಿಳಿಸಿದ್ದಾರೆ.
ದಶಪಥ ರಸ್ತೆಯಲ್ಲಿ ಎಲ್ಲಿ ಅವೈಜ್ಞಾನಿಕ ಕಾಮಗಾರಿ ಆಗಿದೆ ಅಂತಾ ಸಂಸದೆ ಸುಮಲತಾ ತೋರಿಸಲಿ. ಇಲ್ಲ ಒಂದು ಕರೆ ಮಾಡಿ ಅಥವಾ ಮೆಸೇಜ್ ಮಾಡಿ ಸಾಕು. 24 ಗಂಟೆ ಒಳಗೆ ನಾನು ಸ್ಥಳದಲ್ಲಿ ಇರುತ್ತೇನೆ. ತಜ್ಞರನ್ನು ನಾನೇ ಕರೆದುಕೊಂಡು ಬರುತ್ತೇನೆ. ರಸ್ತೆ ಅವೈಜ್ಞಾನಿಕವಾಗಿದ್ದರೆ ಅದನ್ನು ನೀವು ಹೇಳಿದ ರೀತಿ ವೈಜ್ಞಾನಿಕವಾಗಿಯೆ ಸರಿಪಡಿಸುತ್ತೇವೆ. ಸುಮ್ಮನೆ ಅದು ಅವೈಜ್ಞಾನಿಕ ಎಂದು ಹೇಳುವುದರಲ್ಲಿ ಅರ್ಥವಿಲ್ಲ. ನಿಮಗೆ ಮಾಡಲು ಆಗದ ಕನಸುಗಳನ್ನು ನನಗೆ ಹೇಳಿ. ನಾನು ಮಾಡಿಕೊಡುತ್ತೇನೆ. ಕೇಂದ್ರದ ಯಾವ ಅಧಿಕಾರಿಯನ್ನು ಕರೆತರಬೇಕಾ ಹೇಳಿ. ನಾನು ಕರೆದುಕೊಂಡು ಬರುತ್ತೇನೆ. ನಮ್ಮ ಸಾಹೇಬರು ಹೇಳಿರುವ ಕೆಲಸ ಎಂದು ಮಾಡುತ್ತೇನೆ ಅಂತ ಸಂಸದೆ ಸುಮಲತಾ ವಿರುದ್ಧವೂ ಹರಿಹಾಯ್ದಿದ್ದಾರೆ.

See also  ಯಡಿಯೂರಪ್ಪ ಅವ್ರು ರೈಲು ಇಂಜಿನ್‌, ನಾನು ಬೋಗಿ: ಶಾಸಕ ರಾಮದಾಸ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು