News Kannada
Friday, March 24 2023

ಮೈಸೂರು

ಸುರಕ್ಷತಾ ಪರಿಶೋಧನಾ ತಂಡದಿOದ ಮೈಸೂರು ಸುರಕ್ಷತೆ ಪರಿಶೀಲನೆ

Photo Credit :

 ಮೈಸೂರು: ನೈಋತ್ಯ ರೈಲ್ವೆ ಪ್ರಧಾನ ಕಛೇರಿಯಿಂದ ಸುರಕ್ಷತಾ ಪರಿಶೋಧನಾ ತಂಡವು ಮೈಸೂರು ವಿಭಾಗದ ಮೈಸೂರು-ಎಲಿಯೂರು ಭಾಗದ ಸುರಕ್ಷತೆಯನ್ನು ಶುಕ್ರವಾರ ಪರಿಶೀಲನೆಯನ್ನು ನಡೆಸಿತು.

ರೈಲುಗಳ ಸುರಕ್ಷಿತ ಕಾರ್ಯಾಚರಣೆಗಾಗಿ, ನಿಗದಿತ ನಿಯಮಗಳು ಮತ್ತು ಮಾರ್ಗಸೂಚಿಗಳ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಮತ್ತು ಸಾಮಾನ್ಯ ನ್ಯೂನತೆಗಳನ್ನು ಗುರುತಿಸಲು, ನೈಋತ್ಯ ರೈಲ್ವೆ ಪ್ರಧಾನ ಕಛೇರಿಯ ಪ್ರಧಾನ ಮುಖ್ಯ ಸುರಕ್ಷತಾ ಅಧಿಕಾರಿ ಅಲೋಕ್ ತಿವಾರಿ ನೇತೃತ್ವದ ರೈಲ್ವೆ ಅಧಿಕಾರಿಗಳ ಬಹು-ಇಲಾಖಾ ತಂಡವು ಎರಡು ದಿನಗಲ ಕಾಲ ಮೈಸೂರು ವಿಭಾಗದ ಮೈಸೂರು-ಎಲಿಯೂರು ಭಾಗದಲ್ಲಿ ಸುರಕ್ಷತಾ ಆಡಿಟ್ ತಪಾಸಣೆ ನಡೆಸಿತು. ತಂಡವು ವಿದ್ಯುತ್, ಯಾಂತ್ರಿಕ, ಕಾರ್ಯಾಚರಣೆ, ಸುರಕ್ಷತೆ ಮತ್ತು ಸಂವಹನ ಮತ್ತು ದೂರಸಂಪರ್ಕ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಒಳಗೊಂಡಿತ್ತು.

ತoಡವು ಗುರುವಾರ ಶ್ರೀರಂಗಪಟ್ಟಣದಲ್ಲಿನ ಪ್ರಮುಖ ಮತ್ತು ಸಣ್ಣ ಸೇತುವೆಗಳನ್ನು ಪರಿಶೀಲಿಸಿತು. ಮತ್ತು ಮಾರ್ಗದಲ್ಲಿ ನಾಗನಹಳ್ಳಿ ಹಾಗು ಪಾಂಡವಪುರ ನಿಲ್ದಾಣಗಳಲ್ಲಿನ ಪಾಯಿಂಟ್‌ಗಳು ಮತ್ತು ಕ್ರಾಸಿಂಗ್‌ಗಳು, ಲೆವೆಲ್ ಕ್ರಾಸಿಂಗ್ ಗೇಟ್‌ಗಳು ಮತ್ತು ಮೈಸೂರು-ಬೆಂಗಳೂರು ಹಳಿ ದ್ವಿಪಥದ ಮುಖ್ಯ ಮಾರ್ಗದ ಟ್ರಾಕ್ಷನ್, ಉಪ ನಿಲ್ದಾಣಗಳನ್ನು ಸಹ ಪರಿಶೀಲಿಸಿತು.

ಲೆವೆಲ್ ಕ್ರಾಸಿಂಗ್ ಗೇಟ್‌ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಯೊoದಿಗೆ ಅಧಿಕಾರಿಗಳು ಮಾತನಾಡಿ ಲೆವೆಲ್ ಕ್ರಾಸಿಂಗ್ ಗೇಟ್‌ಗಳನ್ನು ರಕ್ಷಿಸುವುದರ ಹೊರತಾಗಿ ರೈಲು ಬೇರ್ಪಡುವುದು ಗಮನಕ್ಕೆ ಬಂದಾಗ, ಅವರು ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗು ಇತರೆ ನಿಯಮಗಳ ಬಗ್ಗೆ, ಅವರ ಜ್ಞಾನವನ್ನು ಅರ್ಥಮಾಡಿಕೊಳ್ಳುವ ಸಲುವಾಗಿ ಸಂವಾದ ನಡೆಸಿದರು. ನಿಲ್ದಾಣದ ವ್ಯವಸ್ಥಾಪಕರುಗಳ ತಪಾಸಣಾ ವೇಳಾಪಟ್ಟಿಯನ್ನು ಮತ್ತು ಅವರು ನಿರ್ವಹಿಸಬೇಕಾದ ಇತರ ಪ್ರಮುಖ ದಾಖಲೆ ಪುಸ್ತಕಗಳನ್ನು ತಂಡವು ಪರಿಶೀಲಿಸಿತು.

ಮೈಸೂರಿನಲ್ಲಿ ಇಂದು ಮೈಸೂರು ನಿಲ್ದಾಣದ ಪಿಟ್‌ಲೈನ್‌ಗಳು, ಎಲೆಕ್ಟಿçಕಲ್ ಇಂಟರ್‌ಲಾಕಿoಗ್, ಯಾರ್ಡ್, ಕೋಚಿಂಗ್ ಡಿಪೋ, ಸಿಬ್ಬಂದಿ ಅಂಗಳ ಮತ್ತು ಚಾಲನಾ ಸಿಬ್ಬಂದಿ ಕೊಠಡಿಯ ಎಲ್ಲಾ ಸುರಕ್ಷತಾ ಮಾನದಂಡಗಳ ಮತ್ತು ಅವುಗಳ ಸನ್ನದ್ಧತೆಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ತೀವ್ರ ತಪಾಸಣೆ ನಡೆಸಲಾಯಿತು.

ನಂತರ ತಿವಾರಿ ಅಧ್ಯಕ್ಷತೆಯಲ್ಲಿ ಇರ್ವಿನ್ ರಸ್ತೆಯ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಛೇರಿಯ ಸಭಾಂಗಣದಲ್ಲಿ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್ ಅಗರ್ವಾಲ್ ರೊಂದಿಗೆ ಸುರಕ್ಷತಾ ವಿಚಾರ ಸಂಕಿರಣವನ್ನು ಸಹ ನಡೆಸಲಾಯಿತು. ಸೆಮಿನಾರ್‌ನಲ್ಲಿ ಮುಖ್ಯ ಎಲೆಕ್ಟಿçಕಲ್ ಜನರಲ್ ಇಂಜಿನಿಯರ್ ಆರ್.ಕೆ.ಶರ್ಮಾ, ಮುಖ್ಯ ಸಂಚಾರ ಯೋಜನಾ ವ್ಯವಸ್ಥಾಪಕ ಎಚ್.ಎಂ.ದಿನೇಶ್, ಮುಖ್ಯ ರೋಲಿಂಗ್ ಸ್ಟಾಕ್ ಎಂಜಿನಿಯರ್ ಆರ್.ವಿ.ಎನ್.ಶರ್ಮಾ ನೈಋತ್ಯ ರೈಲ್ವೆ ಮುಖ್ಯ ಜನರಲ್ ಇಂಜಿನಿಯರ್ ಮಹೇಶ್ ಕುಮಾರ್ ಉಪಸ್ಥಿತರಿದ್ದರು.

See also  ರಾಜ್ಯ ಉಳಿಯಬೇಕಾದರೆ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಬೇಕು : ಶಾಸಕ ಸಾ.ರಾ. ಮಹೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು