News Kannada
Saturday, April 01 2023

ಮೈಸೂರು

ರಸ್ತೆ ಬದಿ ವ್ಯಾಪಾರಿಗಳಿಗೆ ಮೈಸೂರು ವಿತರಣೆ

Photo Credit :

ಮೈಸೂರು: ಯುವ ಬಳಗ ವತಿಯಿಂದ ನಂಜುಮಳಿಗೆ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರವರ ಪುಣ್ಯಸ್ಮರಣೆ ಅಂಗವಾಗಿ ರಸ್ತೆ ಬದಿ ವ್ಯಾಪಾರಿಗಳಿಗೆ  ಔಷಧಿಯನ್ನೊಳಗೊಂಡ  ಸುರಕ್ಷಿತ ಕಿಟ್ ಗಳನ್ನು  ವಿತರಿಸಲಾಯಿತು

ಈ ವೇಳೆ ಮಾತನಾಡಿದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅವರು ರಾಯಣ್ಣನ ದೇಶಪ್ರೇಮ, ಆದರ್ಶ, ತತ್ವ, ಸಂದೇಶಗಳು ಇಂದಿನ ಯುವ ಜನಾಂಗಕ್ಕೆ ಪ್ರೇರಕ ಶಕ್ತಿಯಾಗಬೇಕು ಎಂದು ಹೇಳಿದರು.

ಬ್ರಿಟೀಷರ ಕುಟಿಲ ನೀತಿಯ ವಿರುದ್ಧ ಯುವ ಸೇನೆ ಕಟ್ಟಿ ಹೋರಾಡಿ, ಪ್ರಾಣವನ್ನೇ ಬಲಿಕೊಟ್ಟ ರಾಯಣ್ಣನ ಜನ್ಮದಿನ ಆಚರಿಸುವುದು ಅವಶ್ಯಕ. ತ್ಯಾಗ, ಬಲಿದಾನಕ್ಕೆ ಮತ್ತೊಂದು ಹೆಸರೇ ರಾಯಣ್ಣ. ಇಂತಹ ಮಹನೀಯರ ಬಗ್ಗೆ ಯುವ ಜನಾಂಗ ಅರಿತು ದೇಶಪ್ರೇಮ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ಮಾತನಾಡಿ ಸಂಗೊಳ್ಳಿ ರಾಯಣ್ಣ ಸಮುದಾಯದ ಎಲ್ಲ ವರ್ಗಗಳ ಜನರನ್ನು ಒಟ್ಟುಗೂಡಿಸಿ, ಯುವಸೈನ್ಯ ಕಟ್ಟಿ ಬ್ರಿಟೀಷರ ವಿರುದ್ಧ ರಣ ಕಹಳೆಯನ್ನೂದಿದ ವೀರಯೋಧ. ಕಿತ್ತೂರು ರಾಣಿ ಚೆನ್ನಮ್ಮನ ಪರಮ ಬಂಟನಾಗಿ, ಪರಕೀಯರ ವಿರುದ್ಧ ಹೋರಾಡಿದವರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕರಾದ ಕೆ ರಘುರಾಂ ವಾಜಪೇಯಿ, ಖ್ಯಾತ ವೈದ್ಯರಾದ ಡಾ.ಎಸ್ ಪಿ ಯೋಗಣ್ಣ, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ವಿನಯ್ ಕಣಗಾಲ್, ಕೆ ಆರ್ ಬ್ಯಾಂಕ್ ನಿರ್ದೇಶಕರಾದ ನ೦ ಸಿದ್ದಪ್ಪ, ಎಚ್ ವಿ ಭಾಸ್ಕರ್, ಅರುಣ್ ಸಿದ್ದಪ್ಪ  ರಾಕೇಶ್ ಕುಂಚಿಟಿಗ, ತೀರ್ಥಕುಮಾರ್, ಪುರುಷೋತ್ತಮ್, ಎಂ ಪಿ ಶಿವಶಂಕರ್, ಮಂಜು, ಲಕ್ಕೇಗೌಡರು, ಮಂಜು ಕುರುಬರಹಳ್ಳಿ ಇನ್ನಿತರರು ಇದ್ದರು

See also  ಮಟ್ಕಾ ಹಾಗೂ ಕ್ರಿಕೆಟ್ ದಂಧೆಯನ್ನು ನಡೆಸುತ್ತಿದ್ದ ಇಬ್ಬರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು