News Kannada
Thursday, March 23 2023

ಮೈಸೂರು

ಮೈಸೂರಲ್ಲಿ ಭಾಗಶಃ ಬಂದ್: ಜನರ ಪರದಾಟ

Photo Credit :

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗಣರಾಜೋತ್ಸವದಲ್ಲಿ ಅಗೌರವ ತೋರಿದ ರಾಯಚೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಂವಿಧಾನ ಸಂರಕ್ಷಣಾ ಸಮಿತಿ ಸೋಮವಾರ ಕರೆ ನೀಡಿದ ಮೈಸೂರು ನಗರ ಬಂದ್ ಭಾಗಶಃ ಯಶಸ್ವಿಯಾಗಿದ್ದು, ಬಂದ್ ನಿಂದ ಸಾರ್ವಜನಿಕರು ಪರದಾಡಿದ ಘಟನೆ ನಡೆದಿದೆ.

ನಗರದ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ ವಹಿವಾಟು ಮಧ್ಯಾಹ್ನದವರೆಗೆ ಬಹುತೇಕ ಸ್ಥಗಿತಗೊಂಡಿತು. ಗ್ರಾಮಾಂತರ ಮತ್ತು ನಗರ ಸಾರಿಗೆ ಸಂಚಾರದಲ್ಲಿ ಏರುಪೇರುವುಂಟಾಗಿ ಪ್ರಯಾಣಿಕರು ತೊಂದರೆ ಅನುಭವಿಸಿದರು. ಬಂದ್ ಹಿನ್ನೆಲೆಯಲ್ಲಿ ನಗರದ ಬಹುತೇಕ ಶಾಲಾ-ಕಾಲೇಜುಗಳ ಭೌತಿಕ ತರಗತಿಗಳು ನಡೆಯಲಿಲ್ಲ. ಕೆಲವೆಡೆ ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದ್ದು ಕಂಡು ಬಂದಿತು.

ಸಾವಿರಾರು ಸಂಖ್ಯೆಯಲ್ಲಿ ಹೋರಾಟಗಾರರು ಸಂಗಮಿಸಿದ್ದರಿಂದ ನಗರ ಜೀವನ ಅಸ್ತವ್ಯಸ್ತವಾಯಿತು. ಅಂಬೇಡ್ಕರ್ ಪರ ಘೋಷಣೆ ಮೊಳಗಿತು. ದ್ವಿಚಕ್ರ ವಾಹನಗಳಲ್ಲಿ ನೀಲಿ ಧ್ವಜ ಹಿಡಿದು ಯುವಕರು ಮೆರವಣಿಗೆ ನಡೆಸಿದರು. ಅಂಬೇಡ್ಕರ್‌ಗೆ ಅಗೌರವ ತೋರಿದ ನ್ಯಾಯಾಧೀಶರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಗಾಂಧಿನಗರದ ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಹಿರಿಯ ಸಮಾಜವಾದಿ ಹೋರಾಟಗಾರ ಪ.ಮಲ್ಲೇಶ್ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಆರಂಭಿಸುವ ಮೂಲಕ ಮೈಸೂರು ನಗರ ಬಂದ್‌ಗೆ ಚಾಲನೆ ನೀಡಿದರು. ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಡಿ.ತಿಮ್ಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ಆರಂಭಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ದಲಿತ ವಿದ್ಯಾರ್ಥಿ ಒಕ್ಕೂಟ, ಸಂಶೋಧಕರ ಸಂಘದ ಆಶ್ರಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆಗೆ ಬೆಂಬಲ ನೀಡಿದರು.

ನಗರದ ಹೃದಯಭಾಗ ಹೊರತು ಪಡಿಸಿ ಉಳಿದಂತೆ ಹೆಚ್ಚಿನ ಪ್ರದೇಶಗಳಲ್ಲಿ ಬಂದ್ ಯಾವುದೇ ಪರಿಣಾಮ ಬೀರಲಿಲ್ಲ. ಜ್ಞಾನಪ್ರಕಾಶ ಸ್ವಾಮೀಜಿ ನೇತೃತ್ವದಲ್ಲಿ ಗ್ರಾಮಾಂತರ ಸಾರಿಗೆ ಬಸ್ ನಿಲ್ದಾಣದಿಂದ ಸಾಗಿದ ಮೆರವಣಿಗೆ ಬೆಂಗಳೂರು ರಸ್ತೆ ಮಾರ್ಗವಾಗಿ ಸಾಗಿ ಸಂತ ಫಿಲೋಮಿನಾ ಚರ್ಚ್ ಬಳಸಿಕೊಂಡು ಅಶೋಕ ರಸ್ತೆಯಲ್ಲಿನ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದರು. ವಿದ್ಯಾರ್ಥಿಗಳು, ಯುವಕರು ಚಿಕ್ಕಗಡಿಯಾರ, ಸಯ್ಯಾಜಿರಾವ್ ರಸ್ತೆ, ದೇವರಾಜ ಮಾರುಕಟ್ಟೆ, ದೇವರಾಜ ಅರಸು ರಸ್ತೆಯ ವಾಣಿಜ್ಯ ಮಳಿಗೆಗಳನ್ನು ಮುಚ್ಚಿಸಿದರು.

ಬಸ್ ನಿಲ್ದಾಣದಿಂದ ಕೆ.ಆರ್.ವೃತ್ತಕ್ಕೆ ಮರಳಿದ ಹೋರಾಟಗಾರರು ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿಭಟನೆಗೆ ನಿಂತರು. ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಬಳಿ ಘೋಷಣೆಗಳನ್ನು ಕೂಗಿದರು.

See also  ಪ್ರಚಾರ ಪಡೆಯುವ ಹುಚ್ಚು ನಮ್ಮ ಸರ್ಕಾರಕ್ಕಿಲ್ಲ; ಕೋಟ ಶ್ರೀನಿವಾಸಪೂಜಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು