News Kannada
Friday, March 31 2023

ಮೈಸೂರು

ಎಐಡಿಎಸ್ ಓ ಜಿಲ್ಲಾ ಸಮಿತಿಯಿಂದ ವಿನೂತನ ಕಾರ್ಯಕ್ರಮ

Photo Credit :

ಮೈಸೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ಹಿಜಾಬ್ ವಿವಾದದಿಂದಾಗಿ ಶಾಲಾ ಕಾಲೇಜುಗಳಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಇದು ವಿದ್ಯಾರ್ಥಿಗಳ ಕಲಿಕೆ ಮೇಲೆ ಮಾತ್ರವಲ್ಲದೆ, ಸೌಹಾರ್ಧತೆಗೆ ಧಕ್ಕೆ ತರುತ್ತಿದೆ. ಹೀಗಾಗಿ ಶಾಲಾ ಕಾಲೇಜುಗಳಲ್ಲಿ ಒಂದೊಳ್ಳೆಯ ವಾತಾವರಣ ನಿರ್ಮಾಣ ಮಾಡುವ ಸಲುವಾಗಿ ಎಐಡಿಎಸ್ ಓ ಜಿಲ್ಲಾ ಸಮಿತಿ ವಿನೂತನ ಕಾರ್ಯಕ್ರಮಕ್ಕೆ ಮುಂದಾಗಿದೆ.

ರಾಜ್ಯಾದ್ಯಂತ ಸುಮಾರು 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗೋಡೆ ಬರಹಗಳ ಮೂಲಕ ಪ್ರಜಾತಾಂತ್ರಿಕ, ಧರ್ಮನಿರಪೇಕ್ಷ, ವೈಜ್ಞಾನಿಕ ಆಶಯಗಳನ್ನು ಎತ್ತಿ ಹಿಡಿಯುವ ಪ್ರಯತ್ನಕ್ಕೆ ಮುಂದಾಗಿದೆ. ವೈಜ್ಞಾನಿಕ – ಧರ್ಮನಿರಪೇಕ್ಷ – ಪ್ರಜಾತಾಂತ್ರಿಕ ಶಿಕ್ಷಣ ನಮ್ಮದಾಗಲಿ ಎಂಬ ಆಶಯದೊಂದಿಗೆ ಕ್ರಮಗಳನ್ನು ಕೈಗೊಂಡಿದ್ದು, ಅದರಂತೆ ಮಹಾನ್ ನಾಯಕರ ಘೋಷಣೆಗಳನ್ನು ಗೋಡೆಗಳಲ್ಲಿ ಬರೆಯಲಾಗುತ್ತಿದೆ.

ಇನ್ನು ಮಹಾನ್ ನೇತಾಜಿ ಹಾಗೂ ಭಗತ್ ಸಿಂಗ್ ರ ಕನಸುಗಳನ್ನು ನನಸಾಗಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಗೋಡೆಗಳಲ್ಲಿ ಶಿಕ್ಷಣ ಹಾಗೂ ರಾಜಕೀಯದಲ್ಲಿ ಧರ್ಮ ಬರಬಾರದು, ಸಾಮಾಜಿಕ ಕಾನೂನುಗಳನ್ನು ರೂಪಿಸುವಲ್ಲಿ ಧರ್ಮಕ್ಕೆ ಯಾವುದೇ ಪಾತ್ರವಿಲ್ಲ ಎಂಬ ಘೋಷಣೆಯೊಂದಿಗೆ ಕೋಮು ಸಾಮರಸ್ಯದ ಕುರಿತು ಸ್ವಾಮಿ ವಿವೇಕಾನಂದ, ಕುವೆಂಪು, ಭಗತ್ ಸಿಂಗ್, ನೇತಾಜಿ ಮುಂತಾದ ಮಹಾನ್ ವ್ಯಕ್ತಿಗಳ ಸೂಕ್ತಿಗಳ ಗೋಡೆ ಬರಹವನ್ನು ಬರೆಯಲಾಗುತ್ತಿದೆ. ವಿದ್ಯಾರ್ಥಿಗಳ ಈ ಕಾರ್ಯಕ್ಕೆ ಉತ್ತಮ ರೀತಿಯ ಸ್ಪಂದನೆ ವ್ಯಕ್ತವಾಗುತ್ತಿದೆ.

See also  ಜನರ ಹೋರಾಟಕ್ಕೆ ಸಂದ ಜಯ: ಚಂದ್ರಕಲಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು