News Kannada
Thursday, March 23 2023

ಮೈಸೂರು

ಕಾಫಿ ಗಿಡದ ಎಲೆಗಳಿಂದ ಪಾನೀಯ ತಯಾರಿ ; ತಂತ್ರಜ್ಞಾನ  ಮಾರಾಟಕ್ಕೆ ಸಿದ್ದ

Photo Credit : News Kannada

ಮೈಸೂರು : ದಿನೇ ದಿನೇ ಏರುತ್ತಿರುವ ಉತ್ಪಾದನಾ ವೆಚ್ಚ, ಪ್ರತಿಕೂಲ ಹವಾಮಾನ, ಕೋವಿಡ್ ಲಾಕ್‌ಡೌನ್ ಹಾಗೂ ದರ ಕುಸಿತದ ಕಾರಣದಿಂದ  ಸಂಕಷ್ಟದಲ್ಲಿರುವ ಕಾಫಿ ಬೆಳೆಗಾರರಿಗೆ ಒಂದಷ್ಟು  ಸಂತಸ ನೀಡುವ ಸುದ್ದಿಯೊಂದನ್ನು  ಮೈಸೂರಿನ ಕೇಂದ್ರೀಯ ಆಹಾರ ಸಂಶೋಧನಾಲಯ ನೀಡಿದೆ.  ಮೈಸೂರಿನ ಕೇಂದ್ರೀಯ ಆಹಾರ ಸಂಶೋಧನಾಲಯದ ( CFTRI) ವಿಜ್ಞಾನಿಯೊಬ್ಬರು ಕಾಫಿ ಬೆಳೆಗಾರರು ತಮ್ಮ ತೋಟಗಳಿಂದ ಹೆಚ್ಚಿನ ಆದಾಯ ಗಳಿಸುವ ಸಂಶೋಧನೆಯೊಂದನ್ನು ಮಾಡಿ ಯಶಸ್ವಿಯಾಗಿದ್ದು ಇದೀಗ ಈ ತಂತ್ರಜ್ಞಾನವನ್ನು ಮಾರಾಟಕ್ಕೆ ಇಡಲಾಗಿದೆ.

ಕೇಂದ್ರೀಯ ಆಹಾರ ಸಂಶೋಧನಾಲಯದ  ಟೆಕ್ನಾಲಜಿ ಟ್ರಾನ್ಸ್‌ಫರ್‌ ಮತ್ತು ಬಿಸಿನೆಸ್‌ ಡೆವಲಪ್‌ಮೆಂಟ್‌ (TTBD) ವಿಭಾಗವು  ಈ ಮಾರಾಟದ ಉಸ್ತುವಾರಿ ಹೊಂದಿದ್ದು  ಈ ತಂತ್ರಜ್ಞಾನವನ್ನು ಪಡೆಯಬಯಸುವವರು  ಒಂದು ಲಕ್ಷ ರೂಪಾಯಿ ಮತ್ತು ಶೇಕಡಾ 18 ರಷ್ಟು ಜಿಎಸ್‌ಟಿ ನೀಡಿ  ಅನುಮತಿ ಪಡೆಯಬಹುದಾಗಿದೆ. ನಂತರ ಈ ಒಣಗಿದ ಕಾಫಿ ಎಲೆಯ ಪುಡಿಯನ್ನು ಮಾರಾಟ ಮತ್ತು ಪಡಿಯಿಂದ ತಯಾರಿಸಿದ  ಪಾನೀಯವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಬಹುದಾಗಿದೆ. ಈ ಕುರಿತು ಮಾಹಿತಿ ನೀಡಿದ ಟಿಟಿಬಿಡಿ ಅಧಿಕಾರಿಗಳು ಈಗಾಗಲೇ ಸಾಕಷ್ಟು ವಿಚಾರಣೆಗಳು ಬರಲಾರಂಬಿಸಿದ್ದು ಇದು ಮಾರಾಟಕ್ಕೆ ಮುಕ್ತವಾಗಿದ್ದು  ವ್ಯಕ್ತಿ ಅಥವಾ ಸಂಸ್ಥೆ ಯಾರು ಬೇಕಾದರೂ ಖರೀದಿಸಬಹುದಾಗಿದೆ ಎಂದು ತಿಳಿಸಿದರು.

ಒಣಗಿದ ಕಾಫಿ ಎಲೆಗಳಿಂದಲೂ ಪಾನೀಯ ತಯಾರು ಮಾಡುವ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿರುವ ಮೈಸೂರು ಸಂಶೋಧನಾಲಯದ ಪ್ರಧಾನ ವಿಜ್ಞಾನಿ ಪುಷ್ಪಾ ಎಸ್. ಮೂರ್ತಿ ಅವರು ಇದರಿಂದ ಮನುಷ್ಯನ ಆರೋಗ್ಯಕ್ಕೂ ಉಪಯುಕ್ತವಾಗಲಿದೆ ಎಂದು ತಿಳಿಸಿದ್ದಾರೆ. ಈ ಕುರಿತು  ಮಾತನಾಡಿದ ಅವರು, ಕಾಫಿ ಎಲೆಗಳಿಂದ ಪಾನೀಯ ತಯಾರು ಮಾಡುವುದರಿಂದ ಬೆಳೆಗಾರರಿಗೆ ವರ್ಷವಿಡೀ ಆದಾಯ ಲಭಿಸಲಿದೆ.  2019 ರಿಂದಲೇ ತಾವು ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುತಿದ್ದು ಇದಕ್ಕೆ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದಿಂದ ಅನುದಾನವನ್ನು ಪಡೆದುಕೊಳ್ಳಲಾಗಿದೆ ಎಂದರು. ಪುಷ್ಪಾ ಅವರ ಪ್ರಕಾರ ಒಣಗಿದ ಎಲೆಯ ಪುಡಿಯ  ಸಾರವು ಕಾಫಿಯ ರುಚಿಗಿಂತ ಭಿನ್ನವಾಗಿದೆ. “ಕಾಫಿ ಅಥವಾ ಚಹಾಕ್ಕೆ ಹೋಲಿಸಿದರೆ ಇದು ಕಡಿಮೆ ‘ಕೆಫಿನ್’ ಅಂಶ ಹೊಂದಿದೆ. ಕಾಫಿ ಎಲೆಗಳಲ್ಲಿ ಫಿನಾಲಿಕ್ ಆಮ್ಲ ಸಮೃದ್ಧವಾಗಿದೆ ಮತ್ತು ಸಂಭಾವ್ಯ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಒಂದು ಕಾಫಿ ಎಲೆಯು ಹಸಿರು ಚಹಾಕ್ಕಿಂತ ಸುಮಾರು 17 ಪ್ರತಿಶತ ಹೆಚ್ಚು ಉತ್ಕೃಷ್ಟ ನಿರೋಧಕಗಳನ್ನುಹೊಂದಿರುತ್ತದೆ. ಪಾನೀಯವನ್ನು ಸರಳವಾಗಿ ಸೇವಿಸಬೇಕು. ಪಾನೀಯವು ‘ಕ್ಲೋರೊಜೆನಿಕ್ ಆಮ್ಲ’ ಮತ್ತು ‘ಮ್ಯಾಂಗಿಫೆರಿನ್’ನಂತಹ ಆರೋಗ್ಯ-ಉತ್ತೇಜಿಸುವ ‘ಪಾಲಿಫಿನಾಲ್’ಗಳನ್ನು ಹೊಂದಿದ್ದು, ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟ, ಉರಿಯೂತ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ವಿವರಿಸಿದರು. ಕಾಫಿ ಬೀಜದ ಬೆಳವಣಿಗೆಗೆ ಅಡ್ಡಿಯಾಗದಂತೆ ರೈತರು ಹಿಂಗಾರು ಹಂಗಾಮಿನ ಸಮಯದಲ್ಲಿ ಬಲಿತ ಕಾಫಿ ಎಲೆಗಳನ್ನು ಬಳಸಿಕೊಳ್ಳಬಹುದು ಎಂದು ಅವರು ಹೇಳಿದರು.

ಕಾಫಿ ಎಲೆಗಳು ನಿರುಪಯುಕ್ತ ವಸ್ತು ಎಂದು ಭಾವಿಸಲಾಗುತ್ತದೆ. ಆದರೆ ಕಾಫಿ ಬೆಳೆಯುವ ದೇಶವೇ ಆಗಿರುವ ಇಂಡೋನೇಷ್ಯಾ ಮತ್ತು ಇಥಿಯೋಪಿಯಾದಲ್ಲಿ ಕಾಫಿ ಎಲೆಯಿಂದ ಪಾನೀಯವನ್ನು ತಯಾರಿಸಿ ಯಶಸ್ವಿಯಾಗಿದೆ. ಅಲ್ಲಿ ಇದನ್ನು ಹಿಂದಿ ಪಾನೀಯ ತಯಾರಿಸುತಿದ್ದು ಇದನ್ನು “ಕುಟಿ ಟೀ” ಮತ್ತು ಪಶ್ಚಿಮ ಸುಮಾತ್ರಾ ಮತ್ತು ಇಂಡೋನೇಷ್ಯಾದಲ್ಲಿ “ಕಹ್ವಾ ಡಾನ್” ಎಂದು ಕರೆಯಲಾಗುತ್ತದೆ. ಆದರೆ, ಈ ಪ್ರದೇಶಗಳಲ್ಲಿನ ಪಾನೀಯ ಕೇಂದ್ರೀಯ ಆಹಾರ ಸಂಶೋಧನಾಲಯ ಅಭಿವೃದ್ಧಿಪಡಿಸಿದ ಪಾನೀಯಕ್ಕಿಂತ ಭಿನ್ನವಾಗಿದೆ. ಪುಷ್ಪಾ ಅವರು ಅಭಿವೃದ್ಧಿಪಡಿಸಿರುವ ಪಾನೀಯವನ್ನು ನೀರಿನಿಂದ ತಯಾರಿಸಬಹುದು, ಕೆಲವು ನಿಮಿಷಗಳ ಕಾಲ ಫಿಲ್ಟರ್ ಮಾಡಿಯೂ ಸೇವಿಸಬಹುದಾಗಿದೆ. ಈ ಪಾನೀಯದ ರುಚಿ ಜನಪ್ರಿಯವಾದರೆ  ಹೆಚ್ಚು  ಉದ್ಯೋಗ ಸೃಷ್ಟಿಯ ಜತೆಗೇ ಬೆಳೆಗಾರರಿಗೂ ಆದಾಯ ಲಭಿಸಲಿದೆ. ಹೆಚ್ಚಿನ ವಿವರಗಳಿಗೆ 0821-2514534  , ಈ ಮೇಲ್‌ ಐಡಿ
[email protected]

See also  ಮೃಗಾಲಯ-ಕಾರಂಜಿ ಕೆರೆ ಕಾಂಬೋ ಟಿಕೆಟ್ ದರ ಏರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1620
Coovercolly Indresh

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು