News Kannada
Tuesday, March 21 2023

ಮೈಸೂರು

ಜನರ ಸಮಸ್ಯೆಗಳ ಚರ್ಚೆಗೆ ಸದನದಲ್ಲಿ ಅವಕಾಶ ನೀಡಿ : ಹೆಚ್.ವಿಶ್ವನಾಥ್ ಆಗ್ರಹ

Photo Credit :

ಮೈಸೂರು: ಸಚಿವ ಕೆ.ಎಸ್.ಈಶ್ವರಪ್ಪ ನೀಡಿದ ಹೇಳಿಕೆಯೊಂದನ್ನು ಹಿಡಿದುಕೊಂಡು ವಿಧಾನಸಭೆಯಲ್ಲಿ ಧರಣಿ ನಡೆಸುವ ಮೂಲಕ ಅಮೂಲ್ಯವಾದ ಕಲಾಪವನ್ನು ಕಾಂಗ್ರೆಸ್‌ನವರು ಹಾಳು ಮಾಡುತ್ತಿರುವುದು ಸರಿಯಲ್ಲ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಕಿಡಿಕಾರಿದರು.

ಶನಿವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುವ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ನೀಡಿರುವ ಹೇಳಿಕೆ ಬಗ್ಗೆ ಸ್ಪಷ್ಟತೆ ಇಲ್ಲ. ಅವರು ಯಾವ ಅರ್ಥದಲ್ಲಿ ಏನು ಹೇಳಿದ್ದಾರೆ ಎಂಬುದನ್ನು ಮೊದಲು ತೋರಿಸಲಿ. ಆಮೇಲೆ ಉಳಿದಿದ್ದು ಚರ್ಚೆ ಆಗಲಿ. ಒಂದು ಹೇಳಿಕೆ ಹಿಡಿದುಕೊಂಡು ಕಾಂಗ್ರೆಸ್‌ನವರು ಇಡೀ ಸದನ ಸಮಯ ಹಾಳುಮಾಡಿದ್ದು ತಪ್ಪು. ಸಿದ್ದರಾಮಯ್ಯ ನಂತಹ ಹಿರಿಯರು ಇಂತಹ ನಡುವಳಿಕೆ ಪ್ರದರ್ಶಿಸ ಬಾರದಿತ್ತು ಎಂದು ಖಂಡಿಸಿದರು. ಮುಂದೆ ಚುನಾವಣೆ ಇರುವುದರಿಂದ ಓಟ್ ಬ್ಯಾಂಕ್ ಗಾಗಿ ಈ ರೀತಿ ಮಾಡ್ತಿದ್ದಾರೆ. ಪ್ರತಿಭಟನೆ ಯಾವುದಕ್ಕೂ ಪರಿಹಾರ ಅಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದರು.

ಸದನದ ಒಳಗಡೆ ತಪ್ಪುಗಳು ಆಗುತ್ತಿರುತ್ತವೆ. ಅದಕ್ಕೆ ಕ್ಷಮೆ ಕೇಳಿ ಮುಂದುವರೆದಿರುವ ಅನೇಕ ಉದಾಹರಣೆಗಳಿವೆ. ಈಗಲೂ ಅಂತಹ ನಡವಳಿಕೆಗಳು ಪ್ರದರ್ಶನವಾಗಬೇಕು. ಮುಖ್ಯಮಂತ್ರಿ, ಎರಡೂ ಸದನಗಳ ನಾಯಕರು ಹಾಗೂ ಸ್ಪೀಕರ್ ಗಳು ತುರ್ತಾಗಿ ಸಭೆ ನಡೆಸಬೇಕು. ಈ ಮೂಲಕ ಜನರ ಸಮಸ್ಯೆಗಳ ಚರ್ಚೆಗೆ ಸದನದಲ್ಲಿ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

See also  ಆಟೋ- ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು