News Kannada
Thursday, March 30 2023

ಮೈಸೂರು

ಪ್ರತಿಯೊಬ್ಬರೂ ಶುಶ್ರೂಷಕರ ಸೇವೆಯನ್ನು ಗೌರವಿಸಿ: ಗಿರೀಶ್

Photo Credit :

ಮೈಸೂರು: ಮಾರಕ  ಕೊರೊನಾ ಸೋಂಕಿನ ಆತಂಕದ ನಡುವೆಯೂ ನಿಷ್ಠೆ ಮತ್ತು ನಿಸ್ವಾರ್ಥ ಭಾವನೆಯಿಂದ ಸೇವೆ ಸಲ್ಲಿಸುತ್ತಿರುವ ಶುಶ್ರೂಷಕರನ್ನು ಎಲ್ಲರೂ ಗೌರವಿಸಬೇಕು ಎಂದು ಜೀವಧಾರ ರಕ್ತನಿಧಿ ಕೇಂದ್ರದ  ನಿರ್ದೇಶಕ ಹಾಗೂ ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಸಹ ಸಂಚಾಲಕ ಗಿರೀಶ್  ಹೇಳಿದರು.

ಮೈಸೂರು ನಗರ ಬಿಜೆಪಿ ವೈದ್ಯಕೀಯ ಪ್ರಕೋಷ್ಠ ವತಿಯಿಂದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಸ್ಪಂದನ ಆಸ್ಪತ್ರೆಯ ದಾದಿಯರ ಜೊತೆ  ಫ್ಲಾರೆನ್ಸ್‌ ನೈಟಿಂಗೆಲ್‌ ಅವರ ಜನ್ಮದಿನದಂದು   ವಿಶ್ವ ದಾದಿಯರ ದಿನವನ್ನಾಗಿ ಆಚರಿಸಲಾಯಿತು. ಮೇಣದ ಬತ್ತಿ ಹಿಡಿದು ಫ್ಲಾರೆನ್ಸ್‌ ನೈಟಿಂಗೆಲ್‌ ಸ್ಮರಿಸುತ್ತ ಆ  ನಂತರ ಆಸ್ಪತ್ರೆಯಲ್ಲಿ ಹಲವು ವರ್ಷದಿಂದ ದಾದಿಯರಾಗಿ ಸೇವೆ ಸಲ್ಲಿಸಿದ ಝಾನ್ಸಿ, ಶಿವಕುಮಾರ್, ರಂಜಿತಾ, ರಾಜಮ್ಮ, ನಟರಾಜ್, ಭೂಮಿಕಾ, ಸ್ಮಿತಾ, ಮಹದೇವಮ್ಮ  ಅವರಿಗೆ ಸನ್ಮಾನಿಸಿ ಮಾತನಾಡಿ ಪ್ರತಿಯೊಬ್ಬ ರೋಗಿಗೆ ಇನ್ನೊಬ್ಬ ತಾಯಿಯಂತೆ ಸೇವೆ ಸಲ್ಲಿಸುವ ನರ್ಸ್‌ಗಳು ಧನ್ಯರು ಎಂದರು.

ಆರೋಗ್ಯ ಸೇವಾ ಕ್ಷೇತ್ರದಲ್ಲಿ ಪರಿಣಾಮಕಾರಿ ಯಾದ ಶುಶ್ರೂಷಾ ವಿಭಾಗಕ್ಕೆ ದಾದಿಯರದೇ ನೇತೃತ್ವ. ವೈದ್ಯರ ನಿರ್ದೇಶನವನ್ನು ಯಥಾವತ್ತಾಗಿ ಪಾಲಿಸಲು ದಾದಿಯರು ಸಹಕರಿಸುತ್ತಾರೆ.  ವಿಶ್ವ ದಾದಿಯರ ದಿನಾಚರಣೆಯ ನಿಮಿತ್ತ ಶುಶ್ರೂಷೆ ಸೇವೆಯ ಬಗ್ಗೆ ಉಲ್ಲೇಖಿಸುವುದು ಔಚಿತ್ಯದಾಯಕ ಎಂದರು.

ಒಬ್ಬ ನರ್ಸ್ ತಾನು ಆರೈಕೆ ಮಾಡೋ ರೋಗಿ ಯಾವ ಜಾತಿ, ಯಾವ ಧರ್ಮ, ಯಾವ ಪಕ್ಷ, ಯಾವ ಊರು ಎಂಬೆಲ್ಲ ವಿಚಾರದ ಬಗ್ಗೆ ನೋಡುವುದೇ ಇಲ್ಲ.  ರೋಗಿ ಯಾರೇ ಇರಲಿ, ಅವರನ್ನು ಮಗುವಿನಂತೆ ಆರೈಕೆ ಮಾಡಿ ಹುಷಾರಾಗಿಸಿ, ಮನೆಗೆ ಕಳುಹಿಸೋದಷ್ಟೇ ಅವರ ಏಕೈಕ ಗುರಿ ಎಂದರು.

ಫ್ಲಾರೆನ್ಸ್‌ ನೈಟಿಂಗೆಲ್‌ ಅವರ ಜನ್ಮದಿನವನ್ನೇ ವಿಶ್ವ ದಾದಿಯರ ದಿನವನ್ನಾಗಿ ಆಚರಿಸುವುದು. ಅನೇಕರಿಗೆ ತಿಳಿದ ವಿಚಾರ. 1854ರ ಕ್ರೈಮನ್‌ ಯುದ್ಧದಲ್ಲಿ ಗಾಯಗೊಂಡ ಸೇನಾನಿಗಳ ಆರೈಕೆ ಮಾಡಿ ಜಗತ್ತಿನಾದ್ಯಂತ ಗೌರವ ಪಡೆದ ನೈಟಿಂಗೆಲ್‌  ವೃತ್ತಿ ಘನತೆಯನ್ನು ಎತ್ತಿ ಹಿಡಿದ ಅನುಭವಿ ದಾದಿ. ಲಂಡನ್‌ನ ಪ್ರಮುಖ ಆಸ್ಪತ್ರೆಯಲ್ಲಿ ದಾದಿಯಾಗಿ ಸೇವೆ ಸಲ್ಲಿಸಿದ ಅವರು ಮಾನವೀಯತೆಯ ಪ್ರತಿಪಾದಕರಾಗಿಯೂ ಪ್ರಸಿದ್ಧರು. ಆಧುನಿಕ ನರ್ಸಿಂಗ್‌ ಶಿಕ್ಷಣದ ಪ್ರಗತಿ ಗಾಗಿ ಕೊಡುಗೆ ನೀಡಿದ ಫ್ಲಾರೆನ್ಸ್‌ ನೈಟಿಂಗೆಲ್‌ ನರ್ಸಿಂಗ್‌ ವಿಜ್ಞಾನ ಕಾಲೇಜನ್ನೂ ಸ್ಥಾಪಿಸಿದ್ದಾರೆ ಎಂದು ಸ್ಮರಿಸಿದರು

ಇದೇ ಸಂದರ್ಭದಲ್ಲಿ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಸಂಚಾಲಕರಾದ ಡಾ॥ರವೀಂದ್ರನಾಥ್,ವೈದ್ಯಕೀಯ ಪ್ರಕೋಷ್ಠ ಸದಸ್ಯರಾದ ಶಶಿಧರ್ , ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕರಾದ  ಮುತ್ತಣ್ಣ ,  ವೈದ್ಯರಾದ ಡಾ.ನವೀನ್ , ಡಾ.ಚೈತ್ರಾ , ಡಾ.ನಿವೇದಿತಾ ,ಡಾ.ಕುಶಾಲ್  ಇನ್ನಿತರರು ಹಾಜರಿದ್ದರು.

See also  ವರಮಹಾಲಕ್ಷ್ಮೀ ಹಬ್ಬ: ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು