News Kannada
Friday, September 29 2023
ಮೈಸೂರು

ಮೈಸೂರು: ಆ.7ರ ಗಜಪಯಣಕ್ಕೆ ಸಕಲ ಸಿದ್ಧತೆ

Mysuru: All preparations are in place for Gajapayana on Aug. 7
Photo Credit : By Author

ಮೈಸೂರು: ಗಜಪಯಣದೊಂದಿಗೆ ಮೈಸೂರು ದಸರಾಕ್ಕೆ ಮುನ್ನುಡಿ ಬರೆಯುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದ್ದು, ಈ ಬಾರಿ ಆ.7ರಂದು ಗಜಪಯಣ ನಡೆಯಲಿದ್ದು, ಅದಕ್ಕಾಗಿ ಸರ್ವ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ದಸರಾ ಜಂಬೂಸವಾರಿಯಲ್ಲಿ ಭಾಗವಹಿಸುವ ಆನೆಗಳನ್ನು ಎರಡು ತಂಡವಾಗಿ ಮೈಸೂರಿಗೆ ತರಲಾಗುತ್ತದೆ. ಮೊದಲ ತಂಡವು ಹುಣಸೂರು ತಾಲೂಕಿನ ವೀರನಹೊಸಳ್ಳಿಯಿಂದ ಗಜಪಯಣದೊಂದಿಗೆ ಮೈಸೂರಿಗೆ ಆಗಮಿಸಲಿವೆ. ಇದಕ್ಕಾಗಿ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದರೆ ಮತ್ತೊಂದೆಡೆ ಗಜಪಡೆಯನ್ನು ಅರಮನೆಗೆ ಕರೆತರಲು ಅರಣ್ಯ ಇಲಾಖೆ ಸಕಲ ಸಿದ್ಧತೆ ನಡೆಸಿದೆ.

7 ಮೊದಲ ತಂಡದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಮೈಸೂರಿಗೆ ಆಗಮಿಸಲಿವೆ. ಅಂಬಾರಿ ಆನೆ ಅಭಿಮನ್ಯು ಜತೆಗೆ ಅರ್ಜುನ, ಧನಂಜಯ, ಗೋಪಾಲ ಸ್ವಾಮಿ, ವಿಕ್ರಮ ಹಾಗೂ ಹೆಣ್ಣಾನೆಗಳಾದ ಕಾವೇರಿ, ಚೈತ್ರಾ, ಲಕ್ಷ್ಮೀ, ವಿಜಯ ಮೈಸೂರಿನ ಕಡೆ ಪ್ರಯಾಣ ಬೆಳಸುವ ನಿರೀಕ್ಷೆ ಇದೆ. ವಿಶೇಷ ಎಂದರೆ ಸತತ 8 ಬಾರಿ ಚಿನ್ನದ ಅಂಬಾರಿ ಹೊತ್ತು ಗಮನ ಸೆಳೆದಿರುವ ಅರ್ಜುನ ಆನೆ ಈ ಬಾರಿ ದಸರಾ ಮಹೋತ್ಸವದಲ್ಲಿ ಮತ್ತೆ ಭಾಗವಹಿಸುವ ನಿರೀಕ್ಷೆ ಇದೆ. ಎರಡನೇ ತಂಡದಲ್ಲಿ 5ಅಥವಾ 6ಆನೆಗಳು ಬರಲಿವೆ. ಎರಡನೇ ತಂಡದಲ್ಲಿ ಹೊಸ ಆನೆಗಳಾದ ಗಣೇಶ, ಭೀಮ, ಸುಗ್ರೀವ, ಅಜಯ, ಮಹೇಂದ್ರ ಆನೆಗಳು ಬರುವ ಸಾಧ್ಯತೆ ಇದೆ.

ಆ.10ಕ್ಕೆ ಅರಮನೆ ಪ್ರವೇಶ: ಆ.7ರಂದು ವೀರನಹೊಸಳ್ಳಿ ಗೇಟ್ ಬಳಿ ಗಜ ಪಯಣ ಕಾರ್ಯಕ್ರಮ ನಡೆಯಲಿದೆ. ಆನೆಗಳು ಅಲ್ಲಿಂದ ನೇರವಾಗಿ ಆಶೋಕಪುರಂನಲ್ಲಿನ ಅರಣ್ಯ ಭವನಕ್ಕೆ ಒಂದು ವಾಸ್ತವ್ಯ ಹೂಡಲಿವೆ. ಅಲ್ಲಿಂದ ಆ.10 ರಂದು ಅರಮನೆ ಪ್ರವೇಶಿಸಲಿವೆ.

ಆ.10ರಂದು ಅರಮನೆ ಪ್ರವೇಶಿಸಲಿರುವ ಆನೆಗಳಿಗೆ ಮತ್ತು ಮಾವುತ ಕಾವಾಡಿಗರ ಕುಟುಂಬ ಉಳಿದುಕೊಳ್ಳಲು ಅರಮನೆ ಆವರಣದಲ್ಲಿ ಶೆಡ್ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಎರಡು ವರ್ಷಗಳ ಬಳಿಕ ಅದ್ಧೂರಿ ದಸರಾ ಉತ್ತವ ನಡೆಯುತ್ತಿರುವುದರಿಂದ ದಸರಾ ಆನೆಗಳೊಂದಿಗೆ ಮಾವುತ, ಕಾವಾಡಿಗರ ಪರಿವಾರವೇ ಮೈಸೂರಿಗೆ ಆಗಮಿಸುತ್ತಿದ್ದು, ಅವರು ಉಳಿದುಕೊಳ್ಳುವ ಸಲುವಾಗಿ 42ಶೆಡ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಬಾರಿ 14 ಆನೆಗಳು ದಸರಾ ಉತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದು, 28ಮಂದಿ ಮಾವುತರು ಮತ್ತು ಕಾವಾಡಿಗರು ಮತ್ತು ಅವರ ಕುಟುಂಬ ಹಾಗೂ 6 ಮಂದಿ ಹೆಚ್ಚುವರಿ ಮಾವುತರು, ಅಡುಗೆ ತಯಾರಕರು ಸೇರಿ 150ಕ್ಕೂ ಹೆಚ್ಚು ಮಂದಿ ಆನೆಗಳೊಂದಿಗೆ ಆಗಮಿಸಲಿದ್ದಾರೆ. ಈಗಾಗಲೇ ಅರಮನೆ ಮಂಡಳಿ ವತಿಯಿಂದ ಆನೆಗಳು ಮತ್ತು ಮಾವುತರು ಉಳಿದುಕೊಳ್ಳುವ ಸ್ಥಳವನ್ನು ಸ್ವಚ್ಛಗೊಳಿಸಲಾಗಿದ್ದು, ಅರಣ್ಯ ಇಲಾಖೆಯಿಂದ ಶೆಡ್ ನಿರ್ಮಾಣ ಕಾರ್ಯ ನಡೆಯುತ್ತಿದೆ. ಜತೆಗೆ ಆನೆಗಳಿಗೆ ವಿಶೇಷ ಆಹಾರ ತಯಾರು ಮಾಡುವ ಸ್ಥಳ ಮತ್ತು ಆಹಾರ ದಾಸ್ತನು ಕೊಠಡಿಗೆ ಸುಣ್ಣ ಬಳಿಯಲಾಗಿದೆ.

See also  ಬೆಳ್ತಂಗಡಿ: ಹೆದ್ದಾರಿ ವ್ಯಾಪ್ತಿಯ ರಸ್ತೆ ಹಾಗೂ ಪೇಟೆಗಳಲ್ಲಿ ಮಳೆ ನೀರು ಸಮಸ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು