News Kannada
Monday, September 25 2023
ಮೈಸೂರು

ಪಿರಿಯಾಪಟ್ಟಣ: ಭ್ರಷ್ಟಾಚಾರ ನಿರ್ಮೂಲನೆಗೆ ಜನ ಚೈತನ್ಯ ಯಾತ್ರೆ

MYSORE 7
Photo Credit : By Author

ಪಿರಿಯಾಪಟ್ಟಣ: ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು ಕೆಆರ್‌ಎಸ್ ಪಕ್ಷದ ಪ್ರಮುಖ ಗುರಿಯಾಗಿದೆ ಎಂದು  ಕೆಆರ್‌ಎಸ್   ಪಕ್ಷದ ರೈತ ಘಟಕದ ರಾಜ್ಯಾಧ್ಯಕ್ಷ ಜೋಗನಹಳ್ಳಿ ಗುರುಮೂರ್ತಿ ತಿಳಿಸಿದ್ದು ಭ್ರಷ್ಟಾಚಾರ ನಿರ್ಮೂಲನೆಗಾಗಿ ಜನ ಚೈತನ್ಯ ಯಾತ್ರೆ ಹಮ್ಮಿಕೊಂಡಿರುವುದಾಗಿ ತಿಳಿಸಿದ್ದಾರೆ.

ತಾಲ್ಲೂಕಿನ ಚಪ್ಪರದಹಳ್ಳಿ ಗ್ರಾಮದಲ್ಲಿ  ಕೆಆರ್ ಎಸ್ ಪಕ್ಷ ವತಿಯಿಂದ ನಡೆದ ಜನ ಚೈತನ್ಯ ಯಾತ್ರೆ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ರಾಜ್ಯದ ರಾಜಕೀಯದಲ್ಲಿ ಬದಲಾವಣೆ ತರುವ ಉದ್ದೇಶದಿಂದ ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವ ಜನ ಚೈತನ್ಯ ಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡು ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಅರಿವು ಮೂಡಿಸಲಾಗುತ್ತಿದೆ. ಪ್ರಸ್ತುತ ರಾಜಕೀಯದ ದುರಾಡಳಿತ ವ್ಯವಸ್ಥೆಯಿಂದ ಜನರು ದಿಕ್ಕೆಟ್ಟಿದ್ದು ಸಮಾಜದಲ್ಲಿ ಅಶಾಂತಿ ಉಂಟು ಮಾಡಲು ಕೋಮು ದ್ವೇಷ  ಹರಡಲಾಗುತ್ತಿದೆ ಎಂದು ಆರೋಪಿಸಿದರು.

ತಾಲ್ಲೂಕು ಅಧ್ಯಕ್ಷ ಅಜಿತ್ ಅವರು ಮಾತನಾಡಿ ಅಪರೂಪಕ್ಕೊಮ್ಮೆ ನಡೆಯುವ ಸರ್ಕಾರಿ ನೇಮಕಾತಿಗಳಲ್ಲೂ ಅಕ್ರಮ  ತಾಂಡವವಾಡುತ್ತಿದ್ದು, ಲಂಚ ಕೊಟ್ಟು ಹುದ್ದೆಗೇರಿದ ಅಧಿಕಾರಿಗಳು ಜನರ ಸುಲಿಗೆ ಮಾಡಿ ಭ್ರಷ್ಟಾಚಾರಕ್ಕೆ ನೇರವಾಗಿ ಒತ್ತು ನೀಡುತ್ತಿದ್ದಾರೆ. ನಮ್ಮ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಆಂದೋಲನ ಯಾವುದೇ ವ್ಯಕ್ತಿಯ ವಿರುದ್ಧವಲ್ಲ ಸಮಾಜ ಸುಧಾರಣೆಗಾಗಿ ಎಂದರು.

ಈ ಸಂದರ್ಭ ಪಕ್ಷದ ಮುಖಂಡರಾದ ದಿನೇಶ್, ವೀರಭದ್ರ, ಸುರೇಶ್, ಶಶಿಕುಮಾರ್, ಮಲ್ಲೇಶ್, ಶೇಖರ್ ಇದ್ದರು.

See also  ದುಬೈಯಲ್ಲಿ ನೂರೇ ಅಜ್ಮೀರ್ ಆಮಂತ್ರಣ ಪತ್ರಿಕೆ ಅನಾವರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು