News Kannada
Saturday, April 01 2023

ಮೈಸೂರು

ಮೈಸೂರು: ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವಿಗೆ ಮರದ ಅಂಬಾರಿಯ ತಾಲೀಮು ಆರಂಭ

Mysore/Mysuru: Captain Abhimanyu of The Elephants has started training on wooden howdah
Photo Credit : By Author

ಮೈಸೂರು: ದಿನಕಳೆದಂತೆ ಜಂಬೂ ಸವಾರಿಗೆ ತಯಾರುಗೊಳ್ಳುತ್ತಿರುವ ಗಜಪಡೆಯ ತಾಲೀಮು ಕಠಿಣವಾಗುತ್ತಾ ಸಾಗಿದ್ದು, ಚಿನ್ನದ ಅಂಬಾರಿ ಹೊರುವ ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವಿಗೆ ಸೋಮವಾರದಿಂದ ಮರದ ಅಂಬಾರಿಯ ತಾಲೀಮು ಆರಂಭಗೊಂಡಿದೆ.

ಮೊದಲ ದಿನ ಅಂಬಾರಿ ಆನೆ ಅಭಿಮನ್ಯು ಮರಳಿನ ಮೂಟೆ ಸೇರಿದಂತೆ 750 ಕೆಜಿ ಭಾರದ ಮರದ ಅಂಬಾರಿ ಹೊರುವ ಮೂಲಕ ತಾಲೀಮು ನಡೆಸಿದ್ದಾನೆ. 280 ಕೆ.ಜಿ ತೂಕದ ಮರದ ಅಂಬಾರಿ, 400 ಕೆ.ಜಿ. ಮರಳಿನ ಮೂಟೆ ಸೇರಿದಂತೆ ಸೇರಿದಂತೆ ಒಟ್ಟು 750ಕ್ಕೂ ಹೆಚ್ಚಿನ ಭಾರವನ್ನು ಹೊತ್ತು ಅರಮನೆ ಆವರಣದಿಂದ ಬನ್ನಿ ಮಂಟಪದವರೆಗೆ (5 ಕಿ.ಮೀ) ಯಶಸ್ವಿಯಾಗಿ ಹೆಜ್ಜೆ ಹಾಕಿದೆ ಸಂಜೆ 5.30ಕ್ಕೆ ಅರಮನೆ ಆವರಣ ಬಿಟ್ಟ ಅಭಿಮನ್ಯು ಸಂಜೆ 6.40ರ ವೇಳೆಗೆ ಬನ್ನಿಮಂಟಪ ತಲುಪಿದ್ದಾನೆ. ಆ ಮೂಲಕ ಅಂಬಾರಿ ಹೊರಲು ತಾನು ಸಮರ್ಥನೆ ಎಂಬ ಸಂದೇಶ ನೀಡಿದ್ದಾನೆ.

ಅಭಿಮನ್ಯು ಮರದ ಅಂಬಾರಿ ಹೊತ್ತು ಗಜಗಾಂಭೀರ್ಯದಿಂದ ಮುಂದೆ ನಡೆದರೆ ಆತನ ಪಕ್ಕ ಕುಮ್ಕಿ ಆನೆಗಳಾದ ಚೈತ್ರಾ ಮತ್ತು ಕಾವೇರಿ ಸಾಗಿ ಸಾಥ್ ನೀಡಿದವು. ಗಂಡಾನೆಗಳಾದ ಅರ್ಜುನ, ಗೊಪಾಲಸ್ವಾಮಿ, ಧನಂಜಯ, ಮಹೇಂದ್ರ, ಭೀಮ, ಹೆಣ್ಣಾನೆ ಲಕ್ಷ್ಮಿಕೂಡ ಹಿಂದೆ ಹೆಜ್ಜೆ ಹಾಕಿ ಸಾಥ್ ನೀಡಿದವು. ಈ ಪೈಕಿ ಸತತ 8 ವರ್ಷ ಅಂಬಾರಿ ಹೊತ್ತ ಅರ್ಜುನನಿಗೆ ವಯಸ್ಸಿನ ಕಾರಣಕ್ಕೆ ಈ ಬಾರಿ ಭಾರ ಹೊರಿಸಲಿಲ್ಲ. ಹಾಗಾಗಿ, ಅರ್ಜುನ ಮರದ ಅಂಬಾರಿಯನ್ನು ಹೊರುವುದಿಲ್ಲ. ಉಳಿದಂತೆ ಗೊಪಾಲಸ್ವಾಮಿ, ಧನಂಜಯ, ಮಹೇಂದ್ರ, ಭೀಮ ಆನೆಗಳಿಗೆ ಭಾರ ಹೊರಿಸಿ ತಾಲೀಮು ನಡೆಸಲಾಗಿತ್ತು. ಆದರೆ, ಈ ಪೈಕಿ ಗೊಪಾಲಸ್ವಾಮಿ, ಧನಂಜಯ, ಮಹೇಂದ್ರನಿಗೆ ಮಾತ್ರ ಮರದ ಅಂಬಾರಿ ಹೊರಿಸಿ ತಾಲೀಮು ನಡೆಸಲು ಅರಣ್ಯ ಅಧಿಕಾರಿಗಳು ನಿರ್ಧರಿಸಿದ್ದಾರೆ. ಪ್ರತಿ ದಿನ ಒಂದು ಆನೆಗೆ ಮರದ ಅಂಬಾರಿ ಹೊರಲಿವೆ.

ಇದಕ್ಕೂ ಮುನ್ನ ಅರಮನೆಯ ಆವರಣದಲ್ಲಿರುವ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನಿವಾಸದ ಮುಂದೆ ಅಳವಡಿಸಲಾಗಿರುವ ಕ್ರೇನ್ ಸಹಾಯದಿಂದ ಅಭಿಮನ್ಯು ಮೇಲೆ ಮರಳು ಮೂಟೆ ಮತ್ತು ಮರದ ಅಂಬಾರಿ ಇರಿಸಲಾಯಿತು. ಬಳಿಕ ಅರ್ಚಕ ಮೈಸೂರಿನ ಪ್ರಹ್ಲಾದ್ ರಾವ್ ಗಜಪಡೆಗೆ ಪೂಜೆ ಸಲ್ಲಿಸಿದರು. ಆನೆಗಳ ಪಾದ ತೊಳೆಯಲಾಯಿತು. ನಂತರ ಆನೆಗಳ ಪಾದದ ಬಳಿ ಕುಂಕುಮ, ಹರಿಸಿಣ, ಗರಿಕೆ, ಬೆಲ್ಲ, ಕಬ್ಬು, ಮೋದಕ, ಕಡುಬು, ಪಂಚಕಜ್ಜಾಯ, ಎಲೆ, ಅಡಿಕೆಗಳನ್ನು ಇಟ್ಟು ಪೂಜೆ ಸಲ್ಲಿಸಲಾಯಿತು. ಬೆನ್ನಿನ ಮೇಲೆ ನೂರಾರು ಕೆಜಿ ಭಾರ ಹೊತ್ತಿದ್ದರೂ ಅಭಿಮನ್ಯು ಮರದ ಅಂಬಾರಿ ಹೊತ್ತು ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದನು. ಇದೇ ವೇಳೆ ರಾಜಪಥದಲ್ಲಿದ ನೂರಾರು ಜನ ಆನೆಗಳ ತಾಲೀಮನ್ನು ಕಣ್ತುಂಬಿಕೊಂಡರು.

See also  ಸಂಬಂಧಿ ಸಾವಿಗೆ ಬಂದವಳೇ ಹೆಣವಾದಳು: ನಿಯಂತ್ರಣ ತಪ್ಪಿ ಮಗುಚಿದ ಲಾರಿಯಡಿ ಸಿಲುಕಿ ಮಹಿಳೆ ಸಾವು!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು