News Kannada
Monday, September 25 2023
ಮೈಸೂರು

ಮೈಸೂರು: ಸ್ವಚ್ಛ ಕನ್ನಡ ಭಾಷಾ ಅಭಿಯಾನ ಆರಂಭ

Mysuru: Swachh Kannada Bhasha Abhiyan launched
Photo Credit : By Author

ಮೈಸೂರು: ಶರಣು ವಿಶ್ವವಚನ ಫೌಂಡೇಷನ್ ವತಿಯಿಂದ ಎಲ್ಲರೂ ಕನ್ನಡವನ್ನು ಸರಿಯಾಗಿ ಬಳಕೆ ಮಾಡುವ ಸುದುದ್ದೇಶದಿಂದ ಸ್ವಚ್ಛ ಕನ್ನಡ ಭಾಷಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ ಎಂದು ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕ ವಚನ ಕುಮಾರಸ್ವಾಮಿ ತಿಳಿಸಿದ್ದಾರೆ.

ವಿವಿಧ ಅಂಗಡಿ, ಮನೆ, ಆಸ್ಪತ್ರೆ, ಕಛೇರಿ, ಮಾಲ್ ಮುಂತಾದ ಕಡೆ ಕನ್ನಡದಲ್ಲಿ ನಾಮಫಲಕ ಹಾಕುವಾಗ ಕನ್ನಡ ಬರೆವಣಿಗೆಗೆ ಸಂಬಂಧಿಸಿದಂತೆ ಅನೇಕ ತಪ್ಪುಗಳಾಗುತ್ತಿದ್ದು, ಇತರರು ಅದನ್ನು ನೋಡಿ ಅನುಕರಣೆ ಮಾಡುತ್ತಿರುವುದರಿಂದ ಕನ್ನಡ ಭಾಷೆಯ ಬರವಣಿಗೆ ತಪ್ಪಾಗಿ ಪ್ರಚಾರವಾಗುತ್ತಿದೆ. ಕನ್ನಡ ಭಾಷೆಯನ್ನು ತಪ್ಪಾಗಿ ಅರ್ಥೈಸಿ ಕೊಳ್ಳುತ್ತಿರುವುದನ್ನು ಕಡಿವಾಣ ಹಾಕುವ ಸದುದ್ದೇಶದಿಂದ ಅನೇಕ ಸಮಾನ ಮನಸ್ಕರ ಸಹಯೋಗದೊಂದಿಗೆ ಸ್ವಚ್ಛ ಕನ್ನಡ ಭಾಷಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ವಿಶ್ವದಾದ್ಯಂತ ಕನ್ನಡವನ್ನು ಬರೆವಣಿಗೆಯಲ್ಲಿ ಬಳಕೆ ಮಾಡುವವರು ಸರಿಯಾದ ಕನ್ನಡದ ಬರೆವಣಿಗೆಗೆ ಸಂಬಂಧಿಸಿದಂತೆ 9901137948 ಮೊಬೈಲ್ ನಂಬರನ್ನು ಸಂಪರ್ಕಿಸಬಹುದಾಗಿದೆ.

ಯಾವುದೇ ರೀತಿಯ ನಾಮಫಲಕ ಮತ್ತು ವಿವಿಧ ಪುಸ್ತಕಗಳ ತಿದ್ದುಪಡಿಗೆ ಸಂಬಂಧಿಸಿದಂತೆ ಉಚಿತವಾಗಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

See also  ಬೆಂಗಳೂರು: ವ್ಯಕ್ತಿ ಸ್ವಾತಂತ್ರ್ಯ ಗೌರವಿಸುವುದಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ತಿರುಗೇಟು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು