News Kannada
Sunday, September 24 2023
ಮೈಸೂರು

ಮೈಸೂರು: ಭಗವದ್ಗೀತೆ ಪಠಣದಿಂದ ವ್ಯಕ್ತಿತ್ವ ಬೆಳವಣಿಗೆ ಸಾಧ್ಯ

mys 3
Photo Credit : By Author

ಮೈಸೂರು: ಆಳವಾದ ಆಧ್ಯಾತ್ಮಿಕ ಜ್ಞಾನವನ್ನು ಹೊಂದಿರುವ ಭಗವದ್ಗೀತೆಯನ್ನು ನಿತ್ಯ ಪಠಣ ಮಾಡುವುದರಿಂದ, ಮನುಷ್ಯನ ಜೀವನ ಮತ್ತು ವ್ಯಕ್ತಿತ್ವದ ಸಮಗ್ರ ಬೆಳವಣಿಗೆಯಾಗುತ್ತದೆ ಎಂದು ಸುಪ್ರಸಿದ್ಧ ಪ್ರವಚನಕರಾದ ಪಂ.ರಘೋತ್ತಮಾಚಾರ್ಯ ನಾಗಸಂಪಿಗೆ ಅಭಿಪ್ರಾಯಪಟ್ಟರು.

ಮೈಸೂರು ನಗರದ ಅಗ್ರಹಾರದಲ್ಲಿರುವ ಉತ್ತರಾದಿಮಠದ ರಸ್ತೆಯಲ್ಲಿರುವ ಶ್ರೀ ಉತ್ತರಾದಿ ಮಠದ ಆವರಣದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಗೀತಾ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೀತೆಯ ಭಾಷೆ ಸುಲಭವಾಗಿ ಅರಿಯುವಷ್ಟು ಸರಳವಾಗಿದ್ದರೂ ಆಳವಾದ ಅರ್ಥಗಳನ್ನು ಅದು ಒಳಗೊಂಡಿದೆ. ಆಧ್ಯಾತ್ಮಿಕವಾಗಿ ಅಷ್ಟೇ ಅಲ್ಲದೆ, ಬದುಕಿಗೂ ಗೀತೆ ಮಾರ್ಗದರ್ಶಿಯಾಗಿದೆ ಎಂದರು.

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ.ಟಿ.ಪ್ರಕಾಶ್ ಮಾತನಾಡಿ, ಭಗವದ್ಗೀತೆ, ಮಾನವೀಯ ಮೌಲ್ಯಗಳ ಅಮೂಲ್ಯ ಗ್ರಂಥ, ಭಗವದ್ಗೀತೆ ಗ್ರಂಥವಷ್ಟೇ ಅಲ್ಲ; ಜೀವನದ ಮಾರ್ಗದರ್ಶಕವೂ ಆಗಿದೆ. ಭಗವದ್ಗೀತೆಯಲ್ಲಿ ವಿಶ್ವ ಬಂಧುತ್ವ ಸಂದೇಶ ಇದೆ. ಅದು ಸತ್ಯ, ನ್ಯಾಯ, ನೀತಿ, ಧರ್ಮವನ್ನು ಸಾರಿದೆ ಎಂದರು.

ಶ್ರೀ ಉತ್ತರಾದಿ ಮಠದ ಮಠ ಆಡಳಿತ ಅಧಿಕಾರಿ ಪಂಡಿತ್ ಅನಿರುದ್ಧ ಆಚಾರ್ಯ ಪಾಂಡುರಂಗಿ, ಶ್ರೀ ಗುರು ರಾಘವೇಂದ್ರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಎಸ್ ಬಿ ವಾಸುದೇವ್ ಮೂರ್ತಿ, ಎಚ್‌ ಜಿ ಗಿರಿಧರ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಕೆ ಎಮ್ ನಿಶಾಂತ್, ಕಡಕೋಳ ಜಗದೀಶ್, ರಂಗನಾಥ್, ಟಿ ಎಸ್ ಅರುಣ್, ರವಿಕುಮಾರ್, ಜ್ಯೋತಿ ಹಾಗೂ ಇನ್ನಿತರರು ಕಾರ್ಯಕ್ರಮದಲ್ಲಿದ್ದರು.

 

See also  ಬೆಳಗಾವಿ: ನಗರದಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 22 ಶಾಲೆಗಳಿಗೆ ರಜೆ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು