News Kannada
Friday, June 09 2023
ಮೈಸೂರು

ಮೈಸೂರು: ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿದ ಮೇಯರ್

Mysuru: Mayor responds to public calls
Photo Credit : By Author

ಮೈಸೂರು: ಜೆಎಸ್‍ಎಸ್ ರೇಡಿಯೋ 91.2ಎಫ್‍ಎಂ. ಸಮುದಾಯ ಬಾನುಲಿ ಕೇಂದ್ರವು ಮೈಸೂರು ಮಹಾನಗರ ಪಾಲಿಕೆಯ ಸೇವಾಸೌಲಭ್ಯಗಳು ಮತ್ತು ಅಭಿವೃದ್ಧಿ ಯೋಜನೆಗಳ ಕುರಿತು ಆಯೋಜಿಸಿದ್ದ ನೇರ ಸಂದರ್ಶನ ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಶಿವಕುಮಾರ್ ರವರು ಸಾರ್ವಜನಿಕರ ಕರೆಗಳಿಗೆ ಸ್ವಂದಿಸಿದರು.

ನೇರ ಸಂದರ್ಶನ ಫೋನ್-ಇನ್ ಕಾರ್ಯಕ್ರಮದಲ್ಲಿ ನಿರೂಪಕರು ಮತ್ತು ಸಾರ್ವಜನಿಕರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಮೇಯರ್ ಆಗಿ ಅಧಿಕಾರ ಸ್ವೀಕರಿಸದ ಕೆಲವೇ ದಿನಗಳಲ್ಲಿ ಮೈಸೂರು ನಗರದ ಅಭಿವೃದ್ಧಿಯ ಉದ್ದೇಶದಿಂದ ಎಲ್ಲಾ ನಗರ ಪಾಲಿಕೆಯ ಸದಸ್ಯರನ್ನೊಳಗೊಂಡು ವಾರಣಾಸಿ ಮತ್ತು ಮುಂಬೈಗೆ ಭೇಟಿ ನೀಡಿ ಪ್ರಾತೇಕ್ಷಿಕ ಅನುಭವವನ್ನು ಪಡೆದುಕೊಂಡಿದ್ದೇವೆ. ಇಲ್ಲಿ ಕಂಡು ಬಂದ ಹಲವು ವಿಷಯಗಳನ್ನು ನಾವು ನಮ್ಮ ಮೈಸೂರಿನಲ್ಲೂ ಅಳವಡಿಸಿಕೊಳ್ಳುವ ಯೋಜನೆಗಳನ್ನು ಕೈಗೊಳ್ಳುತ್ತಿದ್ದೇವೆ ಎಂದರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿನ ಪರಂಪರೆಯನ್ನು ಉಳಿಸುವುದು, ಬೆಳೆಸುವುದು ನಮ್ಮ ಆದ್ಯತೆಯಾಗಿದೆ ಆ ನಿಟ್ಟಿನಲ್ಲಿ ನಮ್ಮ ಕಾರ್ಯ ನಡೆಯಲಿದೆ ಎಂದರು.

ಸಾರ್ವಜನಿಕರ ಕೆರೆಗಳನ್ನು ಆಲಿಸಿದ ಮೈಸೂರಿನ ಮಹಾಪೌರರು: ಈ ಕಾರ್ಯಕ್ರಮದಲ್ಲಿ 15ಕ್ಕೂ ಹೆಚ್ಚು ಕರೆಗಳನ್ನು ಸ್ವೀಕರಿಸಿ ಅವರ ಸಮಸ್ಯೆಗಳನ್ನು ಆಲಿಸಿದ ಮಹಾಪೌರರು ಸಮಸ್ಯೆಗಳ ಪರಿಹಾರಕ್ಕಾಗಿ ಕಾರ್ಯಪ್ರೌವೃತ್ತನಾಗುತ್ತೇನೆ ಎಂದರು.

See also  ಮೈಸೂರು: ಪಿರಿಯಾಪಟ್ಟಣಕ್ಕೆ ಕಾವೇರಿ ನೀರು ಸರಬರಾಜು- ಕೆ.ಮಹದೇವ್‍
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು