News Kannada
Wednesday, October 04 2023
ಮೈಸೂರು

ಮೈಸೂರು: ಚಂದ್ರಶೇಖರ ಕಂಬಾರರ ಪತ್ರಕ್ಕೆ ಕುರುಬರ ಸಂಘ ಸ್ವಾಗತ

Mysuru: Kuruba sangha welcomes Chandrasekhar Kambara's letter
Photo Credit : By Author

ಮೈಸೂರು: ರಂಗಾಯಣದಲ್ಲಿ ಪ್ರದರ್ಶನ ಕಂಡ `ಸಾಂಬಶಿವ ಪ್ರಹಸನ’ ನಾಟಕದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಅವಹೇಳನ ಮಾಡಿರುವುದಕ್ಕೆ ಸ್ವತಃ ನಾಟಕದ ಕರ್ತೃ ಡಾ. ಚಂದ್ರಶೇಖರ ಕಂಬಾರರು ಆಕ್ಷೇಪ ವ್ಯಕ್ತಪಡಿಸಿ ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವುದು ಸ್ವಾಗತಾರ್ಹ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷರಾದ ಬಿ.ಸುಬ್ರಹ್ಮಣ್ಯ ತಿಳಿಸಿದ್ದಾರೆ.

ರಂಗಾಯಣದ ಭೂಮಿಗೀತ ರಂಗಮಂದಿರದಲ್ಲಿ ಡಿ.31ರ ಸಂಜೆ 6.30ಕ್ಕೆ ಕಂಡ `ಸಾಂಬಶಿವ ಪ್ರಹಸನ’ ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ. ಚಂದ್ರಶೇಖರ ಕಂಬಾರರು ರಚಿಸಿರುವ ನಾಟಕವನ್ನು ನಿರ್ದೇಶಕ ಕಾರ್ತಿಕ ಉಪಮನ್ಯು ತಿರುಚಿ, ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ಜಾರಿಗೆ ತಂದ ಹಲವು ಭಾಗ್ಯಗಳನ್ನು ವ್ಯಂಗ್ಯ ಮಾಡಲಾಗಿತ್ತು. ಅಲ್ಲದೇ, ಕಳ್ಳತನ ಭಾಗ್ಯವನ್ನು ನೀಡಬೇಕಾಗಿತ್ತು ಎಂದೂ ಅಸಹ್ಯಕರವಾಗಿ ಚಿತ್ರಸಲಾಗಿತ್ತು. ಅಲ್ಲದೇ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರನ್ನೇ ಹೋಲುವಂತೆ ಪಾತ್ರ ಸೃಷ್ಟಿಸಿ ಕೇಡಿ ಆಂಕಲ್ ಎಂದೂ ಮೂದಲಿಸಲಾಗಿತ್ತು.

ಇದನ್ನು ಖಂಡಿಸಿ ಅಂದು ತಡರಾತ್ರಿ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ನಮ್ಮ ಹೋರಾಟಕ್ಕೆ ಸ್ಪಂದಿಸಿರುವ ಹಿರಿಯರೂ ಆದ ಡಾ. ಚಂದ್ರಶೇಖರ ಕಂಬಾರರು ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ನಾಟಕ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟವರು, ಇಲ್ಲದ ಸಾಹಿತ್ಯವನ್ನು ಸೇರಿಸಿರುವವರು ಸೇರಿದಂತೆ ಇಡೀ ನಾಟಕ ತಂಡದ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿರುವುದು ಪ್ರಶಂಸನೀಯ ಎಂದಿದ್ದಾರೆ.

See also  ಉಡುಪಿ: ಆರ್ ಎಸ್ ಎಸ್ ನಾಯಕನ ಹೇಳಿಕೆಗೆ ಶ್ರೀರಾಮಸೇನೆ ತಿರುಗೇಟು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು