News Kannada
Tuesday, June 06 2023
ಮೈಸೂರು

ಮೈಸೂರು: ವಿವೇಕಾನಂದ ಯುವ ಶಕ್ತಿ ಪ್ರತೀಕ- ಯಶಸ್ವಿ ಸೋಮಶೇಖರ್

Mysuru: Vivekananda is a symbol of yuva shakti - Yashasvi Somashekar
Photo Credit : By Author

ಮೈಸೂರು: ಸ್ವಾಮಿ ವಿವೇಕಾನಂದರು ಭಾರತದ ಯುವಶಕ್ತಿಯ ಪ್ರತೀಕ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಯಶಸ್ವಿ ಸೋಮಶೇಖರ್ ಹೇಳಿದರು.

ಯುವ ಭಾರತ್ ಸಂಘಟನೆ ವತಿಯಿಂದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಸ್ವಾಮಿ ವಿವೇಕಾನಂದರ 160ನೇ ಜಯಂತಿ ಅಂಗವಾಗಿ ಯುವ ಸಪ್ತಾಹ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು, ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಮೂಡ ಅಧ್ಯಕ್ಷರಾದ ಯಶಸ್ವಿ ಸೋಮಶೇಖರ್ ರವರು ಮಾಲಾರ್ಪಣೆ ಮಾಡುವ ಮೂಲಕ ಉದ್ಘಾಟಿಸಿದರು ನಂತರ ಅವರು ಮಾತನಾಡಿ ಸ್ವಾಮಿ ವಿವೇಕಾನಂದರು ಭಾರತದ ಯುವ ಶಕ್ತಿಗೆ ಪ್ರೇರಣೆ ಮತ್ತು ಪ್ರತೀಕ. ಈ ಮೂಲಕ ಯುವ ಭಾರತವನ್ನು ಜಗತ್ತಿಗೆ ಪರಿಚಯಿಸಿದರು ಎಂದು ಹೇಳಿದರು.

ಇಂದಿನ ಯುವ ಸಮುದಾಯ ವಿವೇಕಾನಂದರ ವಾಣಿಯನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಉನ್ನತ ವಿದ್ಯಾಭ್ಯಾಸದ ಗುರಿ ಹೊಂದುವ ಮೂಲಕ ದೇಶದ ಕೀರ್ತಿಯನ್ನು ಜಗತ್ತಿನ ಉದ್ದಗಲಕ್ಕೂ ಪಸರಿಸಬೇಕು. ಸ್ವಾಮಿ ವಿವೇಕಾನಂದರ ಆದರ್ಶ ತತ್ವಗಳನ್ನ ಪಾಲಿಸುವಂತೆ ಯುವಜನಾಂಗ ಮುಂದಾಗಬೇಕು ಎಂದರು.

ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಶಿವಕುಮಾರ್ ರವರು ಮಾತನಾಡಿ ಸ್ವಾಮಿ ವಿವೇಕಾನಂದರು ಜಗತ್ತಿನ ಎಲ್ಲಾ ಯುವ ಸಮುದಾಯದ ಪ್ರೇರಕ ಶಕ್ತಿ ಎಂದರು. ಶ್ಣ ವಯಸ್ಸಿನಲ್ಲೆ ವಿದ್ಯಾರ್ಥಿ ದೆಸೆಯಿಂದಲೇ ವಿವೇಕಾನಂದರ ಸಂದೇಶಗಳನ್ನ ಮೈಗೂಡಿಸಿಕೊಳ್ಳುವ ಮೂಲಕ ಅವರ ಜಯಂತಿಗೆ ಸಾರ್ಥಕತೆ ತರಬೇಕು. ವಿಶ್ವಕ್ಕೆ ಸಹೋದರತೆಯನ್ನು ಸಾರಿದ ಮಹಾನ್‌ ಸನ್ಯಾಸಿ ಸ್ವಾಮಿ ವಿವೇಕಾನಂದರು. ಸರ್ವಧರ್ಮ ಸಹಿಷ್ಣುತೆಯ ಧರ್ಮ ಎಂದು ಭಾರತ ಧರ್ಮವನ್ನು ಚಿಕ್ಯಾಗೋ ಸಮ್ಮೇಳನದ ಮೂಲಕ ಜಗತ್ತಿಗೆ ಸಾರಿದರು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮೂಡ ಅಧ್ಯಕ್ಷರಾದ ಯಶಸ್ವಿ ಸೋಮಶೇಖರ್, ಮೃಗಾಲಯ ಪ್ರಾಧಿಕಾರ ಅಧ್ಯಕ್ಷರಾದ ಶಿವಕುಮಾರ್, ನಗರ ಪಾಲಿಕ ನಾಮನಿರ್ದೇಶಕರಾದ ಜಗದೀಶ್, ಅಪೂರ್ವ ಸುರೇಶ್, ಕೃಷ್ಣಕುಮಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಇಂಜಿನಿಯರ್ ಕೆ. ಶಿವರಾಜ್, ನಂದಕುಮಾರ್, ಹೆಚ್.ಆರ್ ರಾಘವೇಂದ್ರ, ನಿರೂಪಕರಾದ ಅಜಯ್ ಶಾಸ್ತ್ರಿ,ಯುವ ಭಾರತ್ ಸಂಘಟನೆಯ ಸಂಚಾಲಕರಾದ ಆನಂದ್, ಕಡಕೋಳ ಜಗದೀಶ್, ರಾಜಣ್ಣ, ಶ್ರೀಕಾಂತ್ ಕಶ್ಯಪ್, ಸಿದ್ದೇಶ್, ಲಿಂಗರಾಜು, ದಿವ್ಯನಾದನ್, ಸುರೇಶ್ ಗೋಲ್ಡ್, ಹಾಗೂ ವಸ್ತು ಪ್ರದರ್ಶನ ಪ್ರಾಧಿಕಾರದ ಅಧಿಕಾರಿಗಳು ಹಾಜರಿದ್ದರು.

See also  ಮೈಸೂರು: ವಿಜ್ಞಾನಿ ಪ್ರೊ.ಕೆ.ಎಸ್.ರಂಗಪ್ಪ ಅವರಿಗೆ ವಿಶ್ವ ವಿಜ್ಞಾನಿಗಳ ಫೆಲೋಶಿಪ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು