News Kannada
Tuesday, October 03 2023
ಮೈಸೂರು

ಮೈಸೂರು: ಹಾಡ್ಯ ಗ್ರಾಮದಲ್ಲಿ ಜಮೀನಿಗೆ ಲಗ್ಗೆ ಇಟ್ಟ ಕಾಡಾನೆಗಳು, ಬೆಳೆ ನಾಶ

Wild elephants enter fields in Hadya village, destroy crops
Photo Credit : News Kannada

ಮೈಸೂರು: ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಹೋಬಳಿಯ ಹಾಡ್ಯ ಗ್ರಾಮದಲ್ಲಿ ಜಮೀನಿಗೆ ಕಾಡಾನೆಗಳು ಲಗ್ಗೆ ಇಟ್ಟು ಬೆಳೆಗಳನ್ನು ತುಳಿದು ಸಂಪೂರ್ಣವಾಗಿ ನಾಶ ಮಾಡಿವೆ.

ಮುಂಜಾನೆಯ ಲಗ್ಗೆ ಇಟ್ಟ ಕಾಡಾನೆಗಳು ಜಮೀನಿನಲ್ಲಿ ಬೆಳೆದಿದ್ದ ಮುಸುಕಿನ ಜೋಳೆ, ಬಾಳೆ ಸೇರಿದಂತೆ ವಿವಿಧ ಬೆಳೆಗಳನ್ನು ತುಳಿದು ನಾಶ ಮಾಡಿವೆ.ಜಮೀನಿನಲ್ಲಿ ಇದ್ದ ರೈತರು ಕಾಡಾನೆಗಳನ್ನು ಕಂಡು ಭಯಭೀತಿಯಿಂದ ಓಡಿ ಹೋಗಿದ್ದಾರೆ.

ಕಾಡಾನೆಗಳ ಹಾವಳಿಗೆ ರೈತರು ತತ್ತರಿಸಿ ಹೋಗಿದ್ದು, ನಾವು ಬೆಳೆದ ಬೆಳೆ ಕೈಗೆ ಸಿಗುತ್ತಿಲ್ಲ. ಇತ್ತ ಪರಿಹಾರವೂ ಸಿಗುತ್ತಿಲ್ಲ ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಾನೆಗಳ ಹಾವಳಿಗೆ ರೈಲ್ವೆ ಕಂಬಿ ಅಳವಡಿಸಬೇಕು ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯ ಮಾಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಕಾಡಾನೆಗಳನ್ನು ಓಡಿಸಲು ಹರಸಾಹಸ ಪಟ್ಟಿದ್ದಾರೆ.
ಸುತ್ತಮುತ್ತಲಿನ ಗ್ರಾಮಗಳಲ್ಲಿಯೂ ಕೂಡ ಕಡನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ಹಾವಳಿಯನ್ನು ತಪ್ಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.

See also  ಶಾಸಕರಾಗುವವರು ಕ್ಷೇತ್ರದ ಜನರ ಕಷ್ಟಸುಖ ಆಲಿಸಿ: ಡಿ.ಕೆ.ಶಿವಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು