News Kannada
Friday, June 09 2023
ಮೈಸೂರು

ಮೈಸೂರು: ಪ್ರಾಣಿ ಪಕ್ಷಿಗಳ ಸಂತತಿ ನಾಶಕ್ಕೆ ವಾಹನದಟ್ಟಣೆ ಕಾರಣ

Mysuru: Vehicular traffic is responsible for the destruction of animal and bird population
Photo Credit : By Author

ಮೈಸೂರು: ಜನಸಂಖ್ಯೆಗಿಂತ ವಾಹನ‌ ಸಂದ್ರತೆ ಹೆಚ್ಚಾಗಿರುವುದರಿಂದ ಪರಿಸರ ವಿಕೋಪಕ್ಕೆ ತೆರಳಿ ಸಣ್ಣಪುಟ್ಟ ಪ್ರಾಣಿಪಕ್ಷಿಗಳ ಸಂಕುಲ ನಾಶವಾಗುತ್ತಿದೆ ಎಂದು ಮೈಲಾಕ್ ಅಧ್ಯಕ್ಷರಾದ ಆರ್ ರಘು ಕೌಟಿಲ್ಯ ಬೇಸರ ವ್ಯಕ್ತಪಡಿಸಿದರು.

ನಗರದ ಜೆ ಎಲ್ ಬಿ ರಸ್ತೆಯಲ್ಲಿ ಮರ-ಗಿಡಗಳಿಗೆ ಆಹಾರ ನೀರಿನ ಬಟ್ಟಲುಗಳನ್ನು ಅಳವಡಿಸುವ ಮೂಲಕ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಂತರಾಷ್ಟ್ರೀಯ ಗುಬ್ಬಚ್ಚಿ ದಿನಾಚರಣೆ ಅಂಗವಾಗಿ ಸಣ್ಣಪುಟ್ಟ ಪ್ರಾಣಿ ಪಕ್ಷಿಗಳ ಸಂರಕ್ಷಣಾ ಜಾಗೃತಿ ಕಾರ್ಯಕ್ರಮದಲ್ಲಿ ಆಹಾರ ನೀರಿನ ಬಟ್ಟಲುಗಳಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರೀಕನ ಹೊಣೆ, ಹವಾಮಾನ ಮಾಸಗಳ ಬದಲಾವಣೆ ಮುನ್ಸೂಚನೆ ಕೊಡುವುದು ಪ್ರಾಣಿಪಕ್ಷಿಗಳೇ ಮೊದಲು ಹಾಗಾಗಿ ನಾಗರಿಕತೆಯೊಂದಿಗೆ ಉತ್ತಮ ಒಡನಾಟದಲ್ಲೆ ಜೀವಿಸುವ ಪ್ರಾಣಿಪಕ್ಷಿಗಳಿಗೆ ಇಂತಹ ರಣಬಿಸಿಲಿನಲ್ಲಿ ಒಂದಷ್ಟು ನೀರು ಆಹಾರ ನೀಡುವ ಕಾರ್ಯಕ್ಕೆ ಸಾರ್ವಜನಿಕರು ಮುಂದಾಗಬೇಕಿದೆ ಎಂದು ಹೇಳಿದರು

ಮನೆಯಂಗಳದಲ್ಲಿರುವ ಹಾಗೂ ಇನ್ನಿತರ ಪಕ್ಷಿಗಳ ಬಗೆ ಜನಜಾಗೃತಿ ಉಂಟು ಮಾಡಿ ಅವುಗಳನ್ನು ಸಂಕುಲಕ್ಕೆ ಉಂಟಾಗುತ್ತಿರುವ ಭೀತಿಯನ್ನು ತಡೆಗಟ್ಟುವ ಪ್ರಯತ್ನವಾಗಿ ಕೆ ಎಂ ಪಿ ಕೆ ಟ್ರಸ್ಟ್ ಕಳೆದ ಐದು ವರ್ಷದಿಂದ ಜನರಲ್ಲಿ ವಿವಿಧ ರೀತಿಯಲ್ಲಿ ಜಾಗೃತಿ ಮೂಡಿಸುತ್ತಾ ಬಂದಿರುವುದು ನಿಜಕ್ಕೂ ಶ್ಲಾಘನೀಯ. ಮನುಷ್ಯ ಮತ್ತು ಪಕ್ಷಿಗಳಿಗೆ ನೈಸರ್ಗಿಕವಾದ ಅವಿನಾಭಾವ ಸಂಬಂಧವಿದೆ. ಪ್ರಾಕೃತಿಕ ಸಮತೋಲನ ಸಾಧಿಸಲು ಮತ್ತು ಭೂಮಿಯ ಮೇಲೆ ವೃಕ್ಷ ಸಂಪತ್ತನ್ನು ಉಳಿಸಿ ಬೆಳೆಸುವ ಮಹತ್ತರವಾದ ಕೆಲಸವನ್ನು ಪಕ್ಷಿಗಳು ನೀಡುತ್ತಿದೆ. ಬದಲಾದ ಕಾಲಘಟ್ಟದಲ್ಲಿ ಪಕ್ಷಿಗಳ ಜೀವ ಸಂಕುಲ ಹಾಗೂ ವಾಸಸ್ಥಾನ ಅಳಿವಿನಂಚಿನಲ್ಲಿದೆ ಎಂದು ಹೇಳಿದರು

ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಶಿವಕುಮಾರ್ ರಾಮಾಯಣ ಕಾಲದಲ್ಲಿ ಪಕ್ಷಿಗಳು ಧರ್ಮ ಸಂಸ್ಥಾಪನೆಗೆ ಹೋರಾಟ ನಡೆಸಿರುತ್ತದೆ. ಇತಿಹಾಸ ಕಾಲದಿಂದ ಅಂಚೆಚೀಟಿ ಬಿಡುಗಡೆ ಆಗುವ ಮೊದಲು ಪಕ್ಷಿಗಳೇ ಸಂದೇಶ ವಾಹಕಗಳಾಗಿದ್ದವು. ಇವತ್ತಿಗೂ ಪಕ್ಷಿಗಳಿಗೆ ಕಲ್ಲು ಹೊಡೆಯುವುದು ಅಪರಾಧವಾಗಿದೆ ಎಂದು ಹೇಳಿದರು

ಇದೇ ಸಂದರ್ಭದಲ್ಲಿ ನಗರಪಾಲಿಕಾ ಸದಸ್ಯರಾದ ಮಾ ವಿ ರಾಮಪ್ರಸಾದ್, ಕಾಂಗ್ರೆಸ್ ಮುಖಂಡರಾದ ಎನ್ ಎಂ ನವೀನ್ ಕುಮಾರ್, ಜೀವದಾರ ರಕ್ತ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಕೆಎಂ ಪಿ ಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಅಪೂರ್ವ ಸುರೇಶ್, ಸುಚೇಂದ್ರ, ಚಕ್ರಪಾಣಿ, ಲಿಂಗರಾಜು, ಮಿರ್ಲೆ ಪನೀಶ್, ರಾಕೇಶ್, ನಂದೀಶ್ ನಾಯಕ್, ಎಸ್ ಎನ್ ರಾಜೇಶ್ ಹಾಗೂ ಇನ್ನಿತರರು ಭಾಗಿಯಾಗಿದ್ದರು

See also  ಪದ್ಮಭೂಷಣದಿಂದ ನನಗೆ ಸಂತೋಷವಾಗಿದೆ; ಸಾಹಿತಿ ಎಸ್.ಎಲ್.ಭೈರಪ್ಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು