News Kannada
Friday, September 22 2023
ಮೈಸೂರು

ಮೈಸೂರು: ರೌಡಿಶೀಟರ್‌ಗಳ ಗಲಾಟೆಯಲ್ಲಿ ಒಬ್ಬ ಸಾವು

Ullal: Man commits suicide by pouring petrol
Photo Credit : By Author

ಮೈಸೂರು: ಎರಡು ರೌಡಿ ಶೀಟರ್‌ಗಳ ಗುಂಪಿನ ನಡುವೆ ನಡೆದ ಗಲಾಟೆಯಲ್ಲಿ ಓರ್ವ ರೌಡಿ ಶೀಟರ್ ಕೊಲೆಯಾಗಿದ್ದರೆ, ಮತ್ತೊಬ್ಬ ರೌಡಿಶೀಟರ್ ಗಾಯಗೊಂಡಿರುವ ಘಟನೆ ನಡೆದಿದೆ.

ಕೊಲೆಯಾದ ರೌಡಿ ಶೀಟರ್ ಶ್ರೀಗಂಧ ಎಂದು ಗುರುತಿಸಲಾಗಿದ್ದು, ಈತ ಲಕ್ಷ್ಮೀಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಆಗಿದ್ದ. ಗಲಾಟೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ರೌಡಿಶೀಟರ್ ರವಿ, ಈತನ ಸ್ನೇಹಿತರಾದ ಮುಜೀಬ್ ಹಾಗೂ ಹರೀಶ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ರವಿ ಕೆ.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದಾನೆ. ಕೊಲೆ ಪ್ರಕರಣದ ಕುರಿತು ಕೆಆರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.

ಕೆಆರ್ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎಸ್.ಇ.ಗಂಗಾಧರ್ ಸ್ವಾಮಿ ನೇತೃತ್ವದಲ್ಲಿ ನಡೆದ ಈ ಪತ್ತೆ ಕಾರ್ಯದಲ್ಲಿ ಇನ್ಸ್‌ಪೆಕ್ಟರ್ ಮಹೇಶ್ ಹಾಗೂ ಇತರ ಅಧಿಕಾರಿ ಮತ್ತು ಸಿಬ್ಬಂದಿ ಇದ್ದರು.

See also  ಮೈಸೂರು: ಹೆಚ್.ಡಿ.ಕೋಟೆಯಲ್ಲಿ ಮಳೆಯಿಂದಾಗಿ ಜಲಾಶಯಗಳಿಗೆ ಜೀವ ಕಳೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು