News Kannada
Wednesday, June 07 2023
ಮೈಸೂರು

ಅಭಿವೃದ್ಧಿಯಲ್ಲಿ ಕೆ.ಆರ್.ಕ್ಷೇತ್ರ ರಾಜ್ಯದಲ್ಲಿಯೇ ಪ್ರಥಮ: ರಾಮದಾಸ್

K.R. Constituency first in development in the state: Ramdas
Photo Credit : By Author

ಮೈಸೂರು: ಅಭಿವೃದ್ಧಿ ವಿಚಾರದಲ್ಲಿ ಕೆ.ಆರ್.ಕ್ಷೇತ್ರ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದು, ಮಾದರಿ ಕ್ಷೇತ್ರ ಎನಿಸಿಕೊಂಡಿರುವ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ಸಾಕಷ್ಟು ಯೋಜನೆಗಳು ಅನುಷ್ಠಾನಗೊಂಡಿದ್ದರೂ ಇನ್ನೂ ಮಾಡಬೇಕಾದ ಹತ್ತು ಹಲವು ಕೆಲಸಗಳಿವೆ. ಆ ಕಾರಣಕ್ಕಾಗಿ ಮತ್ತೊಮ್ಮೆ ನನಗೆ ಆಶೀರ್ವದಿಸಿ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದ್ದಾರೆ.

ಕೃಷ್ಣರಾಜ ವಿಧಾನಸಭಾಕ್ಷೇತ್ರ ವ್ಯಾಪ್ತಿಯ 48 ವಾರ್ಡಿನ ಜಯನಗರದ ರಾಮಮಂದಿರದಲ್ಲಿ ಆಯೋಜಿಸಲಾಗಿದ್ದ ಯೋಗಕ್ಷೇಮ ಯಾತ್ರೆಯಲ್ಲಿ ಮಾತನಾಡಿದ ಅವರು,. ಅಭಿವೃದ್ಧಿ ವಿಚಾರದಲ್ಲಿ ಕೆ.ಆರ್.ಕ್ಷೇತ್ರ ರಾಜ್ಯದಲ್ಲಿಯೇ ಮೊದಲಾಗಿದೆ. ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸಾರ್ವಜನಿಕವಾಗಿ ಹೇಳಿದ್ದಾರೆ. ಈ ಮಾಹಿತಿ ತಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತುಂಬಿದ ಸಮಾವೇಶದಲ್ಲಿ ಬೆನ್ನು ತಟ್ಟಿ ಆಶೀರ್ವದಿಸಿದ್ದಾರೆ ಎಂದರು.

ಏಪ್ರಿಲ್ ತಿಂಗಳಲ್ಲಿ ನಾನು ಹಾಗೂ ನಮ್ಮ ಕಾರ್ಯಕರ್ತರು ಕ್ಷೇತ್ರದ ಪ್ರತಿ ಮನೆ ಬಾಗಿಲಿಗೆ ಬರಲಿದ್ದೇವೆ. ನಿಮ್ಮ ಆಶೀರ್ವಾದ ನನಗೆ ಬೇಕಿದೆ. ಭ್ರಷ್ಟಾಚಾರ ರಹಿತ ಕ್ಷೇತ್ರ ಮಾಡುವ ಸಲುವಾಗಿ ದೇವರ ಮುಂದಿಟ್ಟ ಹತ್ತು ರೂ. ನೀಡಿ ಆಶೀರ್ವದಿಸಿ. ವೋಟು ನಿಮ್ಮದೇ, ನೋಟು ನಿಮ್ಮದೇ ಆಗಲಿ ಎಂದು ಕೋರಿದರು.

ಜಾತಿ, ಧರ್ಮ ಮೀರಿ ಈ ಕ್ಷೇತ್ರದ ಜನ ನನ್ನನ್ನು ಮನೆ ಮಗನಂತೆ ಕಂಡಿದ್ದಾರೆ, ಆಶೀರ್ವದಿಸಿದ್ದಾರೆ. ಅದರಂತೆಯೇ ನಾನು ಶಾಸಕನಾಗಿದ್ದ ಅಷ್ಟೂ ವರ್ಷಗಳ ಕಾಲ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ ಎಂದ ಅವರು, ಕಳೆದ ಐದು ವರ್ಷಗಳಲ್ಲಿ ನಡೆಯುತ್ತಿರುವ ಐದನೇ ಯೋಗಕ್ಷೇಮ ಯಾತ್ರೆ ಇದಾಗಿದೆ. ಜನರ ಕಷ್ಟಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಈ ಕಾರ್ಯಕ್ರಮ ರೂಪಿಸಲಾಗಿದೆ. ಬೋರ್ವೆಲ್ ಮುಕ್ತ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಯಶಸ್ಸು ಸಾಧಿಸಿದ್ದೇವೆ. ಮಳೆಗಾಲದಲ್ಲಿ ವಾರ್ಡಿನ ಹಲವೆಡೆ ಸಮಸ್ಯೆ ಕಾಣಿಸಿಕೊಳ್ಳುತ್ತಿತ್ತು. ಇದೀಗ ಆ ಸಮಸ್ಯೆ ಬಗೆಹರಿಸಲಾಗಿದೆ. ಹತ್ತು ಹಲವು ಯೋಜನೆಗಳನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗಿದೆ. ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗಲಾಗುತ್ತಿದೆ ಎಂದು ತಿಳಿಸಿದರು.

ಇಡೀ ಕ್ಷೇತ್ರ ಮಾದರಿ ಎಂಬುದಕ್ಕೆ ಮನುಷ್ಯರಿಗೆ ಮಾತ್ರವಲ್ಲ, ಬೀದಿ ನಾಯಿಗಳು ಹಾಗೂ ಕೋತಿಗಳು ಕೂಡ ಗೌರವಯುತ ಬದುಕು ಸಾಗಿಸಬೇಕೆನ್ನುವ ಆಶಯದಿಂದ ಅವುಗಳಿಗಾಗಿ ಸುಸಜ್ಜಿತವಾದ ಪುನರ್ವಸತಿ ಕೇಂದ್ರ ಸ್ಥಾಪಿಸಲಾಗಿದೆ. ಇದೇ ತಿಂಗಳ ೨೫ರಂದು ನಾಯಿಗಳ ಪುನರ್ವಸತಿ ಕೇಂದ್ರ ಲೋಕಾರ್ಪಣೆ ಆಗಲಿದೆ ಎಂದು ಹೇಳಿದರು.

ಕ್ಷೇತ್ರದಲ್ಲಿರುವ ತುಳಸೀದಾಸ್ ದಾಸಪ್ಪ ಆಸ್ಪತ್ರೆ ಹಾಗೂ ಜಯನಗರ ಆಸ್ಪತ್ರೆ ಇಂದು ಯಾವುದೇ ಖಾಸಗಿ ಆಸ್ಪತ್ರೆಗೆ ಸರಿಸಾಟಿಯಾಗಿ ನಿರ್ಮಿಸಲಾಗಿದೆ. ನಿರೀಕ್ಷೆ ಮೀರಿದ ಸೇವೆ ದೊರೆಯುತ್ತಿದೆ. ಪರಿಣಾಮ, ಜಯನಗರ ಆಸ್ಪತ್ರೆಗೆ ಕೇಂದ್ರ ಸರ್ಕಾರದಿಂದ 36 ಲಕ್ಷ ರೂಪಾಯಿ ಬಹುಮಾನ ಬಂದಿದೆ. ಅದು ಒಂದು ದಾಖಲೆಯಾಗಿದೆ ಎಂದು ತಿಳಿಸಿದರು.

ಅಂದುಕೊಂಡಂತೆ ಕಳೆದ ಐದು ವರ್ಷಗಳಲ್ಲಿ ಗರಿಷ್ಠ ಪ್ರಮಾಣದ ಕಾರ್ಯಯೋಜನೆ ರೂಪಿಸಿ ಅನುಷ್ಠಾನ ಮಾಡುವ ಮೂಲಕ ರಾಜ್ಯದಲ್ಲಿಯೇ ನಂಬರ್ ಒನ್ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನಿಮ್ಮೆಲ್ಲರ ವಿಶ್ವಾಸ, ಪ್ರೀತಿ, ಸಹಕಾರವೇ ಕಾರಣವಾಗಿದೆ. ಇಡೀ ಕ್ಷೇತ್ರವನ್ನು ಬೋರ್ವೆಲ್ ಮುಕ್ತ ಮಾಡಲಾಗಿದೆ. 482 ಕಿಮೀ ರಸ್ತೆಯನ್ನು ಸಂಪೂರ್ಣವಾಗಿ ಡಾಂಬರೀಕರಣ ಮಾಡಲಾಗಿದೆ. ರಾಜಕಾಲುವೆ, ಯುಜಿಡಿ, ಮಳೆ ನೀರಿನ ವ್ಯವಸ್ಥೆಯನ್ನು ಸರಿಪಡಿಸಲಾಗಿದೆ ಎಂದರು.

See also  ಮೈಸೂರು: 42 ನಿಮಿಷಗಳ ಕಾಲ ಸೂರ್ಯನನ್ನು ಬರಿ ಕಣ್ಣುಗಳಿಂದ ನೋಡಿದ ಯೋಗಾಸಕ್ತ

ಈ ಯೋಗಕ್ಷೇಮ ಯಾತ್ರೆಯ ಮೂಲಕ ದೇಶ ಹಾಗೂ ರಾಜ್ಯದ ಎಲ್ಲಾ ವಿಚಾರವನ್ನು ಜನಸಾಮಾನ್ಯರ ಮುಂದೆ ಇಡುವ ಕೆಲಸ ನಡೆದಿದೆ. ಈ ವೇಳೆ ಜನರ ಪ್ರೀತಿ ವಿಶ್ವಾಸ ನಿರೀಕ್ಷೆಗೂ ಮೀರಿ ಲಭಿಸಿದೆ. ಅದನ್ನು ನಮಗೆ ನಂಬಲಿಕ್ಕೆ ಆಗುತ್ತಿಲ್ಲ. ಜಾತಿ ಮೀರಿ ಅಭಿವೃದ್ಧಿ ಮಂತ್ರದ ಆಧಾರದ ಮೇಲೆಯೇ ಕೃಷ್ಣರಾಜ ಕ್ಷೇತ್ರದ ಜನ ನನ್ನನ್ನು ನೋಡುತ್ತಿರುವುದು ನನಗೆ ಹೆಚ್ಚಿನ ಸಂತೋಷ ತಂದಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು