News Kannada
Sunday, June 04 2023
ಮೈಸೂರು

ನಂಜನಗೂಡು: ಹಳೇ ದ್ವೇಷದ ಹಿನ್ನೆಲೆ, ತಂದೆ ಮಗನ ಮೇಲೆ ಮಾರಣಾಂತಿಕ ಹಲ್ಲೆ

Kadaba: Student collapses, dies in Renjiladi
Photo Credit : Pexels

ನಂಜನಗೂಡು: ಹಳೇ ದ್ವೇಷದ ಹಿನ್ನೆಲೆಯಲ್ಲಿ ತಂದೆ ಮಗನ ಮೇಲೆ 7 ಜನರು ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿದೆ. ಗ್ರಾಮದ ಗುರುಸಿದ್ದಯ್ಯ ಮತ್ತು ಮಹೇಶ್ ಎನ್ನುವ ತಂದೆ ಮಗನ ಮೇಲೆ ಹಳೇ ದ್ವೇಷದ ಹಿನ್ನೆಲೆಯಲ್ಲಿ ಗ್ರಾಮದ 7 ಜನರ ಗುಂಪೊಂದು ಮಚ್ಚಿನಿಂದ ಹಲ್ಲೆ ನಡೆಸಿದೆ. ಗುರುಸಿದ್ದಯ್ಯ ಎಂಬುವವರಿಗೆ ಮಚ್ಚಿನಿಂದ ತಲೆಗೆ ಬಲವಾಗಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಮಹೇಶ್ ಎನ್ನುವ ವ್ಯಕ್ತಿಗೆ ಮಚ್ಚಿನಿಂದ ತಲೆ ಮತ್ತು ಕೈಗೆ ಹೊಡೆದು ಹಲ್ಲೆ ನಡೆಸಿದ್ದಾರೆ. ಇದರಿಂದ ತಂದೆ ಮತ್ತು ಮಗ ಇಬ್ಬರೂ ಗಂಭೀರವಾಗಿ ಗಾಯಗೊಂಡು ನಂಜನಗೂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮದ ಸಿದ್ದರಾಜು, ಮೂರ್ತಿ, ನಾಗೇಶ್, ಸಿದ್ದು, ಕೆಂಪ, ಬಸವ, ಪ್ರವೀಣ ಎಂಬುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಂದು ಗುರುಸಿದ್ದಯ್ಯ ಮತ್ತು ಮಹೇಶ್ ನೀಡಿರುವ ದೂರಿನ ಮೇರೆಗೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣವನ್ನು ದಾಖಲು ಮಾಡಿಕೊಂಡುವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

See also  ಮೈಸೂರು| ಪೌರಕಾರ್ಮಿಕರ ಮುಷ್ಕರ: ವಿಲೇವಾರಿಯಾಗದ ಸಾವಿರ ಟನ್ ಕಸ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು