News Kannada
Saturday, June 03 2023
ಮೈಸೂರು

ನಂಜನಗೂಡಿನಲ್ಲಿ ಭಾರಿ ಜನಸ್ತೋಮದೊಂದಿಗೆ ಶಾಸಕ ಬಿ. ಹರ್ಷವರ್ಧನ್ ನಾಮಪತ್ರ ಸಲ್ಲಿಕೆ

With a huge crowd in Nanjangud, MLA B. Harsh Vardhan files nomination papers
Photo Credit : News Kannada

ಮೈಸೂರು: ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹಾಲಿ ಶಾಸಕ ಬಿ. ಹರ್ಷವರ್ಧನ್ ನಾಮಪತ್ರ ಸಲ್ಲಿಸಿದರು.

ನಂಜನಗೂಡು ಪಟ್ಟಣದ ಚಿಂತಾಮಣಿ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ನಂಜನಗೂಡು- ಗುಂಡ್ಲುಪೇಟೆ ಮುಖ್ಯರಸ್ತೆಯಲ್ಲಿ ಕಾಲ್ನಡಿಗೆಯಿಂದ ತಾಲೂಕು ಆಡಳಿತ ಭವನಕ್ಕೆ ಆಗಮಿಸಿ ಚುನಾವಣಾ ಅಧಿಕಾರಿ ಕೃಷ್ಣಮೂರ್ತಿಯವರಿಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದರು.ಅಪಾರ ಜನಸ್ತೋಮದೊಂದಿಗೆ ತಾಲೂಕು ಆಡಳಿತ ಭವನದವರೆಗೆ ಕಾರ್ಯಕರ್ತರೊಂದಿಗೆ ಬೃಹತ್ ಕಾಲ್ನಡಿಗೆಯಲ್ಲಿ ಜಯ ಘೋಷ ಕೂಗಿ ಪಕ್ಷದ ಕಾರ್ಯಕರ್ತರು ಹರುಷ ವ್ಯಕ್ತಪಡಿಸಿದರು.

ಎರಡನೇ ಬಾರಿಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ನಾಮ ನಿರ್ದೇಶನ ಮಾಡಿ ಬಳಿಕ ಶಾಸಕ ಹರ್ಷವರ್ಧನ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು, ನಂಜನಗೂಡು ಕ್ಷೇತ್ರದಲ್ಲಿ 823 ಕೋಟಿ ಅನುದಾನ ತಂದು ಅಭಿವೃದ್ಧಿಪಡಿಸಿದ್ದೇನೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತ ಸಂದರ್ಭದಲ್ಲಿ ಎಂದು ಕಂಡರಿಯದ ಅಭಿವೃದ್ಧಿ ಆಗಿದೆ. ತಾಲೂಕಿನಲ್ಲಿ ನಾನು ಮಾಡಿರುವ ಉತ್ತಮ ಕೆಲಸ ಕಾರ್ಯವೈಖರಿಯನ್ನು ಪರಿಗಣಿಸಿ ಮತ್ತೆ ನನ್ನನ್ನು ಮರು ಆಯ್ಕೆ ಮಾಡಲು ಮತದಾರರು ತೀರ್ಮಾನಿಸಿದ್ದಾರೆ. ಮತ್ತೊಮ್ಮೆ ಕಮಲ ಅರಳಿಸುತ್ತೇನೆ.

ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಅನುಕಂಪ ಎಂದಿಗೂ ನಡೆಯುವುದಿಲ್ಲ. ಕ್ಷೇತ್ರದ ಮತದಾರರು ಅಭಿವೃದ್ಧಿಯನ್ನು ಮನಗಂಡು ಅನುಕಂಪದ ಕಡೆ ಯಾವುದೇ ಕಾರಣಕ್ಕೂ ಒಲವು ತೋರುವುದಿಲ್ಲ ಎಂಬ ನಂಬಿಕೆ ಇದೆ. ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಜೊತೆ ಒಪ್ಪಂದ ಮಾಡಿಕೊಂಡು ಅನುಕಂಪದ ಹೆಸರೇಳಿ ಕೈ ಜೊತೆ ಸೇರಿದ್ದಾರೆ. ಇದು ಒಂದು ಪ್ರಾದೇಶಿಕ ಪಕ್ಷಕ್ಕೆ ನಾಚಿಕೆಯ ಸಂಗತಿ ಎಂದು ಕಿಡಿಕಾರಿದರು. ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂಬ ನಂಬಿಕೆ ಇದೆ ಎಂದರು.

ಈ ಸಂದರ್ಭದಲ್ಲಿ ಕುಂಬರಹಳ್ಳಿ ಸುಬ್ಬಣ್ಣ ಹೊರಳವಾಡಿ ಮಹೇಶ್, ಬಾಲಚಂದ್ರ, ಚಿಕ್ಕರಂಗನಾಯಕ ಸೇರಿದಂತೆ ಅನೇಕ ಮುಖಂಡರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

See also  ಬೆಳ್ತಂಗಡಿ: ಕೆಂಪೇಗೌಡ ಜಯಂತಿಯ ಆಚರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು