News Kannada
Saturday, September 23 2023
ಕ್ಯಾಂಪಸ್

ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

A grand welcome to the students who arrived at the school
Photo Credit : By Author

ಮೈಸೂರು: ಶಾಲೆಗಳು ಆರಂಭಗೊಂಡ ಹಿನ್ನಲೆಯಲ್ಲಿ ಮೊದಲ ದಿನವಾದ ಬುಧವಾರ ನಗರದ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹೂವು ಎರಚಿ, ಸಿಹಿ ನೀಡಿ ಸ್ವಾಗತಿಸಲಾಯಿತು.

ಮೊದಲ ದಿನವಾದುದರಿಂದ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸರ್ವ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಶಾಲೆಯನ್ನು ತಳಿರು ತೋರಣ ಕಟ್ಟಿ ಹೂವುಗಳಿಂದ ಅಲಂಕರಿಸಿ, ಆವರಣವನ್ನು ರಂಗೋಲಿಯ ಚಿತ್ತಾರದೊಂದಿಗೆ ಸಿಂಗರಿಸಲಾಗಿತ್ತು..ವಿದ್ಯಾರ್ಥಿಗಳು ನಗುಮೊಗದಿಂದ ಶಾಲೆಯತ್ತ ಬರುತ್ತಿದ್ದಂತೆಯೇ ಶಾಲಾ ದ್ವಾರದಲ್ಲಿ ಶಿಕ್ಷಕರು ಹೂ ಹಿಡಿದು ನಿಂತು ವಿದ್ಯಾರ್ಥಿಗಳಿಗೆ ಆರತಿ ಎತ್ತಿ, ಹಣೆಗೆ ತಿಲಕವಿಟ್ಟು, ಹೂವು ನೀಡಿ, ಸಿಹಿ ಹಾಗೂ ಪಠ್ಯಪುಸ್ತಕ ಹಂಚುವ ಮೂಲಕ ಶಾಲೆಗೆ ಸ್ವಾಗತಿಸಿದರು.

ಈ ವೇಳೆ ಮಾತನಾಡಿದ ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ಅವರು, ಮಕ್ಕಳು ಸಂತೋಷ ಹಾಗೂ ಖುಷಿಯಿಂದ ಶಾಲೆಗೆ ಆಗಮಿಸಬೇಕು. ಶಿಕ್ಷಕರು ಕೂಡ ಮಕ್ಕಳ ಎಳೆ ಮನಸ್ಸನ್ನು ಅರಿತುಕೊಂಡು ವಿದ್ಯಾದಾನ ಮಾಡಬೇಕು, ಮಕ್ಕಳು ಸಂಪೂರ್ಣವಾಗಿ ವಿದ್ಯಾರ್ಜನೆಯಲ್ಲಿ ತೊಡಗಿಸಿಕೊಳ್ಳಬೇಕು, ಬಾಹ್ಯ ಆಕರ್ಷಣೆಗಳಿಗೆ ಒಳಗಾಗಬಾರದು, ವಿದ್ಯೆ ಜೊತೆ ಸಂಸ್ಕೃತಿ ಕಲೆಯನ್ನು ಹವ್ಯಾಸವನ್ನಾಗಿ ಮಾಡಿಕೊಳ್ಳಬೇಕು. ಆಗ ಜೀವನ ಪರಿಪೂರ್ಣವಾಗುತ್ತದೆ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಚಿನ್ನ ಬೆಳ್ಳಿ ವ್ಯಾಪಾರ ಸಂಘದ ಅಧ್ಯಕ್ಷರಾದ ಸುರೇಶ್ ಗೋಲ್ಡ್, ಭೈರತಿ ಲಿಂಗರಾಜು, ಎಸ್‌ ಎನ್ ರಾಜೇಶ್, ಶಾಲೆಯ ಮುಖ್ಯ ಶಿಕ್ಷಕರಾದ ಸುಗುಣಾವತಿ, ಶಿವಯ್ಯ, ಶಿಲ್ಪ, ನಾಗರತ್ನ ಹಾಗೂ ಶಿಕ್ಷಕ ವೃಂದ ಹಾಜರಿದ್ದರು.

See also  ಉಡುಪಿ: ಮತದಾನ ಮಾಡಿದ ರಕ್ಷಿತ್‌ ಮದುವೆ ಬಗ್ಗೆ ಹೇಳಿದ್ದೇನು ನೋಡಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು