News Karnataka Kannada
Friday, April 19 2024
Cricket
ಮೈಸೂರು

ದರ್ಶನ್ ಧ್ರುವನಾರಾಯಣ್ ಅವರಿಗೆ 25ಕ್ಕೂ ಹೆಚ್ಚು ವಕೀಲರ ಬೆಂಬಲ: ಜಗದೀಶ್

Darshan Dhruvanarayan has the support of more than 25 lawyers: CM Jagadish
Photo Credit : News Kannada

ನಂಜನಗೂಡು: ದರ್ಶನ್ ಧ್ರುವನಾರಾಯಣ್ ಅವರಿಗೆ 25ಕ್ಕೂ ಹೆಚ್ಚು ವಕೀಲರು ಬೆಂಬಲ ನೀಡುತ್ತೇವೆ ಎಂದು ವಕೀಲ ಹಾಗೂ ಬಾರ್ ಕೌನ್ಸಿಲ್ ಸದಸ್ಯ ಸಿಎಂ ಜಗದೀಶ್ ಹೇಳಿದರು.

ನಂಜನಗೂಡು ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ನಂಜನಗೂಡು ವಿಧಾನಸಭಾ ಕ್ಷೇತ್ರ ತನ್ನದೇ ಆದ ಇತಿಹಾಸವನ್ನು ಹೊಂದಿದೆ‌. ನಂಜನಗೂಡು ಕ್ಷೇತ್ರದಲ್ಲಿ ಜನರಕ ಬದಲಾವಣೆ ಬಯಸುತ್ತಿದ್ದಾರೆ. ಈ ಚುನಾವಣೆ ಗಂಭೀರವಾಗಿದೆ.

ದರ್ಶನ್ ಒಂದೇ ತಿಂಗಳಲ್ಲಿ ತಂದೆ ಮತ್ತು ತಾಯಿ ಇಬ್ಬರನ್ನು ಕಳೆದುಕೊಂಡಿದ್ದಾರೆ. ದರ್ಶನ್ ಅನಿವಾರ್ಯ ಅಭ್ಯರ್ಥಿಯಾಗಿ ನಮ್ಮ ಮುಂದೆ ಬಂದು ನಿಂತಿದ್ದಾರೆ. ಬಿಜೆಪಿ ಸರ್ಕಾರಗಳ ಆಡಳಿತವನ್ನು ಜನರು ಗಮನಿಸಿದ್ದಾರೆ. ಈಗಿನ ಬಿಜೆಪಿ ಸರ್ಕಾರದ ಆಡಳಿತ ಹೇಗಿದೆ ಎಂಬುದನ್ನು ಜನರು ತಿಳಿಯಬೇಕು‌. ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಎಲ್ಲಾ ಜಾತಿ ಜನಾಂಗದ ಸಮುದಾಯದವರೆಗೂ ನ್ಯಾಯವನ್ನು ಒದಗಿಸಿದ್ದಾರೆ.

ಧ್ರುವನಾರಾಯಣ್ ಅವರು ಕೂಡ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಪಡಿಸಿದವರು. ತಂದೆಯಂತೆಯೇ ಪ್ರಾಮಾಣಿಕವಾಗಿರುವ ದರ್ಶನ್ ಅವರನ್ನು ಈ ಬಾರಿ ಜನರು ಬೆಂಬಲಿಸಬೇಕು. ದರ್ಶನ್ ರವರನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಬೇಕು. ಈ ನಿಟ್ಟಿನಲ್ಲಿ 25ಕ್ಕೂ ಹೆಚ್ಚು ವಕೀಲರು ಅವರಿಗೆ ಬೆಂಬಲವನ್ನು ಸೂಚಿಸಿದ್ದೇವೆ. ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ತಂಡಗಳನ್ನು ರಚನೆ ಮಾಡಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲವನ್ನು ಸೂಚಿಸಿದ್ದೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಕೀಲರಾದ ಕಾಂತರಾಜ್, ಸುರೇಶ್ ಪಾಳ್ಯ, ಬಚ್ಚೇಗೌಡ, ಚರಣ್ ಸೇರಿದಂತೆ ವಕೀಲರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು