ನಂಜನಗೂಡು: ನಗರದ ನೀಲಕಂಠನಗರ ಬಡಾವಣೆಯಲ್ಲಿ ಹುಟ್ಟುಹಬ್ಬ ಆಚರಣೆಯಲ್ಲಿ ನಿರತರಾಗಿದ್ದ ವೇಳೆ ನಿನ್ನೆ ರಾತ್ರಿ ಎರಡು ಕೋಮಿನ ನಡುವೆ ಘಷ೯ಣೆ ನಡೆದು ಇಬ್ಬರು ಯುವಕರಿಗೆ ಡ್ರ್ಯಾಗರ್ ನಿಂದ ಇರಿದು ಗಂಭೀರವಾಗಿ ಗಾಯಗಳಾಗಿದ್ದು, ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ದಾಖಲಾಗಿರುವ ವಿಚಾರ ತಿಳಿದು ಇಂದು ಮಾಜಿ ಶಾಸಕ ಬಿ ಹರ್ಷವರ್ಧನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ತಿಳಿದ ತಕ್ಷಣ ಸಂಬಂಧ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಗಲಾಟೆ ನಡೆದಿರುವ ಸುತ್ತ ಮತ್ತಲ ಪ್ರದೇಶದಲ್ಲಿ ಪೊಲೀಸ್ ಕಾವಲಿರಿಸುವಂತೆ ಹಾಗೂ ತಪ್ಪಿತಸ್ಥರ ವಿರುದ್ದ ಸೂಕ್ತ ರೀತಿಯ ಕಾನೂನು ಕ್ರಮ ಜರುಗಿಸುವಂತೆ ಮಾಜಿ ಶಾಸಕ ಬಿ ಹರ್ಷವರ್ಧನ್ ಪೊಲೀಸ ಅಧಿಕಾರಿಗಳಿಗೆ ಸೂಚಿಸಿದರು
ನಂಜನಗೂಡು ತಾಲ್ಲೂಕಿನ ಜನರೇ ಕ್ಷುಲ್ಲಕ ಕಾರಣಗಳು, ವದಂತಿಗಳು ಹಾಗೂ ಸಣ್ಣ ಪುಟ್ಟ ವಿಚಾರಗಳಿಗಾಗಿ ಸಾಮಾಜಿಕ ಸಾಮರಸ್ಯವನ್ನು ಹಾಳು ಮಾಡಿಕೊಳ್ಳದಂತೆ ಮನವಿ ಮಾಡಿದರು.