ಮೈಸೂರು: ಒಡಿಶಾದ ಬಾಲಾಸೋರ್ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 280ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ದುಃಖ ತಂದಿದೆ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಮತ್ತು ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಯುವ ಭಾರತ್ ಸಂಘಟನೆ ಹಾಗೂ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ಟಿ ಕೆ ಲೇಔಟ್ ನಲ್ಲಿರುವ ಮಾರುತಿ ವೃತ್ತದಲ್ಲಿ ಮೇಣದಬತ್ತಿ ಬೆಳಗಿಸಿ ಸಂತಾಪ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಯುವ ಭಾರತ್ ಸಂಘಟನೆಯ ಅಧ್ಯಕ್ಷರಾದ ಜೋಗಿ ಮಂಜು, ಬಿಜೆಪಿ ಮಾಧ್ಯಮ ಸಾಹಸಂಚಾಲಕರಾದ ಪ್ರದೀಪ್ ಕುಮಾರ್, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷರಾದ ಕಡಕೋಳ ಜಗದೀಶ್ ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್, ಭೈರತಿ ಲಿಂಗರಾಜು, ಕಿಶೋರ್, ಪಚ್ಚು, ಸಂದೀಪ್, ಕಿಶೋರ್, ಟಿ ಎಸ್ ಅರುಣ್, ರಂಗನಾಥ್, ಸತ್ಯನಾರಾಯಣ ವಿಟ್ಟು, ಚಂದ್ರಪ್ಪ, ಹಾಗೂ ಇನ್ನಿತರರು ಸಂತಾಪ ಸಭೆಯಲ್ಲಿ ಭಾಗವಹಿಸಿದ್ದರು