ಮೈಸೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಒಸಮಾ ಬಿನ್ ಲಾಡೆನ್, ಮುಲ್ಲಾ ಉಮಾರ್ ನೇತೃತ್ವದ ತಾಲಿಬಾನ್ ಸರ್ಕಾರ ರಚನೆಯಾಗುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭಜರಂಗಿ ಬಗ್ಗೆ ಮಾತಾಡುವ ಕಾಂಗ್ರೆಸ್ಸಿಗರ ನವರಂಗಿ ಆಟ ಜನರಿಗೆ ಗೊತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಒಸಮಾ ಬಿನ್ ಲಾಡೆನ್, ಮುಲ್ಲಾ ಉಮಾರ್ ನೇತೃತ್ವದ ತಾಲಿಬಾನ್ ಸರ್ಕಾರ ರಚನೆ ಆಗುತ್ತದೆ. ಘಜ್ನಿ ಮೊಹಮ್ಮದ್, ಟಿಪ್ಪು ಸುಲ್ತಾನ್ ವೈಭವೀಕರಿಸುವ ಪಠ್ಯ ಬರುತ್ತದೆ ಎಂದು ತಿಳಿಸಿದರು.
ಪಿಎಫ್ಐ ಸತ್ತ ಹಾವು. ಪಿಎಫ್ಐ ಬ್ಯಾನ್ ತೆಗೆದು ಬಜರಂಗದಳವನ್ನು ಬ್ಯಾನ್ ಮಾಡುತ್ತಾರೆ. ಸೀತೆ ಹುಡುಕಿಕೊಂಡು ಹೋದ ಭಜರಂಗಿ ರಾಮನಿಗಾಗಿ ಪರ್ವತವನ್ನೇ ಎತ್ತಿ ಕೊಂಡು ಬಂದ. ಕರ್ನಾಟಕದ ಭಜರಂಗಿಗಳು ಹಿಂದುತ್ವಕ್ಕಾಗಿ ಗೋ ಮಾತೆಗಾಗಿ ಅದೇ ಪರ್ವತದಡಿ ಕಾಂಗ್ರೆಸ್ ಪಕ್ಷವನ್ನು ಹಾಕಿ ಹೊಸಕಿ ಹಾಕುತ್ತಾರೆ. ಎಚ್ಚರಿಕೆಯಿಂದ ಮಾತನಾಡಿ ಎಂದು ಹೇಳಿದರು.