News Karnataka Kannada
Saturday, April 27 2024
ಮೈಸೂರು

ಮೈಸೂರು: ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್‌ನಿಂದ ಅನುಪಯುಕ್ತ ವಸ್ತು ಹಸ್ತಾಂತರ

Mysuru: KMPK Charitable Trust hands over unused material
Photo Credit : By Author

 

ಮೈಸೂರು: ಹಳೆ ವಸ್ತುಗಳನ್ನು ಮರು ಬಳಕೆ ಮಾಡುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ಆರಂಭಿಸಿರುವ ‘ನನ್ನ ಜೀವನ ನನ್ನ ಸ್ವಚ್ಛ ನಗರ’ ಎಂಬ ವಿಶೇಷ ಅಭಿಯಾನಕ್ಕೆ ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಅನುಪಯುಕ್ತ ವಸ್ತುಗಳನ್ನು ಹಸ್ತಾಂತರಿಸಲಾಯಿತು.

ಪಾಲಿಕೆಯು ಮೇ 20 ರಿಂದ ಜೂನ್ 5ರ ವರೆಗೆ ಹಮ್ಮಿಕೊಂಡಿರುವ ಈ ಅಭಿಯಾನಕ್ಕೆ ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್ ಕೈ ಜೋಡಿಸಿದ್ದು ಅದರಂತೆ ಹಳೆಯ ಬಟ್ಟೆ , ನ್ಯೂಸ್ ಪೇಪರ್ ಸೇರಿದಂತೆ ಇನ್ನಿತರ ವಸ್ತುಗಳನ್ನು ಪಾಲಿಕೆಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಪಾಲಿಕೆ ಆರೋಗ್ಯಾಧಿಕಾರಿ ಡಾ. ನಾಗರಾಜು ಅವರು ವಸ್ತುಗಳನ್ನು ಸ್ವೀಕರಿಸಿ ಮಾತನಾಡಿ, ನಗರದಾದ್ಯಂತ ಪಾಲಿಕೆ 9 ವಲಯಗಳಲ್ಲಿ ಒಟ್ಟು 27 ಕಡೆಗಳಲ್ಲಿ ವಸ್ತುಗಳನ್ನು ಸಂಗ್ರಹಿಸುವ ಕೇಂದ್ರಗಳನ್ನು ತೆರೆದಿದೆ. ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಈ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ಸಾರ್ವಜನಿಕರು ಹಳೆ ಬಟ್ಟೆ, ಓದಿದ ಪುಸ್ತಕಗಳು, ಹಳೆಯ ಆಟಿಕೆಗಳು, ಹಳೆಯ ಬೈಸಿಕಲ್, ಹಳೆಯ ನ್ಯೂಸ್ ಪೇಪರ್‌ಗಳನ್ನು ನೀಡಿದರೆ ಅದನ್ನು ಪಾಲಿಕೆ ಸ್ವೀಕರಿಸುತ್ತದೆ. ಇಲ್ಲವೇ ನಿತ್ಯವೂ ಬೆಳಗಿನ ವೇಳೆ ಕಸ ಸಂಗ್ರಹಣೆಗೆ ಬರುವ ವಾಹನಗಳಿಗೂ ಈ ವಸ್ತುಗಳನ್ನು ನೀಡಬಹುದಾಗಿದೆ. ನಾಗರಿಕರು ಈ ಉಪಯುಕ್ತ ಯೋಜನೆಯನ್ನು ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.

ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್ ಮಾತನಾಡಿ, ನಮ್ಮ ಸಂಸ್ಥೆಯ ವತಿಯಿಂದ ನಮ್ಮ ಒಡನಾಡಿಗಳೆಲ್ಲರೂ ನೀಡಿದ ಹಳೆಯ ಬಟ್ಟೆಗಳು ಹಾಗೂ ಪುಸ್ತಕಗಳನ್ನು ಮೈಸೂರಿನ ಉತ್ತರಾದಿ ಮಠದ ಪಕ್ಕದಲ್ಲಿರುವ ಅನುಪಯುಕ್ತ ವಸ್ತುಗಳ ಸಂಗ್ರಹ ಕೇಂದ್ರಕ್ಕೆ ನೀಡಿದ್ದೇವೆ. ಇದರಿಂದ ಸಾಕಷ್ಟು ಜನಕ್ಕೆ ಅನುಕೂಲವಾಗಲಿದೆ ಪುಸ್ತಕಗಳು ಅಗತ್ಯವಿರುವವರಿಗೆ ಬಳಕೆಯಾಗುತ್ತದೆ. ಹೀಗಾಗಿ ಪಾಲಿಕೆಯು ಜನರ ಸಂಕಷ್ಟಕ್ಕೆ ಸ್ಪಂದಿಸುವ ಪರಿಸರ ಸ್ನೇಹಿಯಾದ ವಿಶೇಷ ಅಭಿಯಾನಕ್ಕೆ ಕೈಜೋಡಿಸಿರುವುದು ನಮಗೆ ಅತ್ಯಂತ ತೃಪ್ತಿ ನೀಡಿದೆ ಎಂದರು.

ಈ ಅಭಿಯಾನದಿಂದ ನಗರದಲ್ಲಿ ಸಂಗ್ರಹವಾಗುವ ಕಸದ ಪ್ರಮಾಣ ಕಡಿಮೆಯಾಗುವುದಲ್ಲದೆ, ಒಂದು ಮನೆಯಲ್ಲಿ ಬಳಕೆಯಾಗದೆ ಮೂಲೆಯಲ್ಲಿ ಇರಿಸಿರುವ ವಸ್ತುಗಳು ಬೇರೊಬ್ಬರಿಗೆ ಬಳಕೆಗೆ ಬರುತ್ತವೆ. ಅಂತಹ ವಸ್ತುಗಳನ್ನು ಪಾಲಿಕೆಗೆ ಹಸ್ತಾಂತರಿಸಿದರೆ ಅವುಗಳನ್ನು ಮರು ಬಳಕೆ ಮಾಡಬಹುದಾಗಿದೆ. ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ನೀಡಿದರೆ ಬಟ್ಟೆಯ ಬ್ಯಾಗ್ ವಿತಗರಿಸಲಾಗುತ್ತದೆ. ಸಂಗ್ರಹವಾದ ಪ್ಲಾಸ್ಟಿಕ್ ಅನ್ನು ಮರು ಬಳಕೆಗೆ ನೀಡಲಾಗುತ್ತದೆ. ಇದೊಂದು ಅತ್ಯುತ್ತಮ ಸೇವಾ ಕಾರ್ಯವಾಗಿದೆ ಎಂದರು.

ವಲಯ ಕಚೇರಿಯ ಆರೋಗ್ಯ ನಿರೀಕ್ಷಕಿ ಪ್ರೀತಿ, ಸಂಚಾಲಕರಾದ ಎಸ್ ಎನ್ ರಾಜೇಶ್, ಬೈರತಿ ಲಿಂಗರಾಜು, ಮಂಜುನಾಥ್, ರವಿಚಂದ್ರ, ಹಾಗೂ ಇನ್ನಿತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು