News Karnataka Kannada
Saturday, April 20 2024
Cricket
ಮೈಸೂರು

ಮೈಸೂರು: ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ

Mysuru: Students, your future is in your hands
Photo Credit : News Kannada

ಮೈಸೂರು: ಸರ್ಕಾರ ವಿದ್ಯಾರ್ಥಿನಿಲಯದ ಶಿಕ್ಷಣಕ್ಕಾಗಿ ಕೋಟ್ಯಂತರ ರೂ. ಖರ್ಚು ಮಾಡುತ್ತಿದ್ದು, ನೀವು ಚೆನ್ನಾಗಿ ಓದಿ ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಜವಾಬ್ದಾರಿ ನಿಮ್ಮ ಕೈಯಲ್ಲಿಯೇ ಇದೆ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ತಿಳಿಸಿದರು.

ಬೋಗಾದಿಯಲ್ಲಿರುವ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮೈಸೂರು ಜಿಲ್ಲೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮುಟ್ಟಿನ ಕಪ್ ಬಳಕೆ, ಮಹಿಳಾ ಆರೋಗ್ಯ ಮತ್ತು ಪರಿಸರ ಸಂರಕ್ಷಣೆ ಕುರಿತ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನೀವೆಲ್ಲರೂ ಕಷ್ಟದಿಂದ, ಬಡತನದಿಂದ ದೂರದ ಊರುಗಳಿಂದ ಬಂದಿದ್ದೀರಿ. ನಿಮ್ಮ ತಂದೆ ತಾಯಂದಿರು ನಿಮ್ಮ ಭವಿಷ್ಯ ರೂಪಿಸಲು ಹಾಸ್ಟೆಲ್‌ಗಳಿಗೆ ಕಳಿಸಿದ್ದಾರೆ. ಆದ್ದರಿಂದ ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಜವಾಬ್ದಾರಿ ಹೆಚ್ಚಿದೆ. ನೀವೆಲ್ಲರೂ ಚೆನ್ನಾಗಿ ಓದಬೇಕು. ಈ ಕಾರ್ಯಕ್ರಮದ ಸದುಪಯೋಗವನ್ನು ಉಪಯೋಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಡಾ. ಸುಮಾ ಮಾತನಾಡಿ ವಿದ್ಯಾರ್ಥಿನಿಯರು ಮುಟ್ಟಿನ ಕಪ್ ಹೇಗೆ ಬಳಸಬೇಕು. ಅದರಿಂದ ಆಗುವ ಅನುಕೂಲ ಹಾಗೂ ಪಿಸಿಒಡಿ ಸಮಸ್ಯೆ ಬಗ್ಗೆ ವಿವರವಾಗಿ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ. ರಂಗೇಗೌಡ ಮಾತನಾಡಿ ಹೆಣ್ಣು ಈ ದೇಶದ ದೊಡ್ಡ ಶಕ್ತಿಯಾಗಿದ್ದು, ಹಳ್ಳಿಗಳನ್ನು ಬಿಟ್ಟು ಪಟ್ಟಣಕ್ಕೆ ಬಂದಿದ್ದೀರಿ. ಮುಟ್ಟು ಹೆಣ್ಣಿನ ಜೀವನದ ಜೈವಿಕ ಪ್ರಕ್ರಿಯೆಯಾಗಿದ್ದು, ಇದರ ಬಗ್ಗೆ ಯಾರೂ ಸಹ ಮುಜುಗರ ನಾಚಿಕೆಪಟ್ಟುಕೊಳ್ಳಬೇಡಿ. ಚೆನ್ನಾಗಿ ಓದಿ. ಈ ದೇಶ ಕಟ್ಟು ಪ್ರಜೆಗಳಾಗಿ. ಇದೊಂದು ಅರ್ಥಪೂರ್ಣ ಕಾರ್ಯಕ್ರಮ ಎಂದರು.

ಸಮಾರಂಭದಲ್ಲಿ ಪ್ರೊ. ರೇಖಾ, ಸಹಾಯಕ ನಿರ್ದೇಶಕ ಸಿದ್ದಲಿಂಗು, ಹಿರಿಯ ನಿಲಯಪಾಲಕರಾದ ಪವಿತ್ರ, ಸರೋಜ, ಅನುಷ ನಿರೂಪಿಸಿದರು. ತೇಜಸ್ವಿನಿ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು