News Kannada
Friday, June 02 2023
ಮೈಸೂರು

ಮೈಸೂರು: ಅಭ್ಯರ್ಥಿ ಸಿದ್ದೇಗೌಡ ಆರೋಪಗಳಲ್ಲಿ ಹುರುಳಿಲ್ಲ

Mysuru: There is no substance in the allegations levelled by candidate Siddegowda.
Photo Credit : By Author

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದೇಗೌಡ ಅವರ ಪರವಾಗಿ ನಾವು ನಿಷ್ಠೆಯಿಂದ ಕೆಲಸ ಮಾಡಿದ್ದೇವೆ. ನನ್ನ ಹಾಗೂ ನಮ್ಮ ಕಾರ್ಯಕರ್ತರ ಮೇಲೆ ವಿನಾಕಾರಣ ಆರೋಪ ಮಾಡಿದ್ದಾರೆ. ಅವರು ಮಾಡಿರುವ ಆರೋಪದಲ್ಲಿ ಯಾವುದೇ ರೀತಿಯ ಹುರುಳಿಲ್ಲ ಎಂದು ಕಾಂಗ್ರೆಸ್ ಮುಖಂಡ ಕೆ.ಮರಿಗೌಡ ತಿರುಗೇಟು ನೀಡಿದ್ದಾರೆ.

ಮಾವಿನಹಳ್ಳಿ ಸಿದ್ದೇಗೌಡ ಮಾಡಿರುವ ಆರೋಪಕ್ಕೆ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ ಅವರು, ಸಿದ್ದೇಗೌಡರಿಗೆ ಕಾಂಗ್ರೆಸ್ ಪಕ್ಷದ ಸಂಸ್ಕೃತಿಯೇ ಗೊತ್ತಿಲ್ಲ. ನಾವು ಈಗಲೂ ಸಿದ್ದೇಗೌಡರು ಗೆಲ್ಲುತ್ತಾರೆ ಎಂಬ ಭರವಸೆಯಲ್ಲಿದ್ದೇವೆ ಎಂದರು.

ನಮ್ಮ ನಾಯಕರಾದ ಸಿದ್ದರಾಮಯ್ಯನವರ ಮಾತಿನಂತೆ ಎಲ್ಲರೂ ಒಗ್ಗಟ್ಟಿನಿಂದ ಸಿದ್ದೇಗೌಡ ಪರವಾಗಿ 40 ದಿನಗಳ ಕಾಲ ಕೆಲಸ ಮಾಡಿದ್ದೇವೆ. ಕೊನೆಯ 4 ದಿನ ಅಭ್ಯರ್ಥಿ ಕಾಣೆಯಾಗಿದ್ದಾರೆ ಎಂದು ಕಾರ್ಯಕರ್ತರು ಕಸಿವಿಸಿಗೊಂಡಿದ್ದರು. ಇವರು ಯಾಕೆ ಹೀಗೆ ಮಾಡಿದರೋ ಗೊತ್ತಿಲ್ಲ. ಚುನಾವಣೆ ಎದುರಿಸಲು ಹಣದ ಕೊರತೆಯಾಗಿದ್ದರೆ ಜನರ ಬಳಿಯೇ ಸತ್ಯ ಹೇಳಬೇಕಿತ್ತು. ಅದನ್ನು ಬಿಟ್ಟು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೇಲೆ ದೂರುತ್ತಿರುವುದು ತಪ್ಪು ಎಂದು ಹೇಳಿದರು. ಈ ರೀತಿ ಚುನಾವಣಾ ಫಲಿತಾಂಶ ಹೊರಬೀಳುವ ಮೊದಲೇ ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿರುವುದು ಕಾರ್ಯಕರ್ತರಲ್ಲಿ ಅಸಮಾಧಾನ ತಂದಿದೆ ಎಂದರು.

ಇನ್ನು ಇಲವಾಲ ಹೋಬಳಿ ಹೊಸ ಕಾಮನ ಕೊಪ್ಪಲಿನ ಲಕ್ಷ್ಮೀದೇವಮ್ಮ ದೇವಸ್ಥಾನದಲ್ಲಿ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರದಿಂದ ಗೆದ್ದು ರಾಜ್ಯದ ಮುಖ್ಯಮಂತ್ರಿ ಆಗಲೆಂದು ಪೂರ್ಣಾಹುತಿ ಹೋಮದ ಪೂಜೆಯನ್ನು ಸ್ವಾಮಿ ಅವರ ನೇತೃತ್ವದಲ್ಲಿ ಮರೀಗೌಡರ ಮುಂದಾಳತ್ವದಲ್ಲಿ ಏರ್ಪಡಿಸಲಾಗಿತ್ತು.

See also  ಮೈಸೂರಿನಲ್ಲಿ ಮಾ.26ರಂದು ಪಂಚರತ್ನ ಯಾತ್ರೆ ಸಮಾರೋಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು