News Karnataka Kannada
Friday, April 26 2024
ಮೈಸೂರು

ಮಂಡ್ಯದ ಕೆರೆಯಲ್ಲಿ ನಂಜನಗೂಡು ಯುವತಿಯ ಶವ ಪತ್ತೆ

Nanjangud girl's body found in Mandya lake
Photo Credit : News Kannada

ಮೈಸೂರು: ನಂಜನಗೂಡು ತಾಲೂಕಿನ ಯುವತಿಯೊಬ್ಬಳ ಶವ ಜಿಲ್ಲೆಯ ಬೂದನೂರು ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ಚಾಂದಿನಿ (22) ಎಂಬ ಯುವತಿಯ ಶವವೆ ಕೆರೆಯಲ್ಲಿ ಪತ್ತೆಯಾಗಿರುವುದು. ಈಕೆ ನಂಜನಗೂಡು ಮೂಲದ ಯುವತಿ ಎಂದು ಗುರುತು ಪತ್ತೆಯಾಗಿದ್ದು, ಮಂಡ್ಯ ಜಿಲ್ಲೆಯ ಬೂದನೂರು ಗ್ರಾಮದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಕೆರೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರ ಬಹುದು ಎಂದು ಹೇಳಲಾಗುತ್ತಿದೆ.

ಆ ಬಳಿಕ ಯುವತಿ ತನ್ನ ಬ್ಯಾಗ್, ಚಪ್ಪಲಿಯನ್ನು ಕೆರೆಯ ದಡದಲ್ಲೇ ಬಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಸಂಜೆ ಕೆರೆ ದಡದಲ್ಲಿದ್ದ ಬ್ಯಾಗ್ ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಯುವತಿಯ ಮೃತದೇಹವನ್ನು ಕೆರೆಯಿಂದ ಮೇಲೆತ್ತಿ ಮಂಡ್ಯ ಮಿಮ್ಸ್ ಶವಗಾರಕ್ಕೆ ರವಾನೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು