News Karnataka Kannada
Thursday, March 28 2024
Cricket
ಮೈಸೂರು

ನಂಜನಗೂಡು: ಸೋಲಿನ ಹೊಣೆ ನಾನೇ ಹೊರುವೆ- ಹರ್ಷವರ್ಧನ್

Nanjangud: I will take responsibility for the defeat, says Harshavardhan
Photo Credit : News Kannada

ನಂಜನಗೂಡು: ಚುನಾವಣೆಯ ಸೋಲನ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್‌ ತಿಳಿಸಿದರು.

ಚುನಾವಣೆಯಲ್ಲಿ ಪರಾಭವಗೊಂಡ ಬಳಿಕ ಭಾನುವಾರ ನಗರದ ಬಿಜೆಪಿ ಕಚೇರಿಗೆ ಆಗಮಿಸಿದ ಅವರು, ಚುನಾವಣೆಯಲ್ಲಿ ಸೋಲು ಅಥವಾ ಗೆಲುವು ಸಾಮಾನ್ಯವಾಗಿದ್ದು, ಕಾರ್ಯಕರ್ತರು ಈ ಸೋಲಿನಿಂದ ಧೃತಿಗೆಡುವ ಅಗತ್ಯವಿಲ್ಲ ಎಂದರು.

ನಂಜನಗೂಡಿನ ಜನತೆ ಅಭಿವೃದ್ಧಿಯನ್ನು ಬದಿಗಿಟ್ಟು ಮತ ಚಲಾಯಿಸಿದ್ದಾರೆ. ಜತೆಗೆ ಪ್ರತಿಸ್ಪರ್ಧಿ ಮೇಲಿನ ಅನುಕಂಪ ಹಾಗೂ ಜಾ.ದಳದ ಬೆಂಬಲದಿಂದಾಗಿ ಕಾಂಗ್ರೆಸ್ ಗೆಲುವು ಸಾಧಿಸಲು ಸಹಕಾರಿಯಾಗಿದೆ ಎಂದು ವಿಶ್ಲೇಷಿಸಿದರು. ನಂಜನಗೂಡು ಮಾತ್ರವಲ್ಲ, ರಾಜ್ಯದೆಲ್ಲೆಡೆ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಪ್ರತಿಯೊಬ್ಬ ಫಲಾನುಭವಿಗೂ ತಲುಪಿಸಲು ಕಾಂಗ್ರೆಸ್‌ ಸರ್ಕಾರ ಮುಂದಾಗಲಿ. ನಾವು ಕೂಡ ಅವರೊಂದಿಗೆ ಕೈಜೋಡಿಸಿ ಜನರ ನೆರವಿಗೆ ನಿಲ್ಲೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು