ಮೈಸೂರು: ನಂಜನಗೂಡು ತಾಲ್ಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಪ್ರತಿ ತಿಂಗಳು ಸಾಮೂಹಿಕ ವಿವಾಹಗಳನ್ನು ನಡೆಸುತ್ತಿದ್ದು, ಎಲ್ಲಾ ವರ್ಗದವರೂ ಈ ಕಲ್ಯಾಣ ಕಾರ್ಯದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
ಮೇ 24 ರಂದು ಸುತ್ತೂರು ಶ್ರೀಕ್ಷೇತ್ರದಲ್ಲಿ ಏರ್ಪಡಿಸಿರುವ ಮಾಸಿಕ ಸಾಮೂಹಿಕ ವಿವಾಹದಲ್ಲಿ ಹರಗುರು ಚರಮೂರ್ತಿ ಗಳು, ವಧುವರರ ಬಂಧುಮಿತ್ರರು ಹಾಗೂ ಸಾರ್ವಜನಿಕರು ಭಾಗವಹಿಸಿ ನೂತನ ದಂಪತಿಳಿಗೆ ಶುಭ ಹಾರೈಸಲಿದ್ದಾರೆ.
ಈ ವಿವಾಹದಲ್ಲಿ ಭಾಗವಹಿಸುವ ವರನಿಗೆ 21 ವರ್ಷ, ವಧುವಿಗೆ 18 ವರ್ಷ ಪೂರ್ಣಗೊಂಡಿರಬೇಕು. ಅರ್ಜಿ ನಮೂನೆಯಲ್ಲಿವರ ಮತ್ತು ವಧುವಿನ ಭಾವಚಿತ್ರಗಳನ್ನು ಲಗತ್ತಿಸಿರಬೇಕು. ಜಾತಿ ದೃಢೀಕರಣ ಪತ್ರ ವಧುವರರ ವಯಸ್ಸಿನ ಬಗ್ಗೆ ಶಾಲೆಯಿಂದ ಪಡೆದ ದಾಖಲಾತಿ ಪತ್ರ ಪಡೆದ ದೃಢೀಕರಣ ಪತ್ರ ಲಗತ್ತಿಸಿರಬೇಕು. ಬಾಲ್ಯ ವಿವಾಹಕ್ಕೆ ಅವಕಾಶ ಇರುವುದಿಲ್ಲ. ಮೇ 24 ರಂದು ಮಾಸಿಕ ಸಾಮೂಹಿಕ ವಿವಾಹ ಕಾರ್ಯಕ್ರಮವಿದ್ದು, 8 ದಿನಗಳ ಮು೦ಚಿತವಾಗಿ ಆಡಳಿತಾಧಿಕಾರಿಗಳು, ಜೆಎಸ್ ಎಸ್ ಶಿಕ್ಷಣ ಸಂಸ್ಥೆಗಳು, ಸುತ್ತೂರು ಇವರನ್ನು ನೇರವಾಗಿ ಸಂಪರ್ಕಿಸಿ ಅಥವಾ ದೂ. 08221 – 232217, 232033, 97413 42222, 94490 30588 ಸಂಪರ್ಕಿಸಿ ಮಾಹಿತಿ ಪಡೆದು ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.