News Karnataka Kannada
Tuesday, April 16 2024
Cricket
ಮೈಸೂರು

ನಂಜನಗೂಡು : ಸುತ್ತೂರು ಮಠಕ್ಕೆ ನೂತನ ಸಚಿವ ಎಂ.ಬಿ ಪಾಟೀಲ್ ಭೇಟಿ

Nanjangud: New Minister M.B. Patil visits Suttur Mutt
Photo Credit : News Kannada

ನಂಜನಗೂಡು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿ ಸರ್ಕಾರ ರಚನೆಯಾಗುತ್ತಿದೆ. ಇದರ ಬೆನ್ನಲ್ಲೇ​ ಕೈ ನಾಯಕರು ಟೆಂಪಲ್​ ರನ್​ ಶುರು ಮಾಡಿದ್ದಾರೆ.

ನಂಜನಗೂಡು ತಾಲೂಕಿನ ಸುತ್ತೂರು ಮಠಕ್ಕೆ ನೂತನ ಸಚಿವ ಎಂ.ಬಿ ಪಾಟೀಲ್ ಅವರು ತಮ್ಮ ಪತ್ನಿ ಆಶಾ ಪಾಟೀಲ್ ಜೊತೆ ಭೇಟಿ ನೀಡಿ, ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. ದೇವರ ದರ್ಶನ ಪಡೆದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದರು‌ ನಂತರ ಕೆಲ ಕಾಲ ಧ್ಯಾನ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ್ದು, ಶ್ರೀಗಳ ಜೊತೆ ಮಾತುಕತೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಇಂದು ನಾನು ಶಾಸಕನಾಗಿ ಪ್ರಮಾಣ ಸ್ವೀಕರಿಸಿದ್ದೇನೆ. ಹೀಗಾಗಿ ರಾಜ್ಯದ ಸೇವೆ ಮಾಡಲು ಈ ಪುಣ್ಯಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದು ಶ್ರೀಗಳ ಆಶೀರ್ವಾದ ಪಡೆದಿದ್ದೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಎಂ ಬಿ ಪಾಟೀಲ್ ಜೊತೆ ಕಾಂಗ್ರೆಸ್​ನ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು