News Karnataka Kannada
Saturday, April 20 2024
Cricket
ಮೈಸೂರು

ಕ್ಷೇತ್ರದ ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಶಾಸಕ ದರ್ಶನ್‌ ಧ್ರುವನಾರಾಯಣ್

Quick solution to the problems of the people of the constituency
Photo Credit : News Kannada

ನಂಜನಗೂಡು: ತಾಲ್ಲೂಕಿನ ಕೂಡ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸನಾಳ, ಬಾಗೂರು, ಕೂಡ್ಲಾಪುರ, ತರದಲೆ ಗ್ರಾಮಗಳಲ್ಲಿ ಮಂಗಳವಾರ ನೂತನ ಶಾಸಕ ದರ್ಶನ್‌ ಧ್ರುವ ನಾರಾಯಣ್‌ ಅವರು ಜನಸ್ಪಂದನಾ ಹಾಗೂ ಕೃತಜ್ಞತಾ ಸಭೆ ನಡೆಸಿದರು.

ಈ ವೇಳೆ ಗ್ರಾಮಗಳ ಎಲ್ಲ ಕಾಲೊನಿಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ಭೇಟಿ ಕೊಟ್ಟು ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದರು.

ಹುಣಸನಾಳು ಗ್ರಾಮದಲ್ಲಿ ಭೇಟಿ ವೇಳೆ ಮಹಿಳೆಯರು ಹಾಗೂ ಗ್ರಾಮಸ್ಥರು, ಕುಡಿಯುವ ನೀರು, ರಸ್ತೆ ಸಮಸ್ಯೆ, ಸಮುದಾಯ ಭವನಗಳ ನಿರ್ಮಾಣ ಇನ್ನಿತರ ಮೂಲ ಸೌಕರ್ಯ ಒದಗಿಸುವಂತೆ ಮನವಿ ಮಾಡಿದರು. ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಮಾಹಿತಿ ಪಡೆದು ಸಮಸ್ಯೆ ಪರಿಹಾರಕ್ಕೆ ಶಾಸಕರು ಸೂಚಿಸಿದರು.

ನಂತರ ಹುಣಸನಾಳು ಗ್ರಾಮದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ದರ್ಶನ್ ಧ್ರುವನಾರಾಯಣ್‌ ಅವರು, ಅತ್ಯಧಿಕ ಮತಗಳನ್ನು ನೀಡಿ ನನ್ನನ್ನು ಕ್ಷೇತ್ರದ ಶಾಸಕರನ್ನಾಗಿ ಮಾಡಿದ ಕ್ಷೇತ್ರದ ಜನರಿಗೆ ಧನ್ಯವಾದ ತಿಳಿಸಿದರು.

ಶಾಸಕದ ನಂತರ ಒಂದು ಭಾಗದಿಂದ ಕ್ಷೇತ್ರದ ಎಲ್ಲ ಗ್ರಾಮಗಳಿಗೆ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಗ್ರಾಮಗಳಲ್ಲಿ ಕಂಡು ಬರುವ ಜನರ ಮೂಲಭೂತ ಸಮಸ್ಯೆಗಳಿಗೆ ಹಂತ–ಹಂತವಾಗಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕುರಟ್ಟಿ ಮಹೇಶ್, ಮುಖಂಡರಾದ ದೊರೆಸ್ವಾಮಿ ನಾಯಕ, ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷೆ ಲತಾಸಿದ್ದಶೆಟ್ಟಿ, ಪ್ರದೀಪ್, ಕರಳಪುರ ನಾಗರಾಜು,ಶಿವಕುಮಾರ್, ಯುವ ಕಾಂಗ್ರೆಸ್ ನ ಅಧ್ಯಕ್ಷ ಅಶೋಕ್, ಸೇರಿದಂತೆ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು