ನಂಜನಗೂಡು : ಕಾಂಗ್ರೆಸ್ ಈಗಾಗಲೇ ಮ್ಯಾಜಿಕ್ ನಂಬರ್ ಅನ್ನು ದಾಟುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದ್ದು, ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದರೆ ಸಿಎಂ ಯಾರು ಎಂಬುದು ಈಗೀನ ಬಹು ಮುಖ್ಯ ಪ್ರಶ್ನೆ. ಸಿಎಂ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಮುಖವಾಗಿ ಪೈಪೋಟಿಯಲ್ಲಿದ್ದಾರೆ.
ಇವರ ಜೊತೆಗೆ ದಲಿತ ಸಿಎಂ ಎನ್ನುವ ಅಂಶವೂ ಸೇರಿಕೊಂಡು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಕೂಡ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಈ ನಡುವೆ ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭರ್ಜರಿ ಅಂತರದಲ್ಲಿದ್ದು, ಗೆಲುವು ಖಚಿತವಾಗಿದೆ. ಇದರ ಬೆನ್ನಲ್ಲೆ ಸಿದ್ದರಾಮಯ್ಯ ಅಭಿಮಾನಿಯೊಬ್ಬರು ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಹೇಳಿದ್ದಾರೆ.
ಎದೆಯ ಮೇಲೆ ಸಿದ್ದರಾಮಯ್ಯ ಸಿಎಂ ಎಮದು ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಯೊಬ್ಬರು ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಆಗ್ರಹಿಸುತ್ತಿದ್ದಾರೆ. ಮೈಸೂರಿನ ಅಭಿಮಾನಿ ತಮಗೆ ಸಿದ್ದರಾಮಯ್ಯ ಮೇಲಿರುವ ಅಭಿಮಾನವನ್ನು ಈ ರೀತಿ ವ್ಯಕ್ತಪಡಿಸಿದ್ದಾರೆ.